ತಿರುವಳ್ಳುವರ್ ಪ್ರತಿಮೆ ವಿವಾದ ಪ್ರತಿಷ್ಠೆಬೇಡ: ಸಿಎಂ

Yeddyurappa
ಬೆಂಗಳೂರು, ಜು. 20: ತಿರುವಳ್ಳುವರ್ ಪ್ರತಿಮೆ ವಿಷಯವನ್ನು ಕನ್ನಡಪರ ಸಂಘಟನೆಗಳು ಪ್ರತಿಷ್ಠೆಯಾಗಿ ತೆಗೆದುಕೊಳ್ಳಬಾರದು. ಕನ್ನಡಪರ ಸಂಘಟನೆಗಳು ಮತ್ತು ಕನ್ನಡ ಹೋರಾಟಗಾರರನ್ನು ವಿಶ್ವಾಸಕ್ಕೆ ತೆಗೆದುಕೊಂಡೇ ಬೆಂಗಳೂರಿನಲ್ಲಿ ತಿರುವಳ್ಳುವರ್ ಪ್ರತಿಮೆ ಅನಾವರಣ ಮಾಡಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.

ಕನ್ನಡಪರ ಸಂಘಟನೆಗಳು, ಸಾಹಿತಿಗಳ ಜೊತೆ ಸಮಾಲೋಚನೆ ನಡೆಸಲಾಗುವುದು. ತಮಿಳುನಾಡು ಮುಖ್ಯಮಂತ್ರಿ ಕರುಣಾನಿಧಿ ಜತೆಗಿನ ಒಪ್ಪಂದದ ಅನ್ವಯ ಎರಡೂ ರಾಜ್ಯಗಳಲ್ಲಿ ಪ್ರತಿಮೆ ಅನಾವರಣ ಮಾಡಲಾಗುತ್ತಿದೆ. ಹಲವು ವರ್ಷಗಳಿಂದ ಬಾಕಿ ಉಳಿದಿರುವ ವಿವಾದಕ್ಕೆ ಅಂತ್ಯ ಹಾಡುವ ಉದ್ದೇಶದಿಂದ ಈ ಒಪ್ಪಂದ ಮಾಡಿಕೊಳ್ಳಲಾಗಿದೆ. ಈ ಸಂಬಂಧ ಸಂಘಟನೆಗಳು ಸರಕಾರಕ್ಕೆ ಬೆದರಿಕೆ ಹಾಕುವುದು ಷರತ್ತು ವಿಧಿಸುವುದು ಸರಿಯಲ್ಲ. ಒಳ್ಳೆ ಸಲಹೆ ನೀಡಿದರೆ ಸ್ವಾಗತಿಸುತ್ತೇವೆ ಎಂದು ಯಡಿಯೂರಪ್ಪ ಹೇಳಿದರು.

ಈ ಮಧ್ಯೆ ಉಪಚುನಾವಣೆ ಘೋಷಣೆ ಆಗಿರುವುದರಿಂದ ಚುನಾವಣಾ ನೀತಿ ಸಂಹಿತೆ ಅಡ್ಡಿ ಬರುವ ಕಾರಣ ಪ್ರತಿಮೆ ಅನಾವರಣ ಒಂದು ತಿಂಗಳು ವಿಳಂಬವಾಗುವ ಸಂಭವವಿದೆ. ಚುನಾವಣಾ ಆಯೋಗದ ಅನುಮತಿ ಪಡೆದುಕೊಂಡೇ ಪ್ರತಿಮೆ ಅನಾವರಣ ಮಾಡಲಾಗುವುದು, ಆಯೋಗ ಇದಕ್ಕೆ ಅವಕಾಶ ನೀಡದಿದ್ದರೆ ಒಂದು ತಿಂಗಳು ವಿಳಂಬವಾಗಬಹುದು ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+