ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಸಬ್ ನನ್ನು ಗೇಟ್ ವೇ ಮುಂದೆ ನೇಣಿಗೇರಿಸಿ : ಠಾಕ್ರೆ

By Staff
|
Google Oneindia Kannada News

Kasab
ಮುಂಬೈ, ಜು. 23 : ಮುಂಬೈ ಭಯೋತ್ಪಾದನೆಗೆ ಸಂಬಂಧಿಸಿದಂತೆ ನ್ಯಾಯಾಲಯದ ಎದುರು ತಪ್ಪೊಪ್ಪಿಕೊಂಡಿರುವ ಉಗ್ರ ಅಜ್ಮಲ್ ಅಮೀರ್ ಕಸಬ್ ನನ್ನು ಸಾರ್ವಜನಿಕ ಸ್ಥಳದಲ್ಲಿ ನೇಣಿಗೇರಿಸಬೇಕು ಎಂದು ಶಿವಸೇನೆ ಮುಖಂಡ ಬಾಳಾ ಠಾಕ್ರೆ ಒತ್ತಾಯಿಸಿದ್ದಾರೆ. ಮುಂಬೈ ಭಯೋತ್ಪಾದನೆಯಲ್ಲಿ ವೀರಮರಣವನ್ನಪ್ಪಿದ ಹೇಮಂತ್ ಕರ್ಕರೆ ಪತ್ನಿ ಕವಿತಾ ಕರ್ಕರೆ ಕೂಡಾ ಉಗ್ರ ಕಸಬ್ ಗೆ ಬಹಿರಂಗ ಸ್ಥಳದಲ್ಲಿ ನೇಣಿಗೇರಿಸಬೇಕು ಎಂದು ಆಗ್ರಹಿಸಿದ್ದರು.

ಶಿವಸೇನೆಯ ಮುಖವಾಣಿ ಸಾಮ್ನಾದ ಸಂಪಾದಕೀಯ ಲೇಖನದಲ್ಲಿ ಕಸಬ್ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ಆತನ ವಿಚಾರಣೆ ನಡೆಸುವುದನ್ನು ಕೈಬಿಟ್ಟು ಕೂಡಲೇ ಅವನಿಗೆ ಶಿಕ್ಷೆ ನೀಡಬೇಕು ಎಂದು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಸಂಸತ್ ದಾಳಿಗೆ ಸಂಬಂಧಿಸಿದಂತೆ ಸುಪ್ರಿಂಕೋರ್ಟ್ ನಿಂದ ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ಅಫ್ಜಲ್ ಗುರುನನ್ನು ಹವಾನಿಯಂತ್ರಿತ ಜೈಲಿನಲ್ಲಿ ಇರಿಸಲಾಗಿದೆ.

ಕಸಬ್ ಕೂಡಾ ಆತನ ಪಟ್ಟಿಗೆ ಸೇರಬಹುದು ಎಂಬ ಆತಂಕ ವ್ಯಕ್ತಪಡಿಸಿರುವ ಠಾಕ್ರೆ, ಮುಸ್ಲಿಮರ ಮತಗಳನ್ನು ಪಡೆಯುವ ಏಕೈಕ ಉದ್ದೇಶದಿಂದ ಸರಕಾರ ಉಗ್ರರನ್ನು ರಕ್ಷಿಸುತ್ತಿರುವುದು ಅತ್ಯಂತ ಖಂಡನೀಯ. ನಗರದ ಗೇಟ್ ವೇ ಆಫ್ ಇಂಡಿಯಾದ ಬಳಿ ಕಸಬ್ ನನ್ನು ನೇಣಿಗೇರಿಸಬೇಕು. ಇದರೊಂದಿಗೆ ಮುಂಬೈ ದಾಳಿಯಲ್ಲಿ ಮಡಿದ ವೀರಯೋಧರ ಆತ್ಮಕ್ಕೆ ಶಾಂತಿ ದೊರೆಕಿಸಿಕೊಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

(ಏಜನ್ಸೀಸ್)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X