ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಮರುಚುನಾವಣೆ - 3 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳು
ಬೆಂಗಳೂರು, ಜು. 21 : ಮರುಚುನಾವಣೆ ನಡೆಯುವ ಐದು ವಿಧಾನಸಭೆ ಕ್ಷೇತ್ರಗಳ ಪೈಕಿ ಮೂರಕ್ಕೆ ಅಭ್ಯರ್ಥಿಗಳ ಹೆಸರುಗಳನ್ನು ಬಿಜೆಪಿ ಅಂತಿಮಗೊಳಿಸಿದೆ. ಬಿಜೆಪಿ ರಾಜ್ಯ ಚುನಾವಣಾ ಸಮಿತಿ ಸಭೆ ಮುಖ್ಯಮಂತ್ರಿ ಯಡಿಯೂರಪ್ಪ ನಿವಾಸದಲ್ಲಿ ಸೋಮವಾರ ರಾತ್ರಿ ಸಭೆ ಸೇರಿ ಚುನಾವಣಾ ಕಾರ್ಯತಂತ್ರ ಹಾಗೂ ಅಭ್ಯರ್ಥಿಗಳ ಆಯ್ಕೆ ಕುರಿತು ಚರ್ಚೆ ನಡೆಸಿತು.
ನಿರೀಕ್ಷೆಯಂತೆ ಕಾಂಗ್ರೆಸ್ ಬಿಟ್ಟು ಇತ್ತೀಚೆಗೆ ಬಿಜೆಪಿ ಸೇರಿದ್ದ ವಸತಿ ಮತ್ತು ಮುಜರಾಯಿ ಸಚಿವ ವಿ ಸೋಮಣ್ಣ ಗೋವಿಂದರಾಜನಗರ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಚನ್ನಪಟ್ಟಣಕ್ಕೆ ಮಾಜಿ ಶಾಸಕ ಸಿ ಪಿ ಯೋಗಿಶ್ವರ್ ಮತ್ತು ಕೊಳ್ಳೆಗಾಲಕ್ಕೆ ಮಾಜಿ ಶಾಸಕ ಎ ಆರ್ ಕೃಷ್ಣಮೂರ್ತಿ ಅವರನ್ನು ಆಯ್ಕೆ ಮಾಡಲಾಗಿದೆ.
ಇನ್ನುಳಿದ ಚಿತ್ತಾಪುರ ಮತ್ತು ಪ್ರತಿಷ್ಠಿತ ರಾಮನಗರ ಕ್ಷೇತ್ರಕ್ಕೆ ಕಾಂಗ್ರೆಸ್ ಮತ್ತು ಜನತಾದಳ ಅಭ್ಯರ್ಥಿಗಳನ್ನು ನೋಡಿಕೊಂಡು ನಂತರ ಅಭ್ಯರ್ಥಿಗಳ ಹೆಸರು ಪ್ರಕಟಿಸಲು ಸಭೆ ನಿರ್ಧರಿಸಿತು.
(ದಟ್ಸ್ ಕನ್ನಡ ವಾರ್ತೆ)
Comments
bjp ಬಿಜೆಪಿ ವಿಧಾನಸಭೆ ಚುನಾವಣೆ ಮರು ಚುನಾವಣೆ ವಿ ಸೋಮಣ್ಣ ಚನ್ನಪಟ್ಟಣ v somanna bypoll cp yogeshwar channapatna
Story first published: Tuesday, July 21, 2009, 10:52 [IST]