ಮೈಸೂರಿಗೆ ಹೆಲಿಟೂರಿಸಂ ಶೀಘ್ರ ಆರಂಭ : ರೆಡ್ಡಿ
ಬೆಂಗಳೂರು, ಜು. 28 : ಐತಿಹಾಸಿಕ ಹಂಪಿ ಮಾದರಿಯಲ್ಲಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ ಮೈಸೂರಿಗೂ ಹೆಲಿಟೂರಿಸಂ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಪ್ರವಾಸೋಧ್ಯಮ ಸಚಿವ ಜನಾರ್ದನರೆಡ್ಡಿ ಹೇಳಿದರು.
ದಸರಾ ಹಬ್ಬಕ್ಕೆ ಸಂಬಂಧಿಸಿದಂತೆ ವಿಧಾನಸೌಧದಲ್ಲಿ ನಡೆದ ಎರಡು ಉನ್ನತ ಮಟ್ಟದ ಸಭೆಯಲ್ಲಿ ಮಾತನಾಡಿದ ರೆಡ್ಡಿ, ಪ್ರವಾಸಿಗರಿಗಾಗಿ ಮೂರರಿಂದ ನಾಲ್ಕು ಹೆಲಿಕ್ಯಾಪ್ಟರ್ ಗಳ ಸಂಚಾರ ಆರಂಭಿಸಲಾಗುವುದು ಎಂದರು. ರಾಜ್ಯದ ವಿವಿಧ ಭಾಗಗಳಲ್ಲಿ ಏಳು ಪ್ರವಾಸಿಸೌಧಗಳನ್ನು ನಿರ್ಮಿಸಲು ಚಿಂತನೆ ನಡೆಸಲಾಗಿದ್ದು, ಅದರಲ್ಲಿ ಪ್ರಥಮ ಪ್ರವಾಸಿಸೌಧದ ಕಾಮಗಾರಿಯನ್ನು ಮೈಸೂರು ಆರಂಭಿಸಲಾಗುವುದು ಎಂದು ಹೇಳಿದರು.
ಚಾಮುಂಡಿ ಬೆಟ್ಟದ ಸಂಪೂರ್ಣ ಅಭಿವೃದ್ಧಿಗೆ ಸುಮಾರು 40 ಕೋಟಿ ರುಪಾಯಿಗಳ ಅವಶ್ಯಕತೆ ಇದ್ದು, ಕೇಂದ್ರದ ಅನುದಾನಕ್ಕೆ ಈಗಾಗಲೇ ಮನವಿ ಮಾಡಲಾಗಿದೆ ಎಂದು ಜನಾರ್ದನರೆಡ್ಡಿ ಹೇಳಿದರು.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications