ಅವಿವಾಹಿತಯುವಕನಿಗೆ ಸಂತಾನಹರಣ ಚಿಕಿತ್ಸೆ!

ಮೂಲಗಳ ಪ್ರಕಾರ, ಯುವಕನೊಬ್ಬನನ್ನು ಆಸ್ಪತ್ರೆಗೆ ಕರೆತರಲಾಯಿತು. ನಂತರ ಆತನನ್ನು ಪುಸಲಾಯಿಸಿ ಸಂತಾನಹರಣ ಚಿಕಿತ್ಸೆ ಮಾಡಿಸಿಕೊಳ್ಳುವಂತೆ ಬಲವಂತ ಮಾಡಿದ್ದಾರೆ. ನಂತರಅದೇ ಆಸ್ಪತ್ರೆಯಲ್ಲಿ ವೈದ್ಯರು ಆತನಿಗೆ ಸಂತಾನಹರಣ ಚಿಕಿತ್ಸೆ ಮಾಡಿ ಮುಗಿಸಿದರು ಎನ್ನಲಾಗಿದೆ. ಸಂತಾನಹರಣ ಚಿಕಿತ್ಸೆಗೆ ಬಲಿಪಶುವಾಗಿರುವ ಯುವಕನ ವಯಸ್ಸು ಕೇವಲ 21 ವರ್ಷ.
ಯುವಕನಿಗೆ ಸಂತಾನ ಹರಣ ಚಿಕಿತ್ಸೆ ಮಾಡಿದ ವೈದ್ಯರನ್ನು ಸಂಪರ್ಕಿಸಿದಾಗ ಅವರು ಇದರಲ್ಲಿ ನಮ್ಮದೇನು ತಪ್ಪಿಲ್ಲ ಎಂದು ನುಣುಚಿಕೊಂಡಿದ್ದಾರೆ. ಘಟನೆಯಿಂದ ರೊಚ್ಚಿಗೆದ್ದ ಸಾರ್ವಜನಿಕರು ಸಂಗರೂರ್ ಪಟ್ಟಣದಲ್ಲಿ ವೈದ್ಯರ ವಿರುದ್ಧ ಪ್ರತಿಭಟನೆಗೆ ಇಳಿದಿದ್ದಾರೆ.
(ಏಜನ್ಸೀಸ್)











Click it and Unblock the Notifications