ಭ್ರಷ್ಟಾಚಾರ ಮುಕ್ತ ರಾಜ್ಯಕ್ಕಾಗಿ ಹೋರಾಟ : ಜಾಣಗೆರೆ
ಶಿವಮೊಗ್ಗ, ಜು. 25 : ಕನ್ನಡ ನಾಡಿನ ಪರ ಹೋರಾಟ ಮಾಡುವ ಹಾಗೂ ಹೊಸದೊಂದು ಚಳವಳಿಗೆ ರೂಪ ನೀಡುವ ಉದ್ದೇಶದಿಂದ ಎನ್.ಮುತ್ತಪ್ಪ ರೈರವರ ಜಯ ಕರ್ನಾಟಕ ಸಂಸ್ಥೆ ಹುಟ್ಟಿಕೊಂಡಿದ್ದು, ಈ ಸಂಸ್ಥೆಯ ಮೂಲಕ ಕಾರ್ಯ ನಿರ್ವಹಿಸುತ್ತಿದ್ದೇವೆ. ಈ ಸಂಘಟನೆಯ ಉದ್ದೇಶ ಹಣ, ಆಸ್ತಿ ಮಾಡುವುದಲ್ಲ. ಕರ್ನಾಟಕದ ಪರ ಕೆಲಸ ಮಾಡುವುದು ಎಂದು ಜಯ ಕರ್ನಾಟಕ ಸಂಸ್ಥೆಯ ನಿಯೋಜಿತ ರಾಜ್ಯಾಧ್ಯಕ್ಷ ಜಾಣಗೆರೆ ವೆಂಕಟರಾಮಯ್ಯ ಹೇಳಿದರು.
ಶನಿವಾರ ಬೆಳಿಗ್ಗೆ ಜ್ಯೂಯಲ್ರಾಕ್ ಸಭಾಂಗಣದಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಅವರು, ಸಂಸ್ಥೆಯ ಉದ್ದೇಶ ಸಂಘಟನೆ ಕಟ್ಟುವುದು. ನಾಡಿಗೆ, ಜನತೆಗೆ ಸೇವೆ ಮಾಡುವುದು. ನಾಡಿನ ಪರ ಚಳವಳಿಗೆ ಹೊಸ ರೂಪ ನೀಡುವುದು ಎಂದು ವಿವರಿಸಿದರು.
ಕಳೆದ ಆರು ದಿನಗಳಲ್ಲಿ 13 ಜಿಲ್ಲೆಗಳನ್ನು ಸುತ್ತಿ ಬಂದಿದ್ದೇನೆ. ರಾಜ್ಯದಲ್ಲಿ ಸಾಕಷ್ಟು ಸಮಸ್ಯೆಗಳಿವೆ. ಅತಂತ್ರ ಸ್ಥಿತಿ ಇದೆ. ಭ್ರಷ್ಟತೆ ತಾಂಡವವಾಡುತ್ತಿದೆ. ಸಂದಿಗ್ಧ ಸ್ಥಿತಿಯಲ್ಲಿ ಕರ್ನಾಟಕದ ಜನರಿದ್ದಾರೆ. ಇದೆಲ್ಲಾ ಸಮಸ್ಯೆಗಳನ್ನು ಹೋರಾಟದಿಂದ ಮಾತ್ರ ಬಗೆಹರಿಸಲು ಸಾಧ್ಯ. ಈ ಹಿಂದೆಯೂ ಸಾಕಷ್ಟು ಚಳವಳಿಗಳು ನಡೆದಿವೆ. ದೊಡ್ಡ ದೊಡ್ಡ ಸಂಘಟನೆಗಳನ್ನು ಕಟ್ಟಿ ಬೆಳೆಸಿದ್ದೇನೆ. ನಾಡಿನ ಪರ ಹೋರಾಡಿದ್ದೇನೆ. ಪತ್ರಿಕೋದ್ಯಮದಲ್ಲಿ ಕೆಲಸ ಮಾಡಿದ ಸಾಕಷ್ಟು ಅನುಭವವೂ ಇದೆ. ಸಾಹಿತ್ಯದಲ್ಲೂ ಗುರುತಿಸಿಕೊಂಡಿದ್ದೇನೆ. ಮೊದಮೊದಲಿಗೆ ಮುತ್ತಪ್ಪ ರೈ ಬಗ್ಗೆ ಕುತೂಹಲ ಮತ್ತು ಅನುಮಾನ ಎರಡೂ ಇತ್ತು. ಅವರೊಂದಿಗೆ ಸೇರಿ ಕರ್ನಾಟಕವನ್ನು ಭ್ರಷ್ಟಾಚಾರ ಮುಕ್ತ ರಾಜ್ಯವನ್ನಾಗಿ ಮಾಡುವುದೇ ಸಂಸ್ಥೆಯ ಗುರಿ ಎಂದು ವಿವರಿಸಿದರು.
ಶಿವಮೊಗ್ಗದಲ್ಲಿಯೂ ಸಾಮರ್ಥ್ಯವಿರುವ ತಂಡ ಕಟ್ಟಿದ್ದೇವೆ. ಶಿವಮೊಗ್ಗದ ಮೇಲೆ ನನಗೆ ವಿಶೇಷ ಪ್ರೀತಿ. ಪತ್ರಿಕೋದ್ಯಮದಲ್ಲಿದ್ದಾಗ ಬಹಳಷ್ಟು ಮೊಕದ್ದಮೆಗಳನ್ನು ಶಿವಮೊಗ್ಗದ ಜನರಿಂದ ಹಾಕಿಸಿಕೊಂಡಿದ್ದೇನೆ. ಹೋರಾಟದ ನೆಲವಾದ ಶಿವಮೊಗ್ಗದಲ್ಲಿ ಜಯ ಕರ್ನಾಟಕ ಸಂಸ್ಥೆಗೆ ಅತ್ಯುತ್ತಮ ಬೆಂಬಲ ಸಿಗುತ್ತಿದೆ ಎಂದು ಹೇಳಿದರು.
ಈಗಾಗಲೇ ಕರ್ನಾಟಕದಾದ್ಯಂತ ಜಯ ಕರ್ನಾಟಕ ಸಂಸ್ಥೆಯನ್ನು ಬಲಿಷ್ಠಗೊಳಿಸಲು ಜಿಲ್ಲಾ ಸಮಿತಿಗಳನ್ನು ರಚಿಸಲಾಗಿದೆ. ಈಗ ತಾಲ್ಲೂಕು ಸಮಿತಿಗಳನ್ನು ರಚಿಸುವ ಕೆಲಸ ನಡೆಯುತ್ತಿದೆ ಎಂದು ಹೇಳಿದರು. ಸುದ್ದಿಗೋಷ್ಠಿಯಲ್ಲಿ ರಾಜ್ಯ ಕಾರ್ಯನಿರ್ವಾಹಕ ಅಧ್ಯಕ್ಷ ಪ್ರಕಾಶ್ ರೈ, ಸಂಘಟನಾ ಕಾರ್ಯದರ್ಶಿ ರಾಧಾ ಕೃಷ್ಣನ್, ಅಶೋಕ್ ಕುಮಾರ್, ರಾಮಚಂದ್ರ, ಕೆ.ಎನ್.ಜಗದೀಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications