ಚನ್ನಪಟ್ಟಣ ತಾಲೂಕಿನಾದ್ಯಂತ ಚಿಕೂನ್ಗುನ್ಯಾ ಹಾವಳಿ
ಚನ್ನಪಟ್ಟಣ, ಜು. 27 : ಕಳೆದ ಒಂದೂವರೆ ತಿಂಗಳಿನಿಂದ ತಾಲೂಕಿನಾದ್ಯಂತ ಚಿಕೂನ್ಗುನ್ಯಾ ಖಾಯಿಲೆ ನಾಗರೀಕರನ್ನು ತಲ್ಲಣಗೊಳಿಸಿದ್ದು, ಖಾಯಿಲೆ ನಿಯಂತ್ರಣಕ್ಕೆ ಬಾರದೆ ಎಲ್ಲೆಡೆ ವ್ಯಾಪಿಸುತ್ತಿದೆ. ಗ್ರಾಮೀಣ ಪ್ರದೇಶದಲ್ಲಿ ಚಿಕೂನ್ ಗುನ್ಯಾ ಪೀಡಿತರ ಸಂಖ್ಯೆ ದಿನೇ ದಿನೇ ಏರುತ್ತಲೇ ಇದ್ದು, ಇದನ್ನು ನಿಯಂತ್ರಿಸುವಲ್ಲಿ ತಾಲೂಕು ಆಡಳಿತ, ಸಂಬಂಧಿಸಿದ ಇಲಾಖೆ ಸಂಪೂರ್ಣ ನಿಷ್ಕ್ರಿಯವಾಗಿವೆ.
ಹೆಚ್ಚಾಗಿ ಗ್ರಾಮಾಂತರ ಪ್ರದೇಶ ವ್ಯಾಪ್ತಿಯಲ್ಲೇ ವೇಗವಾಗಿ ಹರಡುತ್ತಿರುವ ಈ ಖಾಯಿಲೆಯಿಂದಾಗಿ ಹಳ್ಳಿಯ ಜನ ತತ್ತರಿಸಿದ್ದಾರೆ. ಉತ್ತಮ ಮಳೆಯಾಗಿ ಬಿತ್ತನೆ ಮಾಡುವ ಸಂದರ್ಭದಲ್ಲಿ ಮೈಕೈ ಕೀಲುಗಳ ನೋವಿನಿಂದ ನರಳುವಂಥಹಾ ಸ್ಥಿತಿ ತಲೆದೋರಿದೆ. ಈಗ ಕೃಷಿ ಚಟುವಟಿಕೆಯಲ್ಲಿ ರೈತರು ತೊಡಗುವ ಸಮಯ. ಆದರೆ ಕರೆಯದೆ ಬಂದ ಈ ಅತಿಥಿಯಿಂದಾಗಿ ರೈತರು ಬೇಸಾಯ ಮರೆತು ಮೂಲೆಯಲ್ಲಿ ಕೂರುವಂತಾಗಿದೆ.
ಸಂಬಂಧಿಸಿದ ಇಲಾಖೆ ಈ ರೋಗವನ್ನು ಹತೋಟಿಗೆ ತರುವಲ್ಲಿ ಸಂಪೂರ್ಣ ವಿಫಲವಾಗಿದೆ. ದಿನವಿಡೀ ತಾಲೂಕಿನ ಆಸ್ಪತ್ರೆಗಳು ರೋಗಿಗಳಿಂದಾಗಿ ಕಿಕ್ಕಿರಿಯುತ್ತಿವೆ. ಇದನ್ನು ನಿಯಂತ್ರಿಸುವಲ್ಲಿ ಗ್ರಾಮ ಪಂಚಾಯಿತಿಗಳೂ ಸಹ ದಿವ್ಯ ನಿರ್ಲಕ್ಷ್ಯ ತೋರುತ್ತಿದ್ದು, ಹಳ್ಳಿಗಳ ಚರಂಡಿ, ಗುಂಡಿ ಬಿದ್ದ ರಸ್ತೆ, ನೀರು ನಿಲ್ಲುವ ಸ್ಥಳಗಳನ್ನು ಸ್ವಚ್ಚಗೊಳಿಸದೆ ಕೇವಲ ರಾಜಕಾರಣದ ಪಡಸಾಲೆಗಳಾಗಿ ಪರಿವರ್ತನೆಯಾಗಿವೆ.
ಹಳ್ಳಿಗಾಡಿನ ಮುಗ್ದ ರೈತರು ಈ ಖಾಯಿಲೆಯ ಬಗ್ಗೆ ಅರಿವಿಲ್ಲದೆ ದಿನೇ ದಿನೇ ರೋಗಕ್ಕೆ ತುತ್ತಾಗುತ್ತಿದ್ದಾರೆ. ಈ ಖಾಯಿಲೆ ಬಗ್ಗೆ ಕನಿಷ್ಠ ಅರಿವು ಮೂಡಿಸುವ ಕಾರ್ಯಕ್ರಮಗಳನ್ನೂ ಸಹ ಸಂಬಂಧಿಸಿದ ಇಲಾಖೆ ಹಮ್ಮಿಕೊಳ್ಳದಿರುವುದು ದುರಂತದ ಸಂಗತಿಯಾಗಿದೆ.
