ತಿರುವಳ್ಳುವರ್ ಪ್ರತಿಮೆ ವಿವಾದ ಪ್ರತಿಷ್ಠೆಬೇಡ: ಸಿಎಂ

ಕನ್ನಡಪರ ಸಂಘಟನೆಗಳು, ಸಾಹಿತಿಗಳ ಜೊತೆ ಸಮಾಲೋಚನೆ ನಡೆಸಲಾಗುವುದು. ತಮಿಳುನಾಡು ಮುಖ್ಯಮಂತ್ರಿ ಕರುಣಾನಿಧಿ ಜತೆಗಿನ ಒಪ್ಪಂದದ ಅನ್ವಯ ಎರಡೂ ರಾಜ್ಯಗಳಲ್ಲಿ ಪ್ರತಿಮೆ ಅನಾವರಣ ಮಾಡಲಾಗುತ್ತಿದೆ. ಹಲವು ವರ್ಷಗಳಿಂದ ಬಾಕಿ ಉಳಿದಿರುವ ವಿವಾದಕ್ಕೆ ಅಂತ್ಯ ಹಾಡುವ ಉದ್ದೇಶದಿಂದ ಈ ಒಪ್ಪಂದ ಮಾಡಿಕೊಳ್ಳಲಾಗಿದೆ. ಈ ಸಂಬಂಧ ಸಂಘಟನೆಗಳು ಸರಕಾರಕ್ಕೆ ಬೆದರಿಕೆ ಹಾಕುವುದು ಷರತ್ತು ವಿಧಿಸುವುದು ಸರಿಯಲ್ಲ. ಒಳ್ಳೆ ಸಲಹೆ ನೀಡಿದರೆ ಸ್ವಾಗತಿಸುತ್ತೇವೆ ಎಂದು ಯಡಿಯೂರಪ್ಪ ಹೇಳಿದರು.
ಈ ಮಧ್ಯೆ ಉಪಚುನಾವಣೆ ಘೋಷಣೆ ಆಗಿರುವುದರಿಂದ ಚುನಾವಣಾ ನೀತಿ ಸಂಹಿತೆ ಅಡ್ಡಿ ಬರುವ ಕಾರಣ ಪ್ರತಿಮೆ ಅನಾವರಣ ಒಂದು ತಿಂಗಳು ವಿಳಂಬವಾಗುವ ಸಂಭವವಿದೆ. ಚುನಾವಣಾ ಆಯೋಗದ ಅನುಮತಿ ಪಡೆದುಕೊಂಡೇ ಪ್ರತಿಮೆ ಅನಾವರಣ ಮಾಡಲಾಗುವುದು, ಆಯೋಗ ಇದಕ್ಕೆ ಅವಕಾಶ ನೀಡದಿದ್ದರೆ ಒಂದು ತಿಂಗಳು ವಿಳಂಬವಾಗಬಹುದು ಎಂದು ಮುಖ್ಯಮಂತ್ರಿ ಹೇಳಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)











Click it and Unblock the Notifications