ಬಿಜೆಪಿಗೆ ಉಳಿಗಾಲವಿಲ್ಲ : ಮುತಾಲಿಕ್

ಮೈಸೂರಿನ ಪ್ರಥಮ ದರ್ಜೆ ನ್ಯಾಯಾಲಯದ ನ್ಯಾಯಾಧೀಶ ರಾಜೇಶ್ ಎಂ ಕಾಮ್ಟೆ ಅವರು ಮುತಾಲಿಕ ಅವರ ಜಾಮೀನು ಅರ್ಜಿಯ ವಿಚಾರಣೆ ನಡೆಸಿ 10 ಸಾವಿರ ಭದ್ರತಾ ಠೇವಣಿ ಇಟ್ಟಕೊಂಡು ಮುತಾಲಿಕ ಅವರನ್ನು ಬಿಡುಗಡೆಗೊಳಿಸುವಂತೆ ಆದೇಶಿಸಿದ್ದಾರೆ. ಆರೋಪಿ ಮುತಾಲಿಕ ಅವರು ಕೋಮು ಗಲಭೆ ಸೇರಿ ಒಟ್ಟು 38 ಪ್ರಕರಣಗಳನ್ನು ಎದುರಿಸುತ್ತಿದ್ದಾರೆ. ಆರೋಪಿ ಜಾಮೀನು ಸಿಕ್ಕ ನಂತರ ತಲೆ ಮರೆಸಿಕೊಳ್ಳುವ ಸಾಧ್ಯತೆ ಇದೆ. ಆದ್ದರಿಂದ ಜಾಮೀನು ನೀಡಬಾರದು ಎಂದು ಸರಕಾರಿ ವಕೀಲ ಕಾಳಿಂಗಪ್ಪ ವಾದಿಸಿದರು.
ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಮುತಾಲಿಕ ಪರ ವಕೀಲ ಸಿ ವಿ ಕೇಶವಮೂರ್ತಿ ಅವರು, ನನ್ನ ಕಕ್ಷಿದಾರನ ಮೇಲೆ 38 ಪ್ರಕರಣಗಳಿವೆ ನಿಜ. ಆದರೆ, ಅವರು ಅಪರಾಧಿಯಂತೂ ಅಲ್ಲವೇ ಅಲ್ಲ. ಆದ್ದರಿಂದ ನನ್ನ ಕಕ್ಷಿದಾರರಿಗೆ ಜಾಮೀನು ನೀಡಬೇಕು ಎಂದು ಪ್ರತಿವಾದ ಮಂಡಿಸಿದ್ದರು. ಇತ್ತೀಚೆಗೆ ಮೈಸೂರಿನ ಕ್ಯಾತಮಾರನಹಳ್ಳಿಯಲ್ಲಿ ನಡೆದ ಕೋಮುಗಲಭೆಯ ಹಿನ್ನೆಲೆಯಲ್ಲಿ ಮುತಾಲಿಕ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ ಎಂದು ಮೈಸೂರು ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದರು.
ಬಿಡುಗಡೆಗೊಂಡ ನಂತರ ಬಿಜೆಪಿ ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡ ಮುತಾಲಿಕ, ಅಧಿಕಾರದ ಆಸೆಗಾಗಿ ಬಿಜೆಪಿ ಹಿಂದುತ್ವವನ್ನು ಮರೆತಿದೆ. ಹಿಂದುತ್ವವನ್ನು ಮರೆತ ಬಿಜೆಪಿ ಕೇಂದ್ರದಲ್ಲಿ ಅನುಭವಿಸಿದ ಮುಖಭಂಗವನ್ನು ರಾಜ್ಯದಲ್ಲಿ ಅನುಭವಿಸುವ ದಿನ ದೂರವಿಲ್ಲ. ಹಿಂದೂ ಮುಖಂಡರಿಗೆ ಹೀಗೆ ಪದೆಪದೇ ಹಿಂಸೆ ನೀಡುವುದನ್ನು ಸಹಿಸಲು ಆಸಾಧ್ಯ ಎಂದು ಅವರು ಎಚ್ಚರಿಕೆ ನೀಡಿದರು.
(ದಟ್ಸ್ ಕನ್ನಡ ವಾರ್ತೆ)
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications