ಗೋವಂಶ ಹತ್ಯೆ ನಿಷೇಧ ಕಾನೂನು ಜಾರಿ : ಆಚಾರ್ಯ

ಗೋವಂಶ ಹತ್ಯೆ ಮುಕ್ತ ಕರ್ನಾಟಕ ನಿರ್ಮಾಣ ಸಂಘಟನೆಗಳ ಒಕ್ಕೂಟ ನಗರದಲ್ಲಿ ಆಯೊಜಿಸಿದ್ದ ಸರ್ವಧರ್ಮ ಗುರುಗಳ ಶೃಂಗ ಸಭೆಯಲ್ಲಿ ಅವರು ಈ ಭರವಸೆ ನೀಡಿದರು. ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾನೂನು ಜಾರಿಯಲ್ಲಿದೆ. ಆದರೆ ಕಾನೂನನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿಲ್ಲ. ಗೋವುಗಳ ಸಾಗಾಣಿಕೆ ಆಗುತ್ತಿರುವ ಆರೋಪಗಳು ಕೇಳಿಬರುತ್ತಲೇ ಇವೆ. ಹಾಗಾಗಿ ಹೊಸ ಕಾನೂನು ರೂಪಿಸುವ ಚಿಂತನೆ ನಡೆಸಲಾಗಿದೆ ಎಂದು ಆಚಾರ್ಯ ಹೇಳಿದರು.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications