ಕಸಬ್ ನನ್ನು ಗೇಟ್ ವೇ ಮುಂದೆ ನೇಣಿಗೇರಿಸಿ : ಠಾಕ್ರೆ

ಶಿವಸೇನೆಯ ಮುಖವಾಣಿ ಸಾಮ್ನಾದ ಸಂಪಾದಕೀಯ ಲೇಖನದಲ್ಲಿ ಕಸಬ್ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ಆತನ ವಿಚಾರಣೆ ನಡೆಸುವುದನ್ನು ಕೈಬಿಟ್ಟು ಕೂಡಲೇ ಅವನಿಗೆ ಶಿಕ್ಷೆ ನೀಡಬೇಕು ಎಂದು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಸಂಸತ್ ದಾಳಿಗೆ ಸಂಬಂಧಿಸಿದಂತೆ ಸುಪ್ರಿಂಕೋರ್ಟ್ ನಿಂದ ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ಅಫ್ಜಲ್ ಗುರುನನ್ನು ಹವಾನಿಯಂತ್ರಿತ ಜೈಲಿನಲ್ಲಿ ಇರಿಸಲಾಗಿದೆ.
ಕಸಬ್ ಕೂಡಾ ಆತನ ಪಟ್ಟಿಗೆ ಸೇರಬಹುದು ಎಂಬ ಆತಂಕ ವ್ಯಕ್ತಪಡಿಸಿರುವ ಠಾಕ್ರೆ, ಮುಸ್ಲಿಮರ ಮತಗಳನ್ನು ಪಡೆಯುವ ಏಕೈಕ ಉದ್ದೇಶದಿಂದ ಸರಕಾರ ಉಗ್ರರನ್ನು ರಕ್ಷಿಸುತ್ತಿರುವುದು ಅತ್ಯಂತ ಖಂಡನೀಯ. ನಗರದ ಗೇಟ್ ವೇ ಆಫ್ ಇಂಡಿಯಾದ ಬಳಿ ಕಸಬ್ ನನ್ನು ನೇಣಿಗೇರಿಸಬೇಕು. ಇದರೊಂದಿಗೆ ಮುಂಬೈ ದಾಳಿಯಲ್ಲಿ ಮಡಿದ ವೀರಯೋಧರ ಆತ್ಮಕ್ಕೆ ಶಾಂತಿ ದೊರೆಕಿಸಿಕೊಡಬೇಕು ಎಂದು ಅವರು ಆಗ್ರಹಿಸಿದ್ದಾರೆ.
(ಏಜನ್ಸೀಸ್)












Click it and Unblock the Notifications