ಶಿವಮೊಗ್ಗದಲ್ಲಿ ಆಗಸ್ಟ್ ತಿಂಗಳುಪೂರ್ತಿ ಸಂಸ್ಕೃತೋತ್ಸವ
ಶಿವಮೊಗ್ಗ, ಜು. 29 : ಸಂಸ್ಕೃತ ಭಾರತಿ ಮತ್ತು ತರುಣೋದಯ ಸಂಸ್ಕೃತ ಸೇವಾ ಸಂಸ್ಥೆಮ ಆಶ್ರಯದಲ್ಲಿ ಮತ್ತು ವಾಸವಿ ಶಾಲೆಯ ಆಡಳಿತ ಮಂಡಳಿಯ ಸಹಕಾರದೊಂದಿಗೆ ಸಂಸ್ಕೃತ ದಿನ ಪ್ರಯುಕ್ತ ಶಿವಮೊಗ್ಗ ನಗರದಲ್ಲಿ ಒಂದು ತಿಂಗಳ ಕಾಲ ಸಂಸ್ಕೃತೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ವಾಸವಿ ವಿದ್ಯಾಲಯದ ಕಾರ್ಯದರ್ಶಿ ಶೇಷಾಚಲ ತಿಳಿಸಿದ್ದಾರೆ.
ಬುಧವಾರ ವಾಸವಿ ವಿದ್ಯಾಲಯದಲ್ಲಿ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಗಸ್ಟ್ 1ರಿಂದ 30ರವರೆಗೆ ಒಂದು ತಿಂಗಳ ಕಾಲ ಸಂಸ್ಕೃತೋತ್ಸವ ಕಾರ್ಯಕ್ರಮವನ್ನು ನಗರದ ಹಲವೆಡೆ ಆಚರಿಸುತ್ತಿದ್ದೇವೆ. ಕಾರ್ಯಕ್ರಮ ಆಗಸ್ಟ್ 1ರಂದು ಸಂಜೆ 6.30ಕ್ಕೆ ನಗರದ ಗೌಡ ಸರಸ್ವತ ಬ್ರಾಹ್ಮಣ ಸಮಾಜದಲ್ಲಿ ನಡೆಯಲಿದ್ದು, ಆಗಸ್ಟ್ 2ರಂದು ಜ್ಯೋತಿಷೋತ್ಸವ ಎಂಬ ಕಾರ್ಯಕ್ರಮಗಳು ವಾಸವಿ ಶಾಲೆಯಲ್ಲಿ ಮಧ್ಯಾಹ್ನ 3 ಗಂಟೆಯಿಂದ 5 ಗಂಟೆಯವರೆಗೆ ನಡೆಯಲಿವೆ.
ಕಾರ್ಯಕ್ರಮದಲ್ಲಿ ಕವಡೆ ಶಾಸ್ತ್ರ, ತಂಡೋಲೆ ಶಾಸ್ತ್ರ (ಅಕ್ಕಿಯಲ್ಲಿ), ಜಾತಕ ಜ್ಯೋತಿಷ್ಯ ಹಾಗೂ ಮುಖ ನೋಡಿ ಜ್ಯೋತಿಷ್ಯ ಹೇಳುವುದನ್ನು ನಡೆಸಲಾಗುತ್ತದೆ. ಇದರಲ್ಲಿ ಪುದುಮಾಳ್ ಕವಡೆ ಶಾಸ್ತ್ರವನ್ನು, ಸಾಯಿ ನಾಗೇಶ್ ತಂಡೋಲೆ ಶಾಸ್ತ್ರವನ್ನು , ಸೀತಾರಾಂ ಜಾತಕ ಜ್ಯೋತಿಷ್ಯವನ್ನು ಹಾಗೆಯೇ ವೇಣುಗೋಪಾಲ್ ಮುಖ ನೋಡಿ ಜ್ಯೋತಿಷ್ಯ ಹೇಳುವ ಕಾರ್ಯಕ್ರಮವನ್ನು ನಡೆಸಿಕೊಡುವುದಾಗಿ ತಿಳಿಸಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ದೈವಜ್ಞ ಸೋಮಯಾಜಿಗಳು ಹಾಗೂ ಚಲನಚಿತ್ರ ನಿರ್ದೇಶಕರಾದ ಕೆ.ಎಸ್.ಎಲ್.ಸ್ವಾಮಿ ಭಾಗವಹಿಸುವುದಾಗಿ ತಿಳಿಸಿದರು.
ಕಾರ್ಯಕ್ರಮದಲ್ಲಿ ಪ್ರಶ್ನೆಗಳನ್ನು ಕೇಳುವವರು ವಾಸವಿ ಶಾಲೆಗೆ ಮೊದಲೇ ತಿಳಿಸಬೇಕು. ಅದೃಷ್ಟದ ಚೀಟಿ ಮೂಲಕ ಪ್ರಶ್ನೆಗಳಿಗೆ ಉತ್ತರ ಕೊಡಲಾಗುವುದು. ಕಾರ್ಯಕ್ರಮದಲ್ಲಿ ಸಾರ್ವಜನಿಕರು, ಮಾಧ್ಯಮದವರು ಮತ್ತು ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿ ಕೋರಿದರು.
ಗೋಷ್ಠಿಯಲ್ಲಿ ತರುಣೋದಯ ಸಂಸ್ಕೃತ ಸೇವಾ ಸಂಸ್ಥೆಯ ಅಧ್ಯಕ್ಷರಾದ ಭಾಸ್ಕರ್ ಜಿ.ಕಾಮತ್, ಪ್ರಧಾನ ಕಾರ್ಯದರ್ಶಿ ಅ.ನಾ.ವಿಜಯೇಂದ್ರ, ವಾಸವಿ ವಿದ್ಯಾಲಯದ ಖಜಾಂಚಿ ಹೆಚ್. ಮಂಜುನಾಥ್ ಉಪಸ್ಥಿತರಿದ್ದರು.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications