Get Updates
Get notified of breaking news, exclusive insights, and must-see stories!

ಬೆಳಗಾವಿಯಲ್ಲಿ ಪ್ರಮೋದ್ ಮುತಾಲಿಕ್ ಬಂಧನ

Pramod Mutalik
ಮೈಸೂರು, ಜು.25: ಮೈಸೂರಿನ ಕ್ಯಾತಮಾರನಹಳ್ಳಿ ಗಲಭೆಗೆ ಸಂಬಂಧಿಸಿದಂತೆ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರನ್ನು ಮೈಸೂರು ಉದಯಗಿರಿ ಪೊಲೀಸರು ಬೆಳಗಾವಿಯಲ್ಲಿ ಶುಕ್ರವಾರ ಮಧ್ಯರಾತ್ರಿ ಬಂಧಿಸಿದ್ದಾರೆ. ಕ್ಯಾತಮಾರನಹಳ್ಳಿ ಗಲಭೆಗೆ ಮುತಾಲಿಕ್ ಅವರ ಪ್ರಚೋದನಕಾರಿ ಭಾಷಣವೇ ಕಾರಣ ಎಂದು ಪೊಲೀಸರು ಆರೋಪಿಸಿದ್ದಾರೆ.

ಮೈಸೂರಿನಲ್ಲಿ ಪ್ರಮೋದ್ ಮುತಾಲಿಕ್ ಪ್ರಚೋದನಾಕಾರಿ ಭಾಷಣ ಮಾಡಿದ ಪರಿಣಾಮ ಅದರಿಂದ ಪ್ರಚೋದಿತರಾಗಿ ಗಲಭೆಗಳು ನಡೆದವು. ಕ್ಯಾತಮಾರನಹಳ್ಳಿ ಗಲಭೆಯಲ್ಲಿ ಮೂರು ಜನ ಮೃತಪಟ್ಟಿದ್ದರು. ಇದಕ್ಕೆಲ್ಲಾ ಮುತಾಲಿಕ್ ಅವರ ಪ್ರಚೋದನಕಾರಿ ಭಾಷಣವೇ ಕಾರಣ ಎಂದು ಆರೋಪಿಸಿ ಮುತಾಲಿಕ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಶುಕ್ರವಾರ ರಾತ್ರಿ 12.30ರ ಸಮಯದಲ್ಲಿ ಬೆಳಗಾವಿಯಲ್ಲಿ ಪ್ರಮೋದ್ ಮುತಾಲಿಕ್ ಅವರನ್ನು ಬಂಧಿಸಲಾಯಿತು. ನಂತರ ಅವರನ್ನು ಮೈಸೂರಿಗೆ ಕರೆತರಲಾಗಿದೆ. ಶನಿವಾರ ಮಧ್ಯಾಹ್ನ ಅಥವಾ ಸಂಜೆ 4 ಗಂಟೆಗೆ ಪೊಲೀಸರು ನ್ಯಾಯಾಲಯಕ್ಕೆ ಹಾಜರು ಪಡಿಸುವ ಸಾಧ್ಯತೆಗಳಿವೆ.

(ದಟ್ಸ್ ಕನ್ನಡ ವಾರ್ತೆ)

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+