ಸಿಬಿಎಸ್ಸಿ ಶಾಲೆಗಳಿಗೆ ಮೂಗುದಾರ : ಕಾಗೇರಿ

ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯ ಡೆರಿಕ್ ಫುಲ್ಲಿನ್ ಫಾ ಅವರ ಪರವಾಗಿ ಶಾಸಕ ಸಿ ಟಿ ರವಿ ಕೇಳಿದ ಪ್ರಶ್ನೆಗೆ ಸಚಿವರು ಉತ್ತರಿಸಿದರು. ಕೇಂದ್ರ ಸರಕಾರ ಹೊಸ ಕಾಯ್ದೆಯನ್ನು ಜಾರಿಗೆ ತರುತ್ತಿದೆ. ರಾಜ್ಯದಲ್ಲೂ ಹೊಸ ಕಾಯ್ದೆ ತರಲು ಉದ್ದೇಶಿಸಲಾಗಿದೆ. ರಾಜ್ಯ ಸರಕಾರದ ನಿಯಂತ್ರಣವಿಲ್ಲದಿರುವ ಕಾರಣ ಸಿಬಿಎಸ್ ಸಿ ಮತ್ತು ಐಸಿಎಸ್ ಸಿ ಶಾಲೆಗಳು ಮೂರು ಬಾರಿ ಶುಲ್ಕ ಹೆಚ್ಚಳ ಮಾಡಿವೆ. ಪಾಲಕರನ್ನು ಶೋಷಣೆ ಮಾಡುತ್ತಿವೆ ಎಂಬ ಆರೋಪವಿದೆ. ಇಂತಹ ಶಾಲೆಗಳ ಸುಲಿಗೆ ಮಾಡುತ್ತಿರುವ ಬಗ್ಗೆ ಸರಕಾರಕ್ಕೆ ಅನೇಕ ದೂರುಗಳು ಬಂದಿವೆ ಎಂದು ಹೆಗ್ಡೆ ವಿವರಿಸಿದರು.
ಬಡ್ಡಿ ಮನ್ನಾ ಪರಿಶೀಲನೆ : ಸಚಿವ ವೆಂಕಟರಮಣಪ್ಪ
ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯಿಂದ ನೀಡಿರುವ ಸಾಲದ ಬಡ್ಡಿ ಮನ್ನಾ ಮಾಡುವ ಬಗ್ಗೆ ಸರಕಾರ ಪರಿಶೀಲಿಸಿ ಕ್ರಮಕೈಗೊಳ್ಳಲಾಗುವುದು ಎಂದು ಸಣ್ಣ ಕೈಗಾರಿಕೆ ಮತ್ತು ರೇಷ್ಮೆ ಖಾತೆ ಸಚಿವ ವೆಂಕಟರಮಣಪ್ಪ ವಿಧಾನ ಪರಿಷತ್ ನಲ್ಲಿ ತಿಳಿಸಿದರು. ಕಳೆದ 10 ವರ್ಷಗಳಿಂದ ಫಲಾನುಭವಿಗಳಿಂದ ಸಾಲದ ಬಾಬ್ತು 3,742 ಲಕ್ಷ ರುಪಾಯಿ ಮತ್ತು ಬಡ್ಡಿ ಬಾಬ್ತು 30,047 ಲಕ್ಷ ರುಪಾಯಿ ವಸೂಲಿ ಮಾಡಲಾಗಿದೆ ಎಂದರು.
ಖಾದಿ ಉತ್ಪನ್ನಗಳ ಮಾರಾಟವನ್ನು ಪ್ರೋತ್ಸಾಹಿಸಲು ರಾಜ್ಯದ ವಿವಿಧ ಭಾಗಗಳಲ್ಲಿ ಖಾದಿ ಉತ್ಪನ್ನಗಳ ಪ್ರದರ್ಶನ ನಡೆಸಿ ಉತ್ತೇಜನ ನೀಡಲಾಗುತ್ತಿದೆ. ಕೈಗಾರಿಕಾ ವಿಕಾಸ ಯೋಜನೆಯಡಿ 650 ಕಸಬುದಾರರಿಗೆ ಉದ್ಯೋಗವಕಾಶ ಕಲ್ಪಿಸಲಾಗಿದೆ. ಗ್ರಾಮೀಣ ಉದ್ಯೋಗ ಸೃಷ್ಟಿ ಯೋಜನೆಯಡಿ 4,943 ಘಟಕಗಳಿಗೆ 5487 ಕೋಟಿ ರುಪಾಯಿಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ವೆಂಕಟರಮಣಪ್ಪ ಹೇಳಿದರು.
ಮಳೆ ಹಾನಿ ಪ್ರದೇಶಕ್ಕೆ ಹೆಚ್ಚುವರಿ ಹಣ
ಶಿವಮೊಗ್ಗ ಜಿಲ್ಲೆ ಸೇರಿ 11 ಜಿಲ್ಲೆಗಳಲ್ಲಿ ಸುರಿದ ಭಾರಿ ಮಳೆಯಿಂದ ಉಂಟಾಗಿರುವ ಹಾನಿಗೆ ಪರಿಹಾರ ಕ್ರಮಗಳನ್ನು ಕೈಗೊಳ್ಳಲು ಹೆಚ್ಚುವರಿ ಹಣ ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವಿಧಾನಸಭೆಯಲ್ಲಿ ಶೂನ್ಯ ವೇಳೆಯಲ್ಲಿ ಪ್ರಸ್ತಾಪಿಸಿದ ವಿಷಯಕ್ಕೆ ಸಂಬಂಧಿಸಿದಂತೆ ಮಾತನಾಡಿದರು.
ಅತಿವೃಷ್ಟಿಗೆ ಸಂಬಂಧಿಸಿದಂತೆ ಮಲತಾಯಿ ಧೋರಣೆ ಅಥವಾ ನಿರ್ಲಕ್ಷ್ಯ ವಹಿಸಲು ಸಾಧ್ಯವಿಲ್ಲ. ಅಗತ್ಯಕ್ಕೆ ಅನುಗುಣವಾಗಿ ಸಹಾಯ ನೀಡುವುದಾಗಿ ಅವರು ಭರವಸೆ ನೀಡಿದರು. ಹಾಸನ ಜಿಲ್ಲೆಯಲ್ಲೂ ಭಾರಿ ಮಳೆ ಬಿದ್ದ ಪರಿಣಾಮ ಸಾಕಷ್ಟು ಹಾನಿ ಉಂಟಾಗಿದೆ. ಪರಿಹಾರಕ್ಕಾಗಿ 4 ಕೋಟಿ ರುಪಾಯಿಗಳನ್ನು ಈಗಾಗಲೇ ಒದಗಿಸಲಾಗಿದೆ ಎಂದರು.
(ದಟ್ಸ್ ಕನ್ನಡ ವಾರ್ತೆ)
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications