ರಾಮನಗರ : ಅಂಬಿ, ಸರೋಜಾದೇವಿ ಸ್ಪರ್ಧೆ ?

ಆಡಳಿತ ಪಕ್ಷ ಹಾಗೂ ಪ್ರತಿಪಕ್ಷಗಳಿಗೆ ಭಾರಿ ಪ್ರತಿಷ್ಠೆ ಕಣವಾಗಿ ಮಾರ್ಪಟ್ಟಿರುವ ಉಪಚುನಾವಣೆಗಳಲ್ಲಿ ಗೆಲ್ಲುವ ಅಭ್ಯರ್ಥಿಗಳ ಹುಡುಕಾಟ ಆರಂಭವಾಗಿದ್ದು, ಇಂದು ಬಹುತೇಕ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳ ಅಭ್ಯರ್ಥಿಗಳ ಪಟ್ಟಿ ಅಧಿಕೃತವಾಗಿ ಹೊರಬೀಳುವ ಸಾಧ್ಯತೆ ಇದೆ. ನಾಮಪತ್ರ ಸಲ್ಲಿಸಲು ಬುಧವಾರ ಕೊನೆಯ ದಿನವಾಗಿದ್ದು, ಇಂದಿನಿಂದ ನಾಮಪತ್ರ ಸಲ್ಲಿಕೆಗಳ ಭರಾಟೆ ಶುರುವಾಗಿದೆ.
ರಾಮನಗರ ಜೆಡಿಎಸ್ ಪಕ್ಷದ ಗೆಲ್ಲುವ ಕಣ. ಇಲ್ಲಿ ಜೆಡಿಎಸ್ ಅಭ್ಯರ್ಥಿ ಯಾರಾಗುತ್ತಾರೆ ಎನ್ನುವುದು ತೀವ್ರ ಕುತೂಹಲ ಕೆರಳಿಸಿದೆ. ದೇವೇಗೌಡರು ರಾಮನಗರಕ್ಕೆ ಅಲ್ಪಸಂಖ್ಯಾತ ಅಭ್ಯರ್ಥಿಯನ್ನು ಕಣಕ್ಕಿಳಿಸುವುದು ಉತ್ತಮ ಎಂಬ ಚಿಂತನೆಯಲ್ಲಿದ್ದಾರೆ. ಆದರೆ, ಅಂತಿಮ ಕುಮಾರಸ್ವಾಮಿ ಅವರ ತೀರ್ಮಾನದ ಮೇಲೆ ಅಭ್ಯರ್ಥಿಯ ಅಯ್ಕೆ ಅಂತಿಮಗೊಳ್ಳಲಿದೆ ಎನ್ನಲಾಗಿದೆ. ಮಾಜಿ ಶಾಸಕ ಸಿ ಎಂ ಲಿಂಗಪ್ಪ ಈಗಾಗಲೇ ನಾಮಪತ್ರ ಸಲ್ಲಿಸಿದ್ದರಿಂದ ಕಾಂಗ್ರೆಸ್ ಪಕ್ಷ ಇಕ್ಕಟ್ಟಿನಲ್ಲಿ ಸಿಲುಕಿದಂತಾಗಿದೆ.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications