ಆಸ್ಟ್ರೇಲಿಯಾ : ಭಾರತೀಯ ಪತ್ರಕರ್ತೆಗೆ ಗೂಸಾ
ಮೆಲ್ಬೋರ್ನ್, ಜು. 27 : ಶಿಕ್ಷಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ಭಾರಿ ಹಗರಣವನ್ನು ಬಯಲಿಗೆಳೆಯಲು ಮುಂದಾದ ಭಾರತೀಯ ಮೂಲದ ಎಬಿಸಿ ಟಿವಿ ಪತ್ರಕರ್ತೆಯೊಬ್ಬರನ್ನು ತೀವ್ರವಾಗಿ ಥಳಿಸಿದ್ದಲ್ಲದೇ ಜೀವ ಬೆದರಿಕೆ ಹಾಕಿರುವ ಘಟನೆ ಆಸ್ಟ್ರೇಲಿಯಾದಲ್ಲಿ ಭಾನುವಾರ ನಡೆದಿದೆ.
ದೇಶ ವಿದೇಶಗಳಿಂದ ಉನ್ನತ ವಿದ್ಯಾಭ್ಯಾಸಕ್ಕೆಂದು ಇಲ್ಲಿಗೆ ಆಗಮಿಸುವ ವಿದ್ಯಾರ್ಥಿಗಳಿಂದ ಹಣ ಪಡೆದು ನಕಲಿ ಅಂಕಪಟ್ಟಿ ನೀಡುತ್ತಿರುವ ಪ್ರಕರಣಗಳು ಹೆಚ್ಚಾಗಿದ್ದು, ಈ ಹಗರಣ ಬಯಲಿಗೆಳೆಯಲು ಎಬಿಸಿ ಟಿವಿ ಪತ್ರಕರ್ತೆ ಮಾರುವೇಶದಲ್ಲಿ ತೆರಳಿ ಹಣ ನೀಡುತ್ತೇನೆ, ತಮಗೂ ನಕಲಿ ಅಂಕಪಟ್ಟಿ ಹಾಗೂ ಅನುಭವ ಪಡೆದ ಪ್ರಮಾಣ ಪತ್ರ ಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಗೊತ್ತಾಗದಂತೆ ವರದಿಯ ಚಿತ್ರೀಕರಣ ಮಾಡುತ್ತಿರುವಾಗ ಪತ್ರಕರ್ತೆಯ ಮೇಲೆ ದಾಳಿ ನಡೆದಿದ್ದು, ಅವರನ್ನು ಮನಬಂದಂತೆ ಥಳಿಸಲಾಗಿದೆ. ಜೊತೆಗೆ ನಮ್ಮ ತಂಟೆಗೆ ಬಂದರೆ ಸುಮ್ಮನೆ ಬಿಡುವುದಿಲ್ಲ ಎಂಬ ಜೀವ ಬೆದರಿಕೆಯನ್ನೂ ಹಾಕಿದ್ದಾರೆ ಎನ್ನಲಾಗಿದೆ.
ಎಬಿಸಿ ಟಿವಿಯಲ್ಲಿ ಫೋರ್ ಕಾರ್ನರ್ ಎಂಬ ಸಂಚಿಕೆಯಲ್ಲಿ ಪ್ರಸಾರ ಮಾಡುವುದಕ್ಕಾಗಿ ಈ ಹಗರಣದ ವರದಿಗೆ ಪತ್ರಕರ್ತೆ ಮುಂದಾಗಿದ್ದರು ಎನ್ನಲಾಗಿದೆ. ದಾಳಿ ನಡೆಸಿದವರು, ವಿದ್ಯಾರ್ಥಿಗಳೂ ಅಥವಾ ಹರಗಣದ ರೂವಾರಿಗಳೂ ಎನ್ನುವುದು ತಿಳಿದು ಬಂದಿಲ್ಲ. ಕಳೆದ ತಿಂಗಳು ಭಾರತೀಯ ವಿದ್ಯಾರ್ಥಿಗಳ ಮೇಲೆ ಜನಾಂಗೀಯ ಹಲ್ಲೆ ನಡೆದಿರುವ ಬೆನ್ನಲ್ಲೇ ಪರ್ತಕರ್ತೆಯ ಮೇಲೆ ದಾಳಿ ನಡೆದಿರುವುದು ಆತಂಕದ ಸಂಗತಿಯಾಗಿದೆ.
(ಏಜನ್ಸೀಸ್)
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications