ನೇತ್ರದಾನ ನೋಂದಣಿ ಮಾಡಿದ ಶ್ರೀರಾಮುಲು

ಸ್ವತಃ ಆರೋಗ್ಯ ಮಂತ್ರಿಯಾಗಿರುವ ಅವರು ಅಂಧರ ಬಾಳಿಗೆ ಬೆಳಕಾಗುವ ದೃಷ್ಟಿಯಿಂದ ತಮ್ಮ ಕಣ್ಣುಗಳನ್ನು ದಾನ ಮಾಡಿದ್ದಾರೆ. ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆ (ವಿಮ್ಸ್) ವತಿಯಿಂದ ಭಾನುವಾರ ಆಯೋಜಿಸಲಾಗಿದ್ದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಚಿವ ಶ್ರೀರಾಮುಲು, ಅಂಧರ ಬೆಳಕಾಗುವ ಈ ಶ್ರೇಷ್ಠ ದಾನವನ್ನು ಪ್ರತಿಯೊಬ್ಬರೂ ಮಾಡಬೇಕು ಎಂದು ಕಿವಿ ಮಾತು ಹೇಳಿದರು. ಇದೇ ಸಂದರ್ಭದಲ್ಲಿ ತಮ್ಮ ಹಾಗೂ ಪತ್ನಿ ಭಾಗ್ಯಲಕ್ಷ್ಮಿ ಅವರ ಕಣ್ಣುಗಳನ್ನು ದಾನ ಮಾಡಿದರು. ಸಚಿವರು ದಾನಪತ್ರಕ್ಕೆ ಸಹಿ ಮಾಡಿದ ನಂತರ ಅನೇಕರು ನೇತ್ರದಾನಕ್ಕೆ ಮುಂದಾಗಿದ್ದು ವಿಶೇಷವಾಗಿತ್ತು.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications