ಮುದ್ರಣ ಮಾಧ್ಯಮದ ಪ್ರಭಾವ ಕುಂದಿಲ್ಲ

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಕುವೆಂಪು ವಿವಿಯ ಪತ್ರಿಕೋದ್ಯಮ ವಿಭಾಗದಿಂದ ಡಿಸಿಸಿ ಬ್ಯಾಂಕ್ನ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾ ದಿನಾಚರಣೆ ಮತ್ತು ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪತ್ರಿಕೋದ್ಯಮದಲ್ಲಿರುವವರು ವಿಶ್ವಾಸಾರ್ಹತೆ ಮತ್ತು ನಂಬಿಕೆಯನ್ನು ಹೊಂದಿರಬೇಕು. ಜೊತೆಗೆ, ಪ್ರಚಲಿತ ವಿದ್ಯಮಾನ, ಭೌಗೋಳಿಕ ಜ್ಞಾನ ತಿಳಿದಿರಬೇಕು. ಅಂತಹ ಪತ್ರಕರ್ತರು ಶಿವಮೊಗ್ಗದಲ್ಲಿದ್ದಾರೆಂದು ತಿಳಿಸಿದರು.
ದೃಶ್ಯ ಮಾಧ್ಯಮ ಬಂದ ಮೇಲೆ ಮುದ್ರಣ ಮಾಧ್ಯಮ ಪ್ರಭಾವ ಕಡಿಮೆಯಾಗುವುದೆಂದು ಭಾವಿಸಲಾಗಿತ್ತು. ಆದರೆ, ಪತ್ರಿಕೆಯ ಮೇಲೆ ಯಾವುದೇ ರೀತಿಯ ಪ್ರಭಾವ ಬೀರದೆ ಎರಡೂ ಮಾಧ್ಯಮಗಳು ಜನರಲ್ಲಿ ಪ್ರಭಾವ ಬೀರಿದೆ ಎಂದರು. ಜಾಗತೀಕರಣ ಬಂದ ಸಂದರ್ಭದಲ್ಲಿ ಆತಂಕದ ಸನ್ನಿವೇಶವನ್ನು ಎದುರಿಸಿತ್ತು. ಅನಾರೋಗ್ಯಕರ ಬೆಳವಣಿಗೆ, ಕ್ಷುಲ್ಲಕ ವಿಚಾರಗಳನ್ನು ಕಡಿಮೆ ಮಾಡಿ ಸಮಾಜವನ್ನು ಎಚ್ಚರಿಸುವ ನಿಟ್ಟಿನಲ್ಲಿ ಮಾಧ್ಯಮಗಳು ಮುಂದಾಗಬೇಕು. ಇದು ಪತ್ರಕರ್ತರಾದವರಿಗೆ ಮಾತ್ರ ಸಾಧ್ಯ ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರು ಹಾಗೂ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಂಜುನಾಥ್ರವರು ಮಾತನಾಡಿ, ಹಿಂದಿನ ದಿನಗಳಲ್ಲಿ ಪತ್ರಿಕೆಯನ್ನು ಒಂದು ಸೇವೆ, ಮಾಹಿತಿ ನೀಡುವುದು ಎಂದು ತಿಳಿದಿದ್ದರು. ಆದರೆ, ಇತ್ತೀಚಿನ ದಿನಗಳಲ್ಲಿ ವ್ಯಾಪಾರೀಕರಣವಾಗಿದೆ. ಇಂದು ಪತ್ರಿಕೆಗಳು ಅನೇಕ ರೀತಿಯ ಕಷ್ಟಗಳನ್ನು ಎದುರಿಸುತ್ತಿದ್ದು, ಇಂತಹ ಸಂಕಷ್ಟದ ದಿನಗಳಲ್ಲೂ ಉತ್ತಮ ರೀತಿಯಲ್ಲಿ ನಡೆಯುತ್ತಿದೆ ಎಂದರು. ದೃಶ್ಯ ಮಾಧ್ಯಮದಿಂದ ಮುದ್ರಣ ಮಾಧ್ಯಮ ಹೆಚ್ಚು ನಿಖರವಾಗಿರುತ್ತದೆ. ದೃಶ್ಯ ಮಾಧ್ಯಮದಿಂದ ಮುದ್ರಣ ಮಾಧ್ಯಮಕ್ಕೆ ಯಾವುದೇ ರೀತಿಯ ಧಕ್ಕೆಯುಂಟಾಗಿಲ್ಲ. ಮುದ್ರಣ ಮಾಧ್ಯಮವು ಚೆನ್ನಾಗಿ ನಡೆಯುತ್ತಿದೆ ಎಂದು ತಿಳಿಸಿದರು.
ನಾವಿಕ ಪತ್ರಿಕೆಯ ಸಂಪಾದಕರಾದ ಚಂದ್ರಕಾಂತ್ ಮಾತನಾಡಿ, ಇಂದಿನ ದಿನಗಳಲ್ಲಿ ಪತ್ರಕರ್ತರು ಆಸೆ, ಆಮಿಷಗಳಿಗೆ ಒಳಗಾಗುತ್ತಾ ಆತಂಕಪಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ರೀತಿ ಆಮಿಷಗಳನ್ನು ತಲೆ ಎತ್ತದಂತೆ ತೋಡಿಕೊಳ್ಳುವ ಜವಾಬ್ದಾರಿ ಇದೆ. ಪತ್ರಿಕೆಯನ್ನು ಖಡ್ಗಕ್ಕಿಂತ ಹರಿತ ಎನ್ನುತ್ತಾರೆ. ಸಮಾಜದ ಒಳಿತಿಗಾಗಿ ಪತ್ರಿಕೆಯನ್ನು ಬಳಸಿಕೊಳ್ಳಬೇಕೇ ಹೊರತು ವ್ಯಕ್ತಿಗತ ತೇಜೋವಧೆ ಮಾಡದೆ ನೈಜ ಘಟನೆಯನ್ನು ಜನರಲ್ಲಿ ತಿಳಿಸುವಂತಹ ಕೆಲಸಕ್ಕೆ ಮುಂದಾಗಬೇಕೆಂದರು.
ಕುವೆಂಪು ವಿವಿಯ ವಿಭಾಗ ಹೊಂದಿ ದಾವಣಗೆರೆ ವಿವಿಯಾಗುವುದರಿಂದ ವ್ಯಾಪ್ತಿಯಲ್ಲಿ ಚಿಕ್ಕದಾಗುತ್ತದೆ. ಇದರ ವ್ಯಾಪ್ತಿ 83 ಕಾಲೇಜುಗಳು ಮಾತ್ರ ಬರುವುದರಿಂದ ಭವಿಷ್ಯದಲ್ಲಿ ಹಿನ್ನಡೆಯಾಗುವ ಸಂಭವವಿದೆ. ಹೀಗಾಗಿ ಕುಲಪತಿಗಳು ಸರ್ಕಾರದ ಗಮನ ಸೆಳೆಯಲು ಮುಂದಾಗಬೇಕೆಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತರಾದ ಟಿ.ಡಿ.ಶಂಕರನಾರಾಯಣ್, ಟಿ.ಆರ್.ಎಸ್.ನಗರ್, ಬಿ.ಶ್ರೀನಿವಾಸ್ ರಾವ್, ಕೆ.ಬಿ.ರಾಮಪ್ಪರವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಟೈಮ್ಸ್ ಆಫ್ ಇಂಡಿಯಾ (ಕನ್ನಡ) ಸಂಪಾದಕರಾದ ಈಶ್ವರ್ ದೈತೋಟ, ಸುವರ್ಣ ಟಿ.ವಿ.ಯ ಶಶಿಧರ್ ಭಟ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
-
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ












Click it and Unblock the Notifications