ರಾಮನಗರ : ಜೆಡಿಎಸ್ ನಿಂದ ಕೆ ರಾಜು ಸ್ಪರ್ಧೆ

ರಾಮನಗರ ಕ್ಷೇತ್ರಕ್ಕೆ ಜೆಡಿಎಸ್ನಿಂದ ಮಾಜಿ ಸಚಿವ ಎಚ್ ಡಿ ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಅವರನ್ನು ಅಖಾಡಕ್ಕೆ ಇಳಿಸುವ ಚಿಂತನೆ ನಡೆದಿತ್ತಾದರೂ ಕುಟುಂಬದ ರಾಜಕಾರಣದ ಆರೋಪಕ್ಕೆ ಮತ್ತೊಮ್ಮೆ ಒಳಗಾಗಬೇಕಾಗುತ್ತಿದೆ ಎನ್ನುವ ಕಾರಣದಿಂದ ಅದನ್ನು ಕೈಬಿಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಎಚ್ ಡಿ ಕುಮಾರಸ್ವಾಮಿಯವರ ಆಡಳಿತಾವಧಿಯಲ್ಲಿ ರಾಮನಗರ ಜಿಲ್ಲೆಯ ಸರ್ವಾಂಗೀಣ ಅಭಿವೃದ್ದಿಗೆ ಪೂರಕವಾಗಿ ಕೈಗೊಂಡ ಯೋಜನೆಗಳು ಜೆಡಿಎಸ್ ಗೆಲುವಿಗೆ ಶ್ರೀರಕ್ಷೆಯಾಗಲಿದೆ ಎಂಬುದು ಸ್ಥಳೀಯರ ಅಭಿಪ್ರಾಯವಾಗಿದೆ. ಎಚ್ ಡಿ ದೇವೇಗೌಡರು ಮತ್ತು ಎಚ್ ಡಿ ಕುಮಾರಸ್ವಾಮಿಯವರೊಂದಿಗೆ ಅವಿನಾಭಾವ ಸಂಬಂಧವಿಟ್ಟುಕೊಂಡಿರುವ ರಾಮನಗರದ ಜನತೆ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯ ಗೆಲುವಿಗೆ ಸಂಘಟಿತ ಹೋರಾಟ ನಡೆಸಲು ಅಣಿಯಾಗಿದ್ದಾರೆ.
ಜೆಡಿಎಸ್ ಪಾಳೆಯದಲ್ಲಿ ಪಕ್ಷ ಸಂಘಟನೆಗಾಗಿ ಪ್ರಾಮಾಣಿಕರಾಗಿ ಕಾರ್ಯನಿರ್ವಹಿಸುವ ಮಂದಿಗೆ ಪಕ್ಷ ಮನ್ನಣೆ ನೀಡುತ್ತದೆಂದು ಎಚ್ ಡಿ .ಕುಮಾರಸ್ವಾಮಿಯವರು ಹಲವಾರು ಬಾರಿ ಹೇಳಿದ್ದಾರೆ. ಅದಕ್ಕೆ ನಿದರ್ಶನವೆಂಬಂತೆ ಪ್ರತಿಷ್ಠೆಯ ಕಣವಾಗಿರುವ ರಾಮನಗರ ವಿಧಾನಸಭಾಕ್ಷೇತ್ರದ ಉಪಚುನಾವಣೆಗೆ ಪಕ್ಷದಲ್ಲಿ ಕಾರ್ಯಕರ್ತರಾಗಿ ಪದಾಧಿಕಾರಿಯಾಗಿ ಹಲವಾರು ವರ್ಷಗಳಿಂದ ಪಕ್ಷಕ್ಕೆ ನಿಷ್ಠರಾಗಿರುವ ಅವ್ವೇರಹಳ್ಳಿ ಕೆ.ರಾಜುರವರನ್ನ ಅಭ್ಯರ್ಥಿಯಾಗಿ ಕಣಕ್ಕಿಳಿಸುವ ಮೂಲಕ ಊಹಾಪೋಹಗಳಿಗೆ ತೆರೆಎಳೆದಿದ್ದಾರೆ.
ಇಲ್ಲಿಯವರೆಗೂ ಪಕ್ಷದ ಸಂಘಟನೆಗೆ ಶ್ರಮಿಸಿದ್ದಂತಹ ಕೆ.ರಾಜುರವರು ಪಕ್ಷದ ಅಭ್ಯರ್ಥಿಯಾಗಲು ಕುಮಾರಸ್ವಾಮಿಯವರು ಇಟ್ಟಿರುವ ನಂಬಿಕೆಯೇ ಕಾರಣವಾಗಿದೆ. ಕುಮಾರಸ್ವಾಮಿಯವರ ಜನಪರ ಆಢಳಿತವೇ ಕೆ.ರಾಜುವರ ಗೆಲುವಿಗೆ ಪೂರಕವಾಗಲಿದೆ. ಮತ್ತು ಜೆಡಿಎಸ್ ವರಿಷ್ಠರು ವಿಶ್ವಾಸವಿಟ್ಟು ಕೆ.ರಾಜುರವರ ಮೇಲೆ ನಂಬಿಕೆ ಇಟ್ಟು ಟಿಕೆಟ್ ನೀಡಿರುವುದ ಸಾಮಾನ್ಯವಾಗಿ ಅಭ್ಯರ್ಥಿ ಕೆ.ರಾಜುರವರ ಕುಟುಂಬದ ಸದಸ್ಯರಲ್ಲಿ ಸಂತಸ ಮನೆಮಾಡುವಂತಾಗಿದೆ. ಬೆಳಿಗ್ಗೆಯಿಂದಲೆ ಮನೆಗೆ ಬಂದ ಕಾರ್ಯಕರ್ತರುಗಳಿಗೆ ಸಿಹಿಹಂಚಿದ ಕುಟುಂಬದ ಸದಸ್ಯರು ಸಂಭ್ರಮವ್ಯಕ್ತಪಡಿಸಿದರು.
ಜೆಡಿಎಸ್ ವರಿಷ್ಠರುಗಳು ಸಾಮಾನ್ಯ ಕಾರ್ಯಕರ್ತರ ಸೇವೆಯನ್ನ ಪರಿಗಣಿಸಿ ಸಾಮಾನ್ಯ ಕಾರ್ಯಕರ್ತರಿಗೆ ಟಿಕೆಟ್ ನೀಡಿದ್ದಾರೆ. ಇದರಿಂದ ಪಕ್ಷದಲ್ಲಿರುವ ಆಂತರಿಕ ಪ್ರಜಾಪ್ರಭುತ್ವ ವ್ಯವಸ್ಥೆಯಿಂದ ಪ್ರಾಮಾಣಿಕವಾಗಿ ಪಕ್ಷದ ಸಂಘಟನೆ ಮಾಡುವ ಸಾಮಾನ್ಯ ಕಾರ್ಯಕರ್ತರಿಗೆ ಮನ್ನಣೆ ನೀಡುವ ಮೂಲಕ ಟೀಕಾಕಾರರ ಬಾಯಿಮುಚ್ಚಿಸಿದ್ದಾರೆ. ಲೋಕಸಭಾ ಚುನಾವಣೆಯ ಗೆಲುವಿನಂತೆ ಈ ಬಾರಿಯ ಉಪಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಜಯಭೇರಿ ಬಾರಿಸಲಿದ್ದಾರೆಂದು ಪಕ್ಷದ ಕಾರ್ಯಕರ್ತರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications