ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮುಂಬೈ ದಾಳಿ : ಕಸಬ್ ನಿಂದ ಮತ್ತಷ್ಟು ಮಾಹಿತಿ

By Staff
|
Google Oneindia Kannada News

Kasab
ಮುಂಬೈ, ಜು.21 : ಮುಂಬೈ ಭಯೋತ್ಪಾದನೆಯಲ್ಲಿ ಸಿಕ್ಕಿಬಿದ್ದಿರುವ ಏಕೈಕ ಉಗ್ರ ಅಜ್ಮಲ್ ಕಸಬ್ ಸೋಮವಾರ ವಿಶೇಷ ನ್ಯಾಯಾಲಯದಲ್ಲಿ ತಪ್ಪೊಪ್ಪಿಕೊಂಡಿರುವ ಬೆನ್ನಲ್ಲೇ ಮತ್ತಷ್ಟು ಮಹತ್ವದ ಸಂಗತಿಗಳನ್ನು ನ್ಯಾಯಾಲಯಕ್ಕೆ ತಿಳಿಸಿದ್ದಾನೆ. ಜನರ ಮೇಲೆ ಮನಬಂದಂತೆ ಗುಂಡಿನ ದಾಳಿ ನಡೆಸುವುದು. ಜನರನ್ನು ಒತ್ತೆಯಾಳಾಗಿರಿಸಿಕೊಳ್ಳುವುದು ಮತ್ತು ಜನರ ರಕ್ಷಣೆ ಬರುವ ಪೊಲೀಸರ ಮೇಲೆ ಗುಂಡಿನ ದಾಳಿ ನಡೆಸುವ ಸೂಚನೆಯನ್ನು ನೀಡಲಾಗಿತ್ತು ಎಂದು ಕಸಬ್ ನ್ಯಾಯಾಲಯಕ್ಕೆ ತಿಳಿಸಿದ್ದಾನೆ. ಬುಧವಾರ ಕಸಬ್ ವಿಚಾರಣೆ ಮುಂದುವರೆಯಲಿದೆ.

ಈ ಹೇಳಿಕೆಯನ್ನು ಸ್ಪಷ್ಟವಾಗಿ ತಳ್ಳಿಹಾಕಿರುವ ಕಸಬ್ ಪರ ವಕೀಲ ಅಬ್ಬಾಸ್ ಕಜ್ಮಿ, ಕಸಬ್ ನಿಗೆ ಮಾನಸಿಕ ಹಿಂಸೆ ನೀಡಲಾಗಿದೆ. ಪೊಲೀಸರು ಆತನಿಗೆ ಚಿತ್ರಹಿಂಸೆ ನೀಡಿದ್ದಲ್ಲದೇ ನ್ಯಾಯಾಲಯದಲ್ಲಿ ಸುಳ್ಳು ಹೇಳಿಕೆ ನೀಡವಂತೆ ಒತ್ತಡ ಹೇರಲಾಗಿದೆ. ಈ ಹಿನ್ನೆಲೆಯಲ್ಲಿ ಕಸಬ್ ಹೇಳಿಕೆಯನ್ನು ತಪ್ಪೊಪ್ಪಿಗೆಯಂತೆ ಪರಿಗಣಿಸಬಾರದು ಎಂದು ಕಜ್ಮಿ ನ್ಯಾಯಾಲಯಕ್ಕೆ ಮನವಿ ಮಾಡಿಕೊಂಡಿದ್ದಾರೆ.

ಎಟಿಎಸ್ ಮುಖ್ಯಸ್ಥ ಹೇಮಂತ್ ಕರ್ಕರೆ ಕೊಂದಿದ್ದು, ಕಾಮಾ ಆಸ್ಪತ್ರೆ ಮೇಲೆ ಧಾಳಿ ಸೇರಿದಂತೆ ಮುಂಬೈನಲ್ಲಿ ನಡೆದ ಭಯೋತ್ಪಾದನಾ ಕೃತ್ಯಗಳಿಗೆ ನೇರವಾಗಿ ಭಾಗಿ ಆಗಿದ್ದನ್ನು ಸೋಮವಾರ ಕಸಬ್ ಸ್ಪಷ್ಟಪಡಿಸಿದ್ದ. ವಿಶೇಷ ನ್ಯಾಯಾಲಯದಲ್ಲಿ ಉಗ್ರ ಕಸಬ್ ತಪ್ಪೊಪ್ಪಿಗೆ ಹೇಳಿಕೆ ಅನಿರೀಕ್ಷಿತ ಎಂದು ಕಸಬ್ ಪರ ಸರ್ಕಾರಿ ವಕೀಲ ಉಜ್ವಲ್ ನಿಕ್ಕಂ ಪ್ರತಿಕ್ರಿಯಿಸಿದ್ದಾರೆ.

ಝಾಕೀರ್ ಉರ್ ರಹಮಾನ್ ಲಕ್ವಿಯ ನಿರ್ದೇಶನದ ಮೇರೆಗೆ ಆತ್ಮಾಹುತಿ(ಫಿದಾಯಿನ್) ದಾಳಿ ನಡೆಸಲು ನಮ್ಮ ತಂಡ ಮುಂಬೈಗೆ ಸಣ್ಣ ಬೋಟ್ ಮೂಲಕ ಬಂದೆವು ಎಂದು ಕಸಬ್ ಹೇಳಿದ್ದಾನೆ. ಇದಲ್ಲದೆ ಮುಂಬೈ ಪೊಲೀಸರ ಬಳಿ ಇರುವ ಆರೋಪ ಪಟ್ಟಿಯಲ್ಲಿನ ಹಲವರ ಹೆಸರುಗಳನ್ನು ಕಸಬ್ ಸೂಚಿಸಿದ್ದಾನೆ.

ಇದುವರೆಗೂ 150 ಜನ ಸಾಕ್ಷಿಗಳಲ್ಲಿ 133 ಸಾಕ್ಷಿಗಳ ವಿಚಾರಣೆ ಮುಗಿದಿದೆ. ಮುಂಬೈ ಮೇಲೆ ನಡೆದ 26/11 ದಾಳಿಯಲ್ಲಿ 150ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದರು. ಗಲ್ಲು ಶಿಕ್ಷೆ ತಪ್ಪಿಸಿಕೊಳ್ಳಲು ಕಸಬ್ ಈ ರೀತಿ ಹೇಳಿಕೆನೀಡಿರುವ ಸಾಧ್ಯತೆಯಿದೆ.

(ಎಜೆನ್ಸೀಸ್)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X