ಮಳೆ ಅವಕೃಪೆ: ಶಿಕಾರಿಪುರ ಸಂಚಾರ ಅಸ್ತವ್ಯಸ್ತ

ಪಟ್ಟಣದ ಗೌರಿಹಳ್ಳ ಶಿಕಾರಿಪುರ ಮತ್ತು ಶಿರಾಳಕೊಪ್ಪದ ರಸ್ತೆಯಲ್ಲಿದ್ದು, ಕಳೆದ ಮೂರು ವರ್ಷಗಳಿಂದ ಮಳೆ ಹೆಚ್ಚಾದಾಗೆಲ್ಲಾ ವಾಹನ ಸಂಚಾರ ಸ್ಥಗಿತಗೊಳಿಸುವುದು ಹಾಗೇ ಕೊಟ್ಟ ಗ್ರಾಮ ಜಲಾವೃತವಾಗುವುದು ಸಾಮಾನ್ಯವಾಗಿದೆ. ಇದನ್ನು ತಡೆಗಟ್ಟಬೇಕೆಂದು ಕಳೆದ ಸಾಲಿನಲ್ಲಿ ಲೋಕೋಪಯೋಗಿ ಇಲಾಖೆ ವತಿಯಿಂದ ಲಕ್ಷಾಂತರ ವೆಚ್ಚದಲ್ಲಿ ರಸ್ತೆಯ ಮಟ್ಟವನ್ನು ಏರಿಸುವುದು,ಗೊಚ್ಚು ಮಣ್ಣು ಹಾಕಿಸುವುದು ಮತ್ತು ಪೈಪ್ಗಳನ್ನು ಅಳವಡಿಸುವಂತಹ ಕಾಮಗಾರಿಯನ್ನು ಮಾಡಲಾಯಿತು. ಆದರೆ ಈ ಬಾರಿ ಪುನಃ ರಸ್ತೆಯ ಮೇಲೆ ನೀರು ನಿಂತು ಹಿಂದಿನದೇ ಪುನರಾವರ್ತನೆಯಾಗಿದೆ. ಹಾಗಾದರೆ ಕಾಮಗಾರಿಯ ಪ್ರಯೋಜನದ ಬಗ್ಗೆ ಅಧಿಕಾರಿಗಳೇ ತಿಳಿಸಬೇಕಾಗಿದೆ.
ನೀರು ಪೂರ್ಣ ಪ್ರಮಾಣದಲ್ಲಿ ಕಡಿಮೆಯಾದರೂ ವಾಹನ ಸಂಚಾರ ಕಷ್ಟ ಸಾಧ್ಯವಾಗಿದೆ ಎಂಬ ಮಾತುಗಳು ಕೇಳಿ ಬರುತ್ತಿದೆ. ಕಾರಣ ನೀರಿನ ರಭಸಕ್ಕೆ ಹಾಕಿದ ಮಣ್ಣೆಲ್ಲಾ ಕೊಚ್ಚಿ ಹೋಗಿದೆ. ರಸ್ತೆಗಳಲ್ಲಿ ಬಾವಿ ಗಾತ್ರದ ಗುಂಡಿಗಳಾಗಿದೆ. ಇಲ್ಲಿ ಸೇತುವೆ ಮಾಡುವುದಾಗಿ ಅಧಿಕಾರಿಗಳು ಹೇಳುತ್ತಾ ಹಲವು ವರ್ಷಗಳೆ ಕಳೆದಿದೆ. ಆದರೆ ಈವರೆಗೆ ಕಾರ್ಯ ರೂಪಕ್ಕೆ ಬಂದಿಲ್ಲ. ಸರ್ಕಾರದಿಂದ ಮಳೆಹಾನಿಗೆಂದು ಬರುವ ಅನುದಾನದಲ್ಲಿ ಮತ್ತೆ ಅದೇ ಕಾಮಗಾರಿ ಆರಂಭವಾಗುತ್ತದೆ. ಪ್ರತೀ ವರ್ಷವೂ ಕಾಮಗಾರಿ ಮಾಡುವುದು ಅಂದರೆ ಇದೇನಾ ಎಂಬುದು ಸಾರ್ವಜನಿಕರ ಪ್ರಶ್ನೆಯಾಗಿದೆ. ಅಧಿಕಾರಿಗಳು ಸಾರ್ವಜನಿಕರ ಹಣ ಪೋಲಾಗದಂತಹ ಯೋಜನೆ ರೂಪಿಸಲಿ ಎನ್ನುವುದು ಎಲ್ಲರ ಆಶಯವಾಗಿದೆ.
(ದಟ್ಸ್ ಕನ್ನಡವಾರ್ತೆ)
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications