ಬಿಬಿಎಂಪಿ ಸಹಾಯಕ ಆಯುಕ್ತ ಆತ್ಮಹತ್ಯೆ
ಬೆಂಗಳೂರು, ಜು. 23 : ಲೋಕಾಯುಕ್ತ ದಾಳಿಗೊಳಗಾಗಿ ತೀವ್ರ ಮನನೊಂದಿದ್ದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣಾ ವಿಭಾಗದ ಸಹಾಯಕ ಆಯುಕ್ತ ಲಕ್ಷ್ಮಣ ಎಂಬುವವರು ತಮ್ಮ ಕಚೇರಿ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಅತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಗುರುವಾರ ಬೆಳಗ್ಗೆ ಬೆಳಕಿಗೆ ಬಂದಿದೆ.
ಕಳೆದ ಕೆಲ ತಿಂಗಳುಗಳ ಹಿಂದೆ ಭ್ರಷ್ಟಾಚಾರದ ಮೂಲಕ ಲಕ್ಷ್ಮಣ ಅವರು ಅಪಾರ ಸಂಪತ್ತು ಹೊಂದಿದ್ದಾರೆ ಎಂಬ ಆರೋಪದ ಮೇರೆಗೆ ಅವರ ಮನೆ ಮತ್ತು ನಿವಾಸದ ಮೇಲೆ ಲೋಕಾಯುಕ್ತ ದಾಳಿ ನಡೆದಿತ್ತು. ಲೋಕಾಯುಕ್ತ ದಾಳಿಯ ನಂತರ ಲಕ್ಷ್ಮಣ ಅವರನ್ನು ಎರಡು ತಿಂಗಳ ಕಾಲ ಅಮಾನತು ಮಾಡಲಾಗಿತ್ತು. ಬಿಬಿಎಂಪಿ ಚುನಾವಣೆಗಳು ಹತ್ತಿರಕ್ಕೆ ಬರುತ್ತಿರುವ ಹಿನ್ನೆಲೆಯಲ್ಲಿ ಮತ್ತೆ ಅವರನ್ನು ಕೆಲಸಕ್ಕೆ ತೆಗದುಕೊಳ್ಳಲಾಗಿತ್ತು.
ಆದರೆ, ಲೋಕಾಯುಕ್ತ ದಾಳಿಯ ನಂತರ ಕಚೇರಿಯ ಸಿಬ್ಬಂದಿ ಹಾಗೂ ಸಮಾಜ ತನ್ನನ್ನು ಕೆಟ್ಟ ದೃಷ್ಟಿಯಿಂದ ನೋಡುತ್ತಿದ್ದರು. ಇದರಿಂದ ತೀವ್ರ ಮನನೊಂದ ನಾನು ಸಾವಿಗೆ ಶರಣಾಗುತ್ತಿದ್ದೇನೆ ಎಂದು ಪತ್ರ ಬರೆದಿಟ್ಟು ಕಚೇರಿಯ ಕೊಠಡಿಯ ಸಿಲೀಂಗ್ ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನನ್ನ ಕಣ್ಣುಗಳನ್ನು ಅಂಧರಿಗೆ ದಾನ ಮಾಡಿ ಎಂದ ಸಹ ಪತ್ರದಲ್ಲಿ ಬರೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ಸಂಬಂಧಿಸಿದಂತೆ ಹಲಸೂರುಗೇಟ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ತನಿಖೆ ಆರಂಭಿಸಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications