ಗಿರಿಜನರಿಗೆ ಕಿರುಕುಳ ನೀಡುತ್ತಿಲ್ಲ : ಆಚಾರ್ಯ

ವಿಧಾನ ಪರಿಷತ್ತಿನಲ್ಲಿ ಪ್ರಕಾಶ್ ಕೆ.ರಾಥೋಡ್ ಅವರ ಪ್ರಶ್ನೆಗೆ ಉತ್ತರಿಸುತ್ತಿದ್ದ ಸಚಿವರು, ನಕ್ಸಲ್ ಚಟುವಟಿಕೆಯಲ್ಲಿ ಪಾಲ್ಗೊಂಡ ಹಾಗೂ ನಕ್ಸಲೀಯರಿಗೆ ಬಾಹ್ಯ ರೀತಿಯಲ್ಲಿ ಸಹಾಯ ಮಾಡುತ್ತಿದ್ದವರನ್ನು ಮಾತ್ರ ಮಾಹಿತಿ ಸಂಗ್ರಹಿಸಿ ಅವರುಗಳ ಮೇಲೆ ಕಾನೂನು ರೀತ್ಯಾ ಕ್ರಮಕೈಗೊಂಡಿರುವುದಾಗಿ ತಿಳಿಸಿದರು.
ನಕ್ಸಲ್ ಪೀಡಿತ ಜಿಲ್ಲೆಗಳಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳನ್ನು ನಿಗದಿತ ಅವಧಿಯೊಳಗೆ ಅನುಷ್ಠಾನಗೊಳಿಸಲು ಜಿಲ್ಲಾಧಿಕಾರಿಗಳು, ಪೊಲೀಸ್ ಅಧೀಕ್ಷಕರು, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ಅರಣ್ಯ ಸಂರಕ್ಷಣಾಧಿಕಾರಿಗಳನ್ನೊಳಗೊಂಡ ಜಿಲ್ಲಾ ಮಟ್ಟದ ಸಮಿತಿಗಳನ್ನು ರಚಿಸಲಾಗಿದೆ. ಹಿಂಸೆಯನ್ನು ತೊರೆದವರನ್ನು ಸಮಾಜದ ಮುಖ್ಯವಾಹಿನಿಗೆ ತರುವ ಇಚ್ಚೆಯೂ ಸರ್ಕಾರಕ್ಕಿದೆಯೆಂದು ಸಚಿವರು ತಿಳಿಸಿದರು.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications