ಬಳ್ಳಾರಿ ಸಂಸದೆ ಶಾಂತಾ ಸಂಸತ್ ಭಾಷಣ

ಮೊದಲು ಹೆಣ್ಣುಮಗು ಜನನವಾದರೆ ಮನೆಮಾರಿ ಎಂದು ತಿಳಿದು ಭ್ರೂಣ ಹತ್ಯೆಗೆ ಮುಂದಾಗುತ್ತಿದ್ದರು. ಇವಳು ಕುಟುಂಬಕ್ಕೆ ಹೊರೆಯಾಗುತ್ತಾಳೆ ಎಂದು ಹೆತ್ತವರೇ ಚಿಂತಿತವಾಗುವ ಕಾಲವಿತ್ತು. ಆದರೆ ಇಂದು ಕರ್ನಾಟಕದಲ್ಲಿ ಹೆಣ್ಣುಮಗು ಜನಿಸಿದರೆ ಲಕ್ಷ್ಮೀಪುತ್ರಿ ಜನನವಾಯಿತು, ಭಾಗ್ಯದ-ಬಾಗಿಲು ತೆರೆಯಿತು ಎಂದು ಮನೆಮಂದಿಯೆಲ್ಲ ಸಂತಸ ಪಡುವ ವಾತಾವರಣ ನೆಲೆಸಿದೆ.
ಇದಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯುರಪ್ಪರ ಸರ್ಕಾರ ಜಾರಿಗೊಳಿಸಿರುವ ಭಾಗ್ಯಲಕ್ಚ್ಮಿ ಯೋಜನೆ ಕಾರಣವಾಗಿದೆ. ಕರ್ನಾಟಕ ಸರ್ಕಾರದ ಮತ್ತೊಂದು ಕೊಡುಗೆ ಏನಂದರೆ ಬಡ ಶಾಲಾ ಮಕ್ಕಳ ವಿದ್ಯಾರ್ಜನೆಗೆ ಅನುಕೂಲವಾಗಲೆಂದು ವಿತರಿಸಿರುವ ಉಚಿತ-ಸೈಕಲ್. ಅದೇರೀತಿ ರಾಜ್ಯ ಸರ್ಕಾರವು ಆರಂಭಿಸಿರುವ ತುರ್ತು ಅಂಬ್ಯುಲನ್ಸ್ ಸೇವೆ ಬಡವರಿಗೆ ವರದಾನವಾಗಿ ಪರಿಣಮಿಸಿದೆ. ಸುಸಜ್ಜಿತವಾದ ಈ ಅಂಬ್ಯುಲೆನ್ಸಗಳಲ್ಲಿ ತುರ್ತು ಹೆರಿಗೆ ಮಾಡಿಸಿ ಅನೇಕ ಸ್ತ್ರೀಯರ ಪ್ರಾಣವನ್ನು ಉಳಿಸಲಾಗಿದೆ. ಕೇಂದ್ರ ಸರ್ಕಾರವು ಇಂತಹ ಜನೋಪಯೋಗಿ ಯೋಜನೆಗಳನ್ನು ಎಲ್ಲಾ ರಾಜ್ಯಗಳಲ್ಲಿಯೂ ಜಾರಿಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಬೆಕೇಂದು ಒತ್ತಾಯಿಸಿದರು.
ಯತ್ರ ನಾರ್ಯತ್ಸು ಪೂಜ್ಯಂತೇ ರಮಂತೇ ತತ್ರ ದೇವತಾ (ಎಲ್ಲಿ ಮಹಿಳೆಯರು ಪೂಜನೀಯರಾಗಿರುತ್ತಾರೋ ಅಲ್ಲಿ ದೇವತೆಗಳೂ ನೆಲೆಸುತ್ತಾರೆ) ಎಂಬ ಸಂಸ್ಕೃತ ಶ್ಲೋಕದೊಂದಿಗೆ ತಮ್ಮ ಭಾಷಣವನ್ನು ಆರಂಭಿಸಿದ ಬಿ.ಜೆ.ಪಿಯ ಸಂಸತ್ ಸದಸ್ಯೆ ಮಹಿಳೆಯರನ್ನು ಗೌರವಿಸುವ ಭಾರತೀಯ ಸಂಸ್ಕೃತಿಯನ್ನು ಪ್ರಸ್ತಾಪಿಸಿ ಕರ್ನಾಟಕದಿಂದ ಆಯ್ಕೆಯಾಗಿ ಬಂದಿರುವ ಏಕೈಕ ಮಹಿಳಾ ಸದಸ್ಯೆಯಾದ ತಮಗೆ ಇಂತಹ ಮಹಾನ್ ವೇದಿಕೆಯಲ್ಲಿ ಮಾತನಾಡಲು ಅವಕಾಶ ನೀಡಿರುವುದಕ್ಕಾಗಿ ಸಭಾಧ್ಯಕ್ಷರಿಗೂ ಪಕ್ಷದ ಹಿರಿಯ ಮುಖಂಡರಿಗೂ ಋಣಿಯಾಗಿರುವುದಾಗಿ ಹೇಳಿದರು.
ಭಾರತವು ಇಂತಹ ಉಚ್ಚ ಪರಂಪರೆಯ ಪುಣ್ಯಭೂಮಿಯಾಗಿದ್ದರೂ ಮಹಿಳೆಯು ಸಂಕಷ್ಟ, ಶೋಷಣೆಯಿಂದ ಮುಕ್ತವಾಗಿಲ್ಲ. ಕೌಟುಂಬಿಕ ಹಿಂಸೆ, ಅತ್ಯಾಚಾರ, ದೌರ್ಜನ್ಯ ಮುಂತಾದ ಅನಿಷ್ಠಗಳು ಅವಳನ್ನು ಕಿತ್ತು ತಿನ್ನುತ್ತಿವೆ. ಸದಾ ಅವಳು ಅಭದ್ರತೆಯನ್ನು ಎದುರಿಸುತ್ತಿದ್ದಾಳೆ. ಮಹಿಳೆಯರ ಉದ್ದಾರಕ್ಕಾಗಿ ತೋರಿಕೆಯ ಯೋಜನೆಗಳನ್ನು ಪ್ರಕಟಿಸಿದರೆ ಸಾಲದು. ಮಹಿಳೆಯರಿಗೆ ರೈಲುಗಳಲ್ಲಿ, ಬಸ್ಸುಗಳಲ್ಲಿ ಪ್ರತ್ಯೇಕ ಆಸನದ ವ್ಯವಸ್ಥೆ ಮಾಡಿದರೆ ಸಾಲದು. ಮಹಿಳೆ ಆರ್ಥಿಕವಾಗಿ ಸ್ವಾವಲಂಬಿಯಾಗಬೇಕು. ಆಗ ಮಾತ್ರ ಅವಳ ಸಬಲೀಕರಣವಾಗುತ್ತದೆ. ಹಾಗೆಯೇ ಅವಳಿಗೆ ರಾಜಕೀಯ ಅಧಿಕಾರದಲ್ಲಿ ನ್ಯಾಯಯುತ ಪಾಲು ದೊರೆಯಬೇಕು. ಇದಕ್ಕಾಗಿ ಶಾಸನ ಸಭೆಗಳಲ್ಲಿ ಮಹಿಳೆಯರಿಗೆ ಮೀಸಲಾತಿ ಅಗತ್ಯವಾಗಿದೆ. ಈ ಹಿಂದೆ ಅಟಲ ಬಿಹಾರಿ ವಾಜಪೇಯಿ ನೇತೃತ್ವದ ಎನ್.ಡಿ.ಎ. ಸರ್ಕಾರ ಮಹಿಳಾ ಮೀಸಲಾತಿ ಮಸೂದೆಯನ್ನು ಅಂಗೀಕರಿಸಲು ಮುಂದಾಗಿತ್ತು. ಈಗಲಾದರೂ ಮಸೂದೆಯನ್ನು ಅಂಗೀಕರಿಸಿ ಮಹಿಳೆಯರಿಗೆ ನ್ಯಾಯ ಒದಗಿಸಿಕೊಡಬೇಕು ಎಂದು ಅವರು ಒತ್ತಾಯಿಸಿದರು.
(ದಟ್ಸ್ ಕನ್ನಡವಾರ್ತೆ)
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications