ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬೆಳಗಾವಿಯಲ್ಲಿ ಪ್ರಮೋದ್ ಮುತಾಲಿಕ್ ಬಂಧನ

By Staff
|
Google Oneindia Kannada News

Pramod Mutalik
ಮೈಸೂರು, ಜು.25: ಮೈಸೂರಿನ ಕ್ಯಾತಮಾರನಹಳ್ಳಿ ಗಲಭೆಗೆ ಸಂಬಂಧಿಸಿದಂತೆ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರನ್ನು ಮೈಸೂರು ಉದಯಗಿರಿ ಪೊಲೀಸರು ಬೆಳಗಾವಿಯಲ್ಲಿ ಶುಕ್ರವಾರ ಮಧ್ಯರಾತ್ರಿ ಬಂಧಿಸಿದ್ದಾರೆ. ಕ್ಯಾತಮಾರನಹಳ್ಳಿ ಗಲಭೆಗೆ ಮುತಾಲಿಕ್ ಅವರ ಪ್ರಚೋದನಕಾರಿ ಭಾಷಣವೇ ಕಾರಣ ಎಂದು ಪೊಲೀಸರು ಆರೋಪಿಸಿದ್ದಾರೆ.

ಮೈಸೂರಿನಲ್ಲಿ ಪ್ರಮೋದ್ ಮುತಾಲಿಕ್ ಪ್ರಚೋದನಾಕಾರಿ ಭಾಷಣ ಮಾಡಿದ ಪರಿಣಾಮ ಅದರಿಂದ ಪ್ರಚೋದಿತರಾಗಿ ಗಲಭೆಗಳು ನಡೆದವು. ಕ್ಯಾತಮಾರನಹಳ್ಳಿ ಗಲಭೆಯಲ್ಲಿ ಮೂರು ಜನ ಮೃತಪಟ್ಟಿದ್ದರು. ಇದಕ್ಕೆಲ್ಲಾ ಮುತಾಲಿಕ್ ಅವರ ಪ್ರಚೋದನಕಾರಿ ಭಾಷಣವೇ ಕಾರಣ ಎಂದು ಆರೋಪಿಸಿ ಮುತಾಲಿಕ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಶುಕ್ರವಾರ ರಾತ್ರಿ 12.30ರ ಸಮಯದಲ್ಲಿ ಬೆಳಗಾವಿಯಲ್ಲಿ ಪ್ರಮೋದ್ ಮುತಾಲಿಕ್ ಅವರನ್ನು ಬಂಧಿಸಲಾಯಿತು. ನಂತರ ಅವರನ್ನು ಮೈಸೂರಿಗೆ ಕರೆತರಲಾಗಿದೆ. ಶನಿವಾರ ಮಧ್ಯಾಹ್ನ ಅಥವಾ ಸಂಜೆ 4 ಗಂಟೆಗೆ ಪೊಲೀಸರು ನ್ಯಾಯಾಲಯಕ್ಕೆ ಹಾಜರು ಪಡಿಸುವ ಸಾಧ್ಯತೆಗಳಿವೆ.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X