ಶಿವಮೊಗ್ಗ ಲಕ್ಷ್ಮಿ ಚಿತ್ರಮಂದಿರದಲ್ಲಿ ಲವ್ ಗುರು ಧ್ಯಾನ
ಶಿವಮೊಗ್ಗ, ಜು. 24 : ಹೊಸ ಟ್ರೆಂಡ್ನ ಅಭಿರುಚಿಗೆ ತಕ್ಕಂತೆ ಭಾವನೆಗಳಿಗೆ ಒತ್ತು ಕೊಟ್ಟು ಲವ್ ಗುರು ಚಿತ್ರವನ್ನು ನಿರ್ದೇಶಿಸಿದ್ದು, ಎಲ್ಲಾ ವರ್ಗದ ಜನರಿಗೆ ಇಷ್ಟವಾಗುವಂತೆ ನಿರ್ಮಿಸಲಾಗಿದೆ ಎಂದು ನಿರ್ದೇಶಕ ಪ್ರಶಾಂತ್ರಾಜ್ ತಿಳಿಸಿದರು.
ನಗರದ ಲಕ್ಷ್ಮೀ ಚಿತ್ರಮಂದಿರದಲ್ಲಿ ಲವ್ ಗುರು ಚಿತ್ರ ತಂಡದ ಜೊತೆಗೆ ಪ್ರೇಕ್ಷಕರೊಡನೆ ಚಿತ್ರ ವೀಕ್ಷಿಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿಯೊಬ್ಬರಿಗೂ ತಮ್ಮದೇ ಆದ ಕಲ್ಪನೆ ಹಾಗೂ ಭಾವನೆಗಳಿದ್ದು, ಅವುಗಳನ್ನು ವ್ಯಕ್ತಪಡಿಸುವ ರೀತಿ ಮಾತ್ರ ವಿಭಿನ್ನವಾಗಿರುತ್ತದೆ. ಇಂದಿನ ಯುವ ಜನತೆ ಪ್ರತಿಯೊಂದರಲ್ಲೂ ದಿಢೀರ್ ಫಲಿತಾಂಶ ಬಯಸುತ್ತಿದ್ದು, ಅದಕ್ಕನುಗುಣವಾಗಿ ಹೊಸ ಪ್ರಯೋಗವಾಗಿ ಈ ಚಿತ್ರವನ್ನು ನಿರ್ದೇಶಿಸಿದ್ದೇನೆ ಎಂದರು.
ಬೆಂಗಳೂರು, ಮೈಸೂರು, ಹಾಸನ ಸೇರಿದಂತೆ ಚಿತ್ರ ಬಿಡುಗಡೆಗೊಂಡ ಕೆಲವು ನಗರಗಳಲ್ಲಿ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಶ್ರದ್ಧೆಯಿಂದ ನಿರ್ಮಿಸಿದ ಚಿತ್ರ ಇದಾಗಿದ್ದು, ಇದರ ಯಶಸ್ಸಿನ ನಂತರ ಮುಂದಿನ ಚಿತ್ರವನ್ನು ನಿರ್ದೇಶಿಸುವ ಗುರಿಯನ್ನಿಟ್ಟುಕೊಂಡಿದ್ದೇನೆ. ಕನ್ನಡ ಜನತೆ ಸ್ವಮೇಕ್ ಚಿತ್ರಗಳಿಗೆ ಹೆಚ್ಚಿನ ಪ್ರೋತ್ಸಾಹವನ್ನು ಕೊಡಬೇಕು. ಲವ್ ಗುರು ಕೂಡ ಸ್ವಮೇಕ್ ಆಗಿದ್ದು, ನನ್ನ ನಿರ್ದೇಶನದ ಪ್ರಥಮ ಚಿತ್ರವಾಗಿದೆ. ಕನ್ನಡ ಚಿತ್ರರಂಗ ಬೆಳೆಯಲು ಸ್ವಮೇಕ್ ಚಿತ್ರಗಳ ಅಗತ್ಯವಿದ್ದು, ತಾನು ಕೂಡ ಈ ದಿಕ್ಕಿನಲ್ಲಿಯೇ ಮುಂದುವರೆಯಲು ಬಯಸುತ್ತೇನೆಂದು ಹೇಳಿದರು.
ಚಿತ್ರದ ನಾಯಕ ತರುಣ್ ಮಾತನಾಡಿ, ತಾನು ನಟಿಸಿದ ಹಿಂದಿನ ಎಲ್ಲಾ ಚಿತ್ರಗಳಿಗಿಂತ ಲವ್ ಗುರು ಚಿತ್ರದಲ್ಲಿ ಉತ್ತಮವಾಗಿ ನಟಿಸಿದ್ದೇನೆ. ಇದಕ್ಕೆ ಎಲ್ಲರಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕಿದ್ದು, ಕಲಾವಿದನಾಗಿರುವ ನನಗೆ ಇನ್ನೂ ಉತ್ತಮವಾಗಿ ನಟಿಸಬೇಕೆಂಬ ಹಂಬಲವಿದೆ. ಮುಂದಿನ ದಿನಗಳಲ್ಲಿ ಅದನ್ನು ಸಕಾರಗೊಳಿಸಲು ಪ್ರಯತ್ನಿಸುತ್ತೇನೆ. ಕನ್ನಡ ಜನತೆ ಪ್ರೋತ್ಸಾಹ ನೀಡಬೇಕೆಂದು ಮನವಿ ಮಾಡಿದರು.
ಚಿತ್ರದ ನಾಯಕಿ ರಾಧಿಕಾ ಪಂಡಿತ್ ಮಾತನಾಡಿ, ಚಿತ್ರರಂಗಕ್ಕೆ ಬಂದಾಗಿನಿಂದ ಒಂದಿಲ್ಲೊಂದು ವಿಭಿನ್ನ ಪಾತ್ರದಲ್ಲಿ ನಟಿಸಿದ್ದೇನೆ. ಮೊಗ್ಗಿನ ಮನಸು ಚಿತ್ರದ ನಂತರ ಬಿಡುಗಡೆಗೊಂಡ ಒಲವೇ ಜೀವನ ಲೆಕ್ಕಾಚಾರ ಚಿತ್ರದಲ್ಲೂ ಕೂಡ ಚಾಲೆಂಜಿಂಗ್ ಪಾತ್ರದಲ್ಲಿ ಅಭಿನಯಿಸಿದ್ದು, ಎಲ್ಲರಿಗೂ ಇಷ್ಟವಾಗಿತ್ತು. ಅಂತೆಯೇ, ಲವ್ ಗುರು ಚಿತ್ರದಲ್ಲೂ ಕೂಡ ತುಂಬಾ ಲವಲವಿಕೆಯ ಪಾತ್ರವಾಗಿದ್ದು, ಚೆನ್ನಾಗಿಯೇ ಅಭಿನಯಿಸಿದ್ದೇನೆ ಎಂಬ ಭರವಸೆ ಇದೆ ಎಂದು ಹೇಳಿದರು.ಸುದ್ದಿಗೋಷ್ಠಿಯಲ್ಲಿ ಲವ್ ಗುರು ಚಿತ್ರ ತಂಡದ ಹಲವರು ಉಪಸ್ಥಿತರಿದ್ದರು.
ಚಿತ್ರ: ಕೆ.ಆರ್. ಸೋಮನಾಥ್
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications