ಮರಾಠಿಗರ ಗುಣಗಾನ ಮಾಡಿದ ದೇವೇಗೌಡ

ಮುಂಬರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ತಮ್ಮ ಪಕ್ಷದ ಪ್ರಣಾಳಿಕೆ ಬಗ್ಗೆ ವಿವರಿಸುತ್ತಾ ಅವರು, ನಾನಾ ರಾಜ್ಯಗಳ ವಲಸಿಗರು ಮಹಾರಾಷ್ಟ್ರದ ಜನರ ಜೊತೆ ಹೊಂದಿಕೊಂಡು ಇಲ್ಲಿನ ಆರ್ಥಿಕ ಮತ್ತು ಸಾಮಾಜಿಕ ಬೆಳವಣಿಗೆಗೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಎಲ್ಲಾ ಭಾಷಿಗರಲ್ಲಿ ಶಾಂತಿ ಸಹೋದರತೆ ಮನೆಮಾಡಿದೆ ಎಂದು ಅಭಿಪ್ರಾಯಪಟ್ಟರು.
ಜೆಡಿಎಸ್ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು ಎಂದಿನಂತೆ ತಮ್ಮ ಪಕ್ಷ ಬಡವರ ಪರ. ನನ್ನ ಕೊನೆಯ ಉಸಿರು ಇರುವವರೆಗೂ ಬಡವರ ಮತ್ತು ಭೂರಹಿತರ ಏಳಿಗೆಗೆ ಶ್ರಮಿಸುತ್ತೇನೆ. ನಮ್ಮ ಎಲ್ಲಾ ಕಾರ್ಯಕರ್ತರು ಇದನ್ನು ಅಳವಡಿಸಿಕೊಂಡು ಹೋಗಬೇಕು ಎಂದು ಮನವಿ ಮಾಡಿದರು.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications