ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಬಿಜೆಪಿ ಕಾರ್ಯಕ್ರಮಗಳಿಗೆ ಬರಲ್ಲ : ಯುಆರ್ಎ
ಕಾರ್ಯಕ್ರಮಕ್ಕೆ ಸಚಿವರನ್ನು ಆಹ್ವಾನಿಸುವುದಾಗಿ ಸಂಘಟಕರು ಹೇಳಿದರು. ಸಚಿವರು ಬರುವುದಾದರೆ ನಿಮ್ಮ ಕಾರ್ಯಕ್ರಮಕ್ಕೆ ಬರುವುದಿಲ್ಲ ಎಂದು ಹೇಳಿದೆ. ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಅಭಿವೃದ್ದಿ ಮಂತ್ರದ ಬಗ್ಗೆ ಹೇಳುತ್ತಿರುವುದು ದೊಡ್ಡ ತಮಾಷೆಯಾಗಿದೆ. ಅಭಿವೃದ್ದಿ ಹೆಸರಿನಲ್ಲಿ ರೈತರ ಭೂಮಿ ಕಳೆದುಕೊಳ್ಳುತ್ತಿದ್ದಾರೆ. ಬುಡಕಟ್ಟು ಜನರ ಸಂಸ್ಕೃತಿ ನಾಶವಾಗುತ್ತಿದೆ ಎಂದು ಅನಂತಮೂರ್ತಿ ಆತಂಕ ವ್ಯಕ್ತಪಡಿಸಿದರು.
ಕೃತಿ ಬಿಡುಗಡೆ ಸಮಾರಂಭವೊಂದರಲ್ಲಿ ಭಾಗವಹಿಸಿ ಮಾತನಾಡಿದ ಅವರು, ರಸ್ತೆ ಅಗಲೀಕರಣ, ಮೇಲ್ಸೇತುವೆ ನಿರ್ಮಾಣ, ಕಾರ್ಖಾನೆ ಸ್ಥಾಪನೆ ಹೀಗೆ ಪ್ರತಿಯೊಂದು ಅಭಿವೃದ್ದಿಯಲ್ಲೂ ತೊಂದರೆಗೆ ಒಳಗಾಗುತ್ತಿರುವುದು ರೈತರು ಮತ್ತು ಬುಡಕಟ್ಟು ಜನರು. ರಾಜಕೀಯ ಪಕ್ಷಗಳ ಅಭಿವೃದ್ದಿ ಹೆಸರಿನಲ್ಲಿ ಸಹಸ್ರಾರು ಮಂದಿ ಬೀದಿ ಪಾಲಾಗುತ್ತಿದ್ದಾರೆಂದು ಅನಂತಮೂರ್ತಿ ವಿಷಾದ ವ್ಯಕ್ತಪಡಿಸಿದರು.
(ದಟ್ಸ್ ಕನ್ನಡ ವಾರ್ತೆ)
Comments
Story first published: Monday, July 27, 2009, 14:42 [IST]