ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗಿರಿಜನರಿಗೆ ಕಿರುಕುಳ ನೀಡುತ್ತಿಲ್ಲ : ಆಚಾರ್ಯ

By Staff
|
Google Oneindia Kannada News

VS Acharya
ಬೆಂಗಳೂರು,ಜು. 17 : ಮಲೆನಾಡಿನಲ್ಲಿ ಹಬ್ಬಿರುವ ನಕ್ಸಲರ ಹಾವಳಿಯನ್ನು ತಡೆಗಟ್ಟುವ ಮತ್ತು ನಕ್ಸಲರನ್ನು ಹಿಡಿಯುವ ನೆಪದಲ್ಲಿ ಗಿರಿಜನರಿಗೆ ಯಾವುದೇ ರೀತಿಯ ಕಿರುಕುಳ ಅಥವಾ ತೊಂದರೆಯನ್ನು ನೀಡುತ್ತಿಲ್ಲವೆಂದು ಗೃಹ ಸಚಿವ ಡಾ.ವಿ.ಎಸ್.ಆಚಾರ್ಯ ತಿಳಿಸಿದರು.

ವಿಧಾನ ಪರಿಷತ್ತಿನಲ್ಲಿ ಪ್ರಕಾಶ್ ಕೆ.ರಾಥೋಡ್ ಅವರ ಪ್ರಶ್ನೆಗೆ ಉತ್ತರಿಸುತ್ತಿದ್ದ ಸಚಿವರು, ನಕ್ಸಲ್ ಚಟುವಟಿಕೆಯಲ್ಲಿ ಪಾಲ್ಗೊಂಡ ಹಾಗೂ ನಕ್ಸಲೀಯರಿಗೆ ಬಾಹ್ಯ ರೀತಿಯಲ್ಲಿ ಸಹಾಯ ಮಾಡುತ್ತಿದ್ದವರನ್ನು ಮಾತ್ರ ಮಾಹಿತಿ ಸಂಗ್ರಹಿಸಿ ಅವರುಗಳ ಮೇಲೆ ಕಾನೂನು ರೀತ್ಯಾ ಕ್ರಮಕೈಗೊಂಡಿರುವುದಾಗಿ ತಿಳಿಸಿದರು.

ನಕ್ಸಲ್ ಪೀಡಿತ ಜಿಲ್ಲೆಗಳಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳನ್ನು ನಿಗದಿತ ಅವಧಿಯೊಳಗೆ ಅನುಷ್ಠಾನಗೊಳಿಸಲು ಜಿಲ್ಲಾಧಿಕಾರಿಗಳು, ಪೊಲೀಸ್ ಅಧೀಕ್ಷಕರು, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ಅರಣ್ಯ ಸಂರಕ್ಷಣಾಧಿಕಾರಿಗಳನ್ನೊಳಗೊಂಡ ಜಿಲ್ಲಾ ಮಟ್ಟದ ಸಮಿತಿಗಳನ್ನು ರಚಿಸಲಾಗಿದೆ. ಹಿಂಸೆಯನ್ನು ತೊರೆದವರನ್ನು ಸಮಾಜದ ಮುಖ್ಯವಾಹಿನಿಗೆ ತರುವ ಇಚ್ಚೆಯೂ ಸರ್ಕಾರಕ್ಕಿದೆಯೆಂದು ಸಚಿವರು ತಿಳಿಸಿದರು.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X