ತಾಲೂಕಿನ ಸುಮಾರು ಅರ್ಧಭಾಗವನ್ನು ಆವರಿಸಿರುವ ಈ ಖಾಯಿಲೆ ದಿನೇ ದಿನೇ ತನ್ನ ವ್ಯಾಪ್ತಿಯನ್ನು ವಿಸ್ತರಿಸುತ್ತಿದ್ದು, ಇದುವರೆಗೂ ಈ ಖಾಯಿಲೆಗೆ ಯಾರೂ ಬಲಿಯಾಗದಿರುವುದು ನಾಗರೀಕರಲ್ಲಿ ಸಮಾಧಾನ ಮೂಡಿಸಿದೆ. ಇನ್ನೂ ಕೆಲವೆಡೆ ಹಳ್ಳಿಯಲ್ಲಿನ ಪ್ರತಿಯೊಬ್ಬರೂ ಈ ಖಾಯಿಲೆಗೆ ತುತ್ತಾಗಿದ್ದು, ಕುಟುಂಬದ ನಿರ್ವಹಣೆ ಮಾಡುವವರೇ ಮೂಲೆಯಲ್ಲಿ ಕುಳಿತುಕೊಳ್ಳುವಂತಾಗಿದೆ. ಹೀಗಾಗಿ ಕೃಷಿ ಚಟುವಟಿಕೆ, ದಿನನಿತ್ಯದ ಕೆಲಸಗಳು ಸಾಗದೆ ಜನತೆ ಕಂಗಾಲಾಗಿದ್ದಾರೆ.
ಸಂಬಂಧಿಸಿದ ಇಲಾಖೆ ಕೇವಲ ಪಟ್ಟಣ ವ್ಯಾಪ್ತಿಯಲ್ಲಿ ಮಾತ್ರ ಜಾಗೃತಿ ಕಾರ್ಯಕ್ರಮಗಳನ್ನು ಮೂಡಿಸುತ್ತಾ ತನ್ನ ನಿಷ್ಠೆ ಮೆರೆದಿದ್ದರೆ, ಗ್ರಾಮಾಂತರ ವ್ಯಾಪ್ತಿಯಲ್ಲಿ ಈ ಬಗ್ಗೆ ಚಕಾರವೆತ್ತುವವರೇ ಇಲ್ಲದೆ, ಮುಗ್ದ ರೈತರು ಬಳಲಿ ಬೆಂಡಾಗುವಂತಾಗಿದೆ. ಮುಂದಾದರೂ ಸಂಬಂಧಿಸಿದ ಇಲಾಖೆ, ತಾಲೂಕು ಆಡಳಿತ ರಾಜಕಾರಣದಲ್ಲಿ ತೊಡಗುವುದನ್ನು ಬಿಟ್ಟು, ಗ್ರಾಮಾಂತರ ಪ್ರದೇಶದ ಕಡೆ ಗಮನಹರಿಸಿ ರೈತರನ್ನು ಈ ರೋಗದಿಂದ ಕಾಪಾಡುವರೇ ಕಾದುನೋಡಬೇಕಾಗಿದೆ.
-
Abhishek Sharma: 'ಅಭಿಷೇಕ್ ಶರ್ಮಾ ಒಬ್ಬ ಬ್ಲೈಂಡ್ ಸ್ಲಾಗರ್': ರೊಚ್ಚಿಗೆದ್ದ ಅಭಿಮಾನಿಗಳು -
Horoscope March 5: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ, ಯಾರಿಗೆ ಶುಭ-ಯಾರಿಗೆ ಅಶುಭ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Bengaluru Viral Tweet: ಹೋಳಿ ಹಬ್ಬ: ಬೆಂಗಳೂರು ಬೋರಿಂಗ್ ಎಂದ ನಾರ್ಥಿ ಯುವತಿ ಟ್ವೀಟ್ ವೈರಲ್: ಕನ್ನಡಿಗರು ಹೇಳಿದ್ದೇನು -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
KEA: ಯುಜಿಸಿಇಟಿ-ಪಿಜಿನೀಟ್ ಅಭ್ಯರ್ಥಿಗಳ ಗಮನಕ್ಕೆ, ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ -
ಬೆಂಗಳೂರು ಏರ್ಪೋರ್ಟ್ಗೆ ಸತತ 4ನೇ ಬಾರಿಯೂ ವಿಶ್ವದ 'ಅತ್ಯುತ್ತಮ ಏರ್ಪೋರ್ಟ್'ಪ್ರಶಸ್ತಿ -
Karnataka Weather: ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಶುಷ್ಕ ಹವೆ, ಮುಂದುವರಿದ ಚಂಡಮಾರುತ ಪ್ರಸರಣ ಮಳೆ ನಿರೀಕ್ಷೆ












Click it and Unblock the Notifications