ಸಾರಿಗೆ ಸಚಿವಾಲಯದಿಂದ ಭಾರಿ ಅವ್ಯವಹಾರ ?

ನಂಬರ್ ಪ್ಲೇಟ್ ಪೂರೈಸುವ ಸಂಬಂಧ ಮುಂಬೈ ಮೂಲದ ಶಿಮ್ ನಿತ್ ಉಚ್ ಹೆಸರಿನ ಕಂಪನಿಗೆ 15 ವರ್ಷಗಳ ಅವಧಿಗೆ ಗುತ್ತಿಗೆ ನೀಡಲಾಗಿದ್ದು, ಈ ಹೊಸ ಆದೇಶದ ಪ್ರಕಾರ ನಂಬರ್ ಪ್ಲೇಟ್ ಒದಗಿಸಲು ದ್ವಿಚಕ್ರ, ತ್ರಿಚಕ್ರ ಮತ್ತು ನಾಲ್ಕು ಚಕ್ರಗಳ ವಾಹನಗಳಿಗೆ ಪ್ರತ್ಯೇಕ ದರ ನಿಗದಿಪಡಿಸಲಾಗಿದೆ. ಸಾರ್ವಜನಿಕರು ಹೊಸ ನಿಯಮದ ಪ್ರಕಾರ ನಿಗದಿಪಡಿಸಿರುವ ಹಣ ನೀಡಿ ತಮ್ಮ ವಾಹನಗಳಿಗೆ ನಂಬರ್ ಪ್ಲೇಟ್ ಅಳವಡಿಸಿಕೊಳ್ಳುವುದು ಕಡ್ಡಾಯ.
ಕೇಂದ್ರ ಸರಕಾರದ ಆದೇಶದಂತೆ ರಾಜ್ಯದಲ್ಲಿಯೂ ಏಕರೂಪ ನಂಬರ್ ಪ್ಲೇಟ್ ಅಳವಡಿಸಲು ಸರಕಾರ ಕ್ರಮ ತೆಗೆದುಕೊಂಡಿದೆ. ರಾಜ್ಯದಲ್ಲಿ ಒಟ್ಟು ಅಂದಾಜು 78.51 ಲಕ್ಷ ನೊಂದಾಯಿತ ವಾಹನಗಳಿವೆ. ರಾಜ್ಯದಲ್ಲಿ ದ್ವಿಚಕ್ರ ವಾಹನಗಳಿಗೆ ರೂಪಾಯಿ 550, ತ್ರಿಚಕ್ರ ವಾಹನಗಳಿಗೆ 650 ಮತ್ತು ನಾಲ್ಕು ಚಕ್ರ ವಾಹನಗಳಿಗೆ 1200 ರುಪಾಯಿ ಮೊತ್ತವನ್ನು ಸರಕಾರ ನಿಗದಿಪಡಿಸಿದೆ.
ಬಿಡ್ ನಿಯಮ ಪಾಲಿಸದೆ ಸರಕಾರ ಶಿಮ್ ನಿತ್ ಕಂಪನಿ ಗೆ ಗುತ್ತಿಗೆ ನೀಡಿದೆ. ಟೆಂಡರ್ ನಿಯಮದ ಪ್ರಕಾರ ಗುತ್ತಿಗೆದಾರ ಕನಿಷ್ಠ ನಾಲ್ಕು ದೇಶಗಳಲ್ಲಿ ವಾಹನಗಳಿಗೆ ನಂಬರ್ ಪ್ಲೇಟ್ ಸರಬರಾಜು ಮಾಡಿರುವ ಅನುಭವ ಹೊಂದಿರಬೇಕು. ಆದರೆ ಈ ಸಂಸ್ಥೆ ನೀಡಿರುವ ನಾಲ್ಕು ದೇಶಗಳ ಹೆಸರಿನಲ್ಲಿ ಸುಳ್ಳುಮಾಹಿತಿ ನೀಡಿದ್ದು ಬೆಳಕಿಗೆ ಬಂದಿದೆ. ಇದೆ ರೀತಿ ರಾಜಸ್ಥಾನ್ ಸರಕಾರ ಕೂಡ ಈ ಕಂಪನಿ ಗೆ ಗುತ್ತಿಗೆ ನೀಡಿತ್ತು. ಆದರೆ ಸುಳ್ಳು ಮಾಹಿತಿಯ ಆರೋಪ ಬಂದ ಹಿನ್ನೆಲೆಯಲ್ಲಿ ಕಂಪನಿಗೆ ನೀಡಿದ್ದ ಒಪ್ಪಂದವನ್ನು ತಾತ್ಕಾಲಿಕವಾಗಿ ರದ್ದುಗೊಳಿಸಿತ್ತು ಎಂದು ಮಂಗಳವಾರದ ವಿಜಯ ಕರ್ನಾಟಕ ಸಂಚಿಕೆ ಪ್ರಕಟವಾಗಿದೆ.
(ದಟ್ಸ್ ಕನ್ನಡ ವಾರ್ತೆ)
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications