ಕೃಷಿಸಚಿವರಿಗೆ ವಿಮೆ ಪರಿಹಾರ ಚೆಕ್ ಹಸ್ತಾಂತರ

2008ರ ಸಾಲಿನಲ್ಲಿ ಬೆಳೆ ನಷ್ಟ ಅನುಭವಿಸಿದ 3.15 ಲಕ್ಷ ರೈತರಿಗೆ 141.46 ಕೋಟಿ ರೂ ಗಳ ಪರಿಹಾರ ನೀಡಲಾಗುತ್ತದೆ. ಈ ಹಂಗಾಮಿನಲ್ಲಿ 10.56 ಲಕ್ಷ ರೈತರು ರೂ. 39.27 ಕೋಟಿ ವಿಮಾ ಕಂತನ್ನು ಪಾವತಿಸಿದ್ದರು.
ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯನ್ನು ರಾಜ್ಯದಲ್ಲಿ 2007ರ ಮುಂಗಾರು ಹಂಗಾಮಿನಿಂದ ಪ್ರಾಯೋಗಿಕವಾಗಿ ಅನುಷ್ಠಾನ ಗೊಳಿಸಲಾಗುತ್ತಿದೆ. ಈ ಯೋಜನೆಯಡಿ 2007-08ರಿಂದ 2008ರ ಮುಂಗಾರು ಹಂಗಾಮಿನ ವರೆಗೆ 0.69 ಲಕ್ಷ ರೈತರು ರೂ. 2.32 ಕೋಟಿಗಳನ್ನು ವಿಮಾ ಕಂತಾಗಿ ಪಾವತಿಸಿದ್ದು, ಇವರಲ್ಲಿ ಅರ್ಹ 0.55ಲಕ್ಷ ರೈತರಿಗೆ ರೂ.8 ಕೋಟಿ ಬೆಳೆ ವಿಮಾ ನಷ್ಟ ಪರಿಹಾರ ವಿತರಿಸಲಾಗಿದೆ ಎಂದು ಸಚಿವರು ಈ ಸಂದರ್ಭದಲ್ಲಿ ತಿಳಿಸಿದರು.
ಈ ಯೋಜನೆಯನ್ನು ಅನುಷ್ಠಾನಗೊಳಿಸುವ ಪೂರ್ವದಲ್ಲಿ ರಾಜ್ಯದಲ್ಲಿ ವ್ಯಾಪಕ ಬೆಳೆ ವಿಮಾ ಯೋಜನೆಯ 1985-86 ರಿಂದ 1999-2000 ನೇ ಸಾಲಿನವರೆಗೆ ಚಾಲ್ತಿಯಲ್ಲಿದ್ದು. ನಂತರ ಮುಕ್ತಾಯಗೊಂಡಿರುತ್ತದೆ. ಈ ಯೋಜನೆಯಡಿ ಬೆಳೆ ಸಾಲ ಪಡೆಯುವ ರೈತರು ಮಾತ್ರ ಭಾಗವಹಿಸುತ್ತಿದ್ದರು. ಒಟ್ಟು 30.02 ಲಕ್ಷ ರೈತರು ರೂ 20.30 ಕೋಟಿಗಳನ್ನು ಈ ಯೋಜನೆಯಡಿ ವಿಮಾ ಕಂತಾಗಿ ಪಾವತಿಸಿ ಭಾಗವಹಿಸಿದ್ದು ಇವರಲ್ಲಿ ಅರ್ಹ 5.60 ಲಕ್ಷ ರೈತರಿಗೆ ರೂ 67.17 ಕೋಟಿಗಳ ಬೆಳೆ ವಿಮಾ ಬೆಳೆ ವಿಮಾ ನಷ್ಟ ಪರಿಹಾರ ವಿತರಿಸಲಾಗಿದೆ.
2000 ಮುಂಗಾರು ಹಂಗಾಮಿನಿಂದ ರಾಷ್ಟ್ರೀಯ ಕೃಷಿ ವಿಮಾ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, 2007-08ನೇ ಸಾಲಿನವರೆಗೆ 78.50 ಲಕ್ಷ ರೈತರು ರೂ 285.71 ಕೋಟಿಗಳನ್ನು ವಿಮಾ ಕಂತಾಗಿ ಪಾವತಿಸಿ ಭಾಗವಹಿಸಿದ್ದು ಇವರಲ್ಲಿ ಅರ್ಹ 31.83 ಲಕ್ಷ ರೈತರಿಗೆ ರೂ 1263.66 ಕೋಟಿಗಳ ಬೆಳೆ ವಿಮಾ ನಷ್ಟ ಪರಿಹಾರ ವಿತರಿಸಲಾಗಿದೆ.
ಈ ಸಮಾರಂಭದಲ್ಲಿ ಲೋಕೋಪಯೋಗಿ ಸಚಿವ ಸಿ.ಎಂ. ಉದಾಸಿ, ಕೃಷಿ ಇಲಾಖೆಯ ನಿರ್ದೇಶಕ ಡಾ ಎ. ರಾಜಣ್ಣ ಅವರು ಉಪಸ್ಥಿತರಿದ್ದರು.
(ದಟ್ಸ್ ಕನ್ನಡ ವಾರ್ತೆ)
-
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು












Click it and Unblock the Notifications