ರಾ ಭಯೋತ್ಪಾದಕ ಸಂಘಟನೆ : ಪಾಕ್
ಇಸ್ಲಾಮಾಬಾದ್, ಜು. 22 : ಪಾಕಿಸ್ತಾನದಲ್ಲಿ ನಡೆದ ಶ್ರೀಲಂಕಾ ಕ್ರಿಕೆಟ್ ಆಟಗಾರರ ಮೇಲೆ ದಾಳಿ ಹಾಗೂ ಪೊಲೀಸ್ ಆಕಾಡೆಮಿಯ ಮೇಲೆ ನಡೆದ ವಿಧ್ವಂಸಕದ ಕೃತ್ಯದಲ್ಲಿ ಭಾರತದ ರಿಸರ್ಚ್ ಅಂಡ್ ಎನಲೀಸಸ್ ವಿಂಗ್ (RAW) ನ ಕೈವಾಡವಿರುವ ಬಗ್ಗೆ ಎಂದು ಪಾಕಿಸ್ತಾನಕ್ಕೆ ಮಹತ್ವದ ಮಾಹಿತಿಗಳು ಲಭ್ಯವಾಗಿವೆ ಎಂದು ಪಾಕಿಸ್ತಾನದ ಪ್ರಮುಖ ಇಂಗ್ಲಿಷ್ ದೈನಿಕ ದಿ ಡಾನ್ ವರದಿ ಮಾಡಿದೆ.
ಪಾಕಿಸ್ತಾನದಲ್ಲಿ ಭಾರತದ ರಾ ಸಂಸ್ಥೆ ಭಯೋತ್ಪಾದನೆ ಚಟುವಟಿಕೆಗಳಲ್ಲಿ ನಿರತವಾಗಿದೆ. ಭಯೋತ್ಪಾದಕರಿಗೆ ಹಣಕಾಸು ಸೇರಿದಂತೆ ಎಲ್ಲ ರೀತಿಯಿಂದಲೂ ರಾ ಸಂಸ್ಥೆ ಸಹಾಯ ಮಾಡುತ್ತಿದೆ. ಅಲ್ಲದೇ ಅಪಘಾನಿಸ್ತಾನದ ಕಂದಹಾರ್ ಮತ್ತು ಬಲೋಚಿಗಳಲ್ಲಿ ಭಯೋತ್ಪಾದಕರಿಗೆ ತರಬೇತಿ ನೀಡುವುದಲ್ಲದೇ, ಪಾಕಿಸ್ತಾನದಲ್ಲಿ ವಿಧ್ವಂಸಕ ಕೃತ್ಯಗಳನ್ನು ನಡೆಸಲು ಕುಮ್ಮಕ್ಕು ನೀಡುತ್ತದೆ. ನ್ಯಾಮ್ ಸಮಿತಿಯಲ್ಲಿ ಪಾಲ್ಗೊಳ್ಳಲು ತೆರಳಿದ್ದ ಭಾರತ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರನ್ನು ಭೇಟಿ ಮಾಡಿರುವ ಪಾಕಿಸ್ತಾನದ ಪ್ರಧಾನಮಂತ್ರಿ ಯೂಸೆಫ್ ರಾಜಾ ಗಿಲಾನಿ ಅವರು ವಿಧ್ವಂಸಕ ಕೃತ್ಯಕ್ಕೆ ಸಂಬಂಧಿಸಿದ ಎಲ್ಲ ಸಾಕ್ಷ್ಯಾಧಾರಗಳನ್ನು ನೀಡಿದ್ದಾರೆ ಎಂದು ಡಾನ್ ವರದಿ ಮಾಡಿದೆ. ಆದರೆ, ಈ ಮಹತ್ವದ ವಿಷಯವನ್ನು ಗುಪ್ತವಾಗಿ ಇಡಲಾಗಿತ್ತು ಎಂದು ಅದು ವರದಿ ಮಾಡಿದೆ.
ಭಾರತ ರಾ ಪಾಕಿಸ್ತಾನದಲ್ಲಿ ನಡೆಸುತ್ತಿರುವ ಕೃತ್ಯದ ಪ್ರಮುಖ ಸಾಕ್ಷ್ಯಾಧಾರಗಳನ್ನು ಅಮೆರಿಕ ಹಾಗೂ ಅಪಘಾನಿಸ್ತಾನಕ್ಕೆ ನೀಡಲಾಗಿದ್ದು. ಪಾಕಿಸ್ತಾನದ ಮೇಲೆ ನಡೆಯುತ್ತಿರುವ ಭಯೋತ್ಪಾದನೆ ಕೃತ್ಯಗಳಿಗೆ ಕಡಿವಾಣ ಹಾಕಬೇಕು ಎಂದು ಗಿಲಾನಿ ಮನವಿ ಮಾಡಿಕೊಂಡಿದ್ದಾರೆ ಎಂದು ದಿ ಡಾನ್ ವರದಿ ಮಾಡಿದೆ. ರಾ ಭಯೋತ್ಪಾದನೆಗೆ ಸಂಬಂಧಿಸಿದಂತೆ ಪಾಕಿಸ್ತಾನದಿಂದ ಸಾಕ್ಷ್ಯಾದಾರಗಳನ್ನು ಪಡೆದುಕೊಂಡಿರುವ ಪ್ರಧಾನಿ ಮನಮೋಹನ್ ಸಿಂಗ್, ಸಹಮತ ವ್ಯಕ್ತಪಡಿಸಿದ್ದು, ಈ ಕುರಿತು ತನಿಖೆ ನಡೆಸುವ ಭರವಸೆ ನೀಡಿದ್ದಾರೆ ಎಂದು ಪತ್ರಿಕೆ ಹೇಳಿದೆ.
(ಏಜನ್ಸೀಸ್)
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications