ಪ್ರಕೃತಿ ವಿಕೋಪ : ತುರ್ತು ಪರಿಹಾರಕ್ಕೆ 5 ಕೋಟಿ ರು.

ರಾಜ್ಯದಲ್ಲಿ ಉಂಟಾಗಿರುವ ಪ್ರವಾಹ ಹಾನಿ ಕುರಿತಂತೆ ಶುಕ್ರವಾರ ವಿಧಾನ ಪರಿಷತ್ನಲ್ಲಿ ಕಂದಾಯ ಸಚಿವರ ಪರವಾಗಿ ಸ್ವಪ್ರೇರಣೆ ಹೇಳಿಕೆ ನೀಡಿದ ಅವರು ಹಾನಿಗೊಳಗಾದ ಉಳಿದ ಜಿಲ್ಲೆಗಳಿಗೂ ಅಗತ್ಯಕ್ಕೆ ಅನುಗುಣವಾಗಿ ರು.1 ಕೋಟಿಯಿಂದ ರೂ.2 ಕೋಟಿ ರು. ಅನುದಾನ ಬಿಡುಗಡೆ ಮಾಡಲು ಕ್ರಮಕೈಗೊಳ್ಳಲಾಗಿದೆ. ಅಲ್ಲದೆ, ಪ್ರಕೃತಿ ವಿಕೋಪದ ಹಾನಿಯ ತುರ್ತು ಪರಿಹಾರಕ್ಕಾಗಿ ಲಭ್ಯವಿರುವ ಹಣವನ್ನು ಬಳಸಿಕೊಳ್ಳಲು ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದರು.
ಹನ್ನೊಂದು ಜಿಲ್ಲೆಗಳಲ್ಲಿ ವಾಡಿಕೆಮಳೆಗಿಂತ ಆಗಿರುವ ಮಳೆ ಅಧಿಕವಾಗಿದೆ - ಉಡುಪಿ (ವಾಡಿಕೆ ಮಳೆ 652 ಮಿ.ಮೀ, ಆಗಿರುವ ಮಳೆ 1231 ಮಿ.ಮೀ), ದಕ್ಷಿಣ ಕನ್ನಡ(ವಾ. 622, ಆ.1022), ಉತ್ತರ ಕನ್ನಡ(ವಾ. 513, ಆ.925), ಕೊಡಗು(ವಾ. 392, ಆ.883), ಶಿವಮೊಗ್ಗ(ವಾ.359, ಆ.778), ಚಿಕ್ಕಮಗಳೂರು(ವಾ.333, ಆ.600), ಹಾಸನ(ವಾ.123, ಆ.242), ಬೆಳಗಾಂ(ವಾ.115, ಆ.212), ಹಾವೇರಿ(ವಾ.95, ಆ.190), ಧಾರವಾಡ(ವಾ.83, ಆ.145), ಚಿತ್ರದುರ್ಗ(ವಾ.49, ಆ.103).
ಜಿಲ್ಲೆಗಳಲ್ಲಿನ ಪ್ರವಾಹ ಪರಿಸ್ಥಿತಿ ಎದುರಿಸಲು ಎಲ್ಲಾ ಸಿದ್ಧತೆಗಳೊಂದಿಗೆ ಸನ್ನದ್ಧರಾಗಿರುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದ್ದು ಈಗಾಗಲೇ ನಿಯಂತ್ರಣ ಕೊಠಡಿಗಳನ್ನು ಪ್ರಾರಂಭಿಸಿ, ವೈಯರ್ಲೆಸ್ ಸಂಪರ್ಕ ಅಳವಡಿಸಿಕೊಂಡಿರುತ್ತಾರೆ. ಪ್ರವಾಹ ಪೀಡಿತರಿಗೆ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿ ಅಗತ್ಯ ಊಟ, ವಸತಿ ಮತ್ತು ಔಷಧೋಪಚಾರಗಳನ್ನು ಒದಗಿಸಲಾಗಿದೆ. ಕರಾವಳಿ ಜಿಲ್ಲೆಗಳಿಗೆ ಹೆಚ್ಚುವರಿಯಾಗಿ ರಕ್ಷಣಾ ಕೆಲಸಕ್ಕೆ ತಮಿಳುನಾಡಿನ ಅರಕೋಣಂನಿಂದ ನ್ಯಾಷನಲ್ ಡಿಸಾಸ್ಟರ್ ರೆಸ್ಪಾನ್ಸ್ ಫೋರ್ಸನ 89 ಅಧಿಕಾರಿ ಮತ್ತು ಸಿಬ್ಬಂದಿಯವರನ್ನು ಮತ್ತು 11 ಇನ್ಫ್ಲೇಟಬಲ್ ಬೋಟ್ಗಳನ್ನು ಸುರಕ್ಷಿತಾ ಕೆಲಸಗಳಿಗೆ ಬಳಸಲಾಗುತ್ತಿದೆ ಎಂದು ಸಚಿವರು ತಿಳಿಸಿದರು.
ಪ್ರವಾಹ ಮತ್ತು ನೈಸರ್ಗಿಕ ವಿಕೋಪಗಳ ಬಗ್ಗೆ ಸಾರ್ವಜನಿಕರಿಗೆ ಪೂರ್ಣ ರೀತಿಯ ಸುರಕ್ಷತೆ ಮತ್ತು ಪರಿಹಾರವನ್ನು ಒದಗಿಸಲು ಕರ್ನಾಟಕ ಸರ್ಕಾರವು ಬದ್ಧವಾಗಿದೆ ಎಂದು ಆಚಾರ್ಯ ತಿಳಿಸಿದರು.
(ದಟ್ಸ್ ಕನ್ನಡ ವಾರ್ತೆ)
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications