ಸಿಪಿ ಯೋಗೀಶ್ವರ್ ಮನೆ ಮೇಲೆ ಐಟಿ ದಾಳಿ

ಮುಂಜಾನೆ 6.30ರ ಸಮಯದಲ್ಲಿ ಏಕಕಾಲದಲ್ಲಿ ಯೋಗೀಶ್ವರ್ ಅವರ ಕುವೆಂಪು ನಗರದ 5ನೇ ರಸ್ತೆಯ ಮನೆ ಮತ್ತು ಸ್ವಗ್ರಾಮ ಚಕ್ಕೆರೆಯ ನಿವಾಸ ಹಾಗೂ ಅವರ ಮಾಲಿಕತ್ವದ ಕರ್ಮಯೋಗಿ ಅಪರೇಲ್ಸ್ ಗಾರ್ಮೆಂಟ್ಸ್ ಮೇಲೆ ದಾಳಿ ನಡೆಸಲಾಗಿದೆ. ಯೋಗೀಶ್ವರ್ ಸಹೋದರ ಸಿ.ಪಿ. ರಾಜೇಶ್, ಮತ್ತೊಬ್ಬ ಸಹೋದರ ಗಂಗಾಧರ್ ಅವರ ಬೆಂಗಳೂರು ನಿವಾಸ ಹಾಗೂ ಸಹೋದರಿಯರು ಹಾಗೂ ಯೋಗೀಶ್ವರ್ ಭಾವಂದಿರ ಮನೆಗಳ ಮೇಲೂ ದಾಳಿ ಮಾಡಲಾಗಿದೆ.
ಅಲ್ಲದೆ, ಯೋಗೀಶ್ವರ್ ಅಪ್ತವಲಯದಲ್ಲಿ ಗುರುತಿಸಿಕೊಂಡಿರುವ ತಾಲೂಕ್ ಪಂಚಾಯತ್ ಸದಸ್ಯ ತಗಚಗೆರೆ ಶಿವಲಿಂಗಯ್ಯ, ಎಸ್.ಸಿ. ಶೇಖರ್, ರಾಜಪ್ಪ ಪಾರ್ಥ ಮುಂತಾದವರ ನಿವಾಸಗಳ ಮೇಲೆ ಸುಮಾರು 60 ಮಂದಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾಳಿಯ ಸಂದರ್ಭದಲ್ಲಿ ಕೇಂದ್ರೀಯ ತನಿಖಾ ತಂಡ ಮಹತ್ವದ ಮಾಹಿತಿಗಳನ್ನು ಸಂಗ್ರಹಿಸಿದ್ದಾರೆ ಎಂದು ಹೇಳಲಾಗಿದ್ದು, ಅಧಿಕಾರಿಗಳು ಮಾಧ್ಯಮಗಳಿಗೆ ನಿಖರವಾದ ಮಾಹಿತಿ ನೀಡಲಿಲ್ಲ.
ಲೋಕಸಭಾ ಚುನಾವಣೆ ಮುಗಿದ ತರುವಯ ಮೆಗಾಸಿಟಿ ಹಗರಣದ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ತನಿಖೆಗೆ ಆದೇಶ ನೀಡಿದ್ದನ್ನು ಇಲ್ಲಿ ಸ್ಮರಿಸಬಹುದು. ವಿಧಾನಸಬೆ ಮರುಚುನಾವಣೆ ಹಿನ್ನೆಲೆಯಲ್ಲಿ ಯೋಗೀಶ್ವರ್ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿರುವುದು ಖಚಿತವಾಗಿದೆ. ಚುನಾವಣೆ ಹಿನ್ನೆಲೆಯಲ್ಲಿ ಯೋಗೀಶ್ವರ್ ತಮ್ಮ ನಿವಾಸ ಹಾಗೂ ಬೆಂಬಲಿಗ ಮುಖಂಡರ ಮನೆಗಳಲ್ಲಿ ಚುನಾವಣೆಯ ಖರ್ಚಿಗೆ ಹಣ ಸಂಗ್ರಹಿಸಿ ಇಟ್ಟಿರಬಹುದು ಎಂದು ಶಂಕೆಗೊಂಡಿರುವ ಕೇಂದ್ರಿಯ ತನಿಖಾ ತಂಡ ತಮ್ಮ ಜತೆ ಆದಾಯ ತೆರಿಗೆ ಅಧಿಕಾರಿಗಳನ್ನು ಕರೆತಂದು ದಾಳಿ ನಡೆಸಿದ್ದಾರೆ.
ಕಳೆದ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಕೂಡ ಯೋಗೀಶ್ವರ್ ಅವರ ಆಪ್ತ ಬೆಂಬಲಿಗ ಲ್ಯಾಬ್ ದಿನೇಶ್ ಮನೆಯ ಮೇಲೆ ದಾಳಿ ಮಾಡಿ ಹಣ ವಸಪಡಿಸಿಕೊಳ್ಳಲಾಗಿತ್ತು. ಯೋಗೀಶ್ವರ್ ಮತ್ತವರ ಬೆಂಬಲಿಗರ ನಿವಾಸದ ಮೇಲೆ ಕೇಂದ್ರಿಯ ತನಿಖಾ ತಂಡ ದಾಳಿ ನಡೆಸುತ್ತಿರುವ ಸುದ್ದಿ ತಿಳಿಯುತ್ತಿದ್ದಂತೆ ಅಪಾರ ಜನಸ್ತೋಮ ಯೋಗೀಶ್ವರ್ ಅವರ 5ನೇ ಅಡ್ಡರಸ್ತೆಯ ನಿವಾಸದ ಬಳಿ ಜಮಾಯಿಸಿತ್ತು.
-
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು? -
92,00,00,000 ರೂಪಾಯಿ ಬಹುಮಾನ, ಈತನ ಬಗ್ಗೆ ಸುಳಿವು ನೀಡಿದರೆ ನಿಮಗೂ ಸಿಗಲಿದೆ ಹಣ... Mojtaba Khamenei -
Shri Gandhada Gudi Serial: "ಶ್ರೀಗಂಧದಗುಡಿ" ಸೀರಿಯಲ್ಗೆ ಗುಡ್ಬೈ ಹೇಳಿದ ಸಂಜನಾ ಬುರ್ಲಿ, ಕಾರಣ ಇಲ್ಲಿದೆ












Click it and Unblock the Notifications