ಪತ್ರಕರ್ತೆ ಗೌರಿ ಲಂಕೇಶ್ ವಿರುದ್ದ ದಾವೆ
ಉಡುಪಿ, ಜು. 30 : ಗೌರಿ ಲಂಕೇಶ್ ತಮ್ಮ ಕನ್ನಡ ವಾರಪತ್ರಿಕೆಯಲ್ಲಿ ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತಿ ಮಹಾಸ್ವಾಮಿಗಳ ಕುರಿತು ಪ್ರಕಟವಾದ ವರದಿ ವಿರುದ್ದ ಉಡುಪಿ ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಗಳ ನ್ಯಾಯಾಲಯದಲ್ಲಿ ಸ್ಥಳೀಯ ನಿವಾಸಿ ವಾಸುದೇವ್ ಭಟ್ ಎನ್ನುವವರು ಖಾಸಗಿ ದಾವೆ ಹೂಡಿದ್ದಾರೆ.
ಚಲನಚಿತ್ರ ನಟಿ ಮಲ್ಲಿಕಾ ಶೆರಾವತ್ ಗೋಕರ್ಣ ಭೇಟಿಗೆ ಸಂಬಂಧಿಸಿ ಮೇ 27, 2009ರ ಲಂಕೇಶ್ ವಾರಪತ್ರಿಕೆಯಲ್ಲಿ ಅವಹೇಳನಕಾರಿ, ಆಧಾರರಹಿತ ಮತ್ತು ತುಚ್ಚ ವರದಿ ಪ್ರಕಟಿಸಿದ್ದು, ಇದು ಮಠ ಮತ್ತು ರಾಘವೇಶ್ವರ ಭಾರತಿ ಮಹಾಸ್ವಾಮಿಗಳ ಭಕ್ತರ ಭಾವನೆಗೆ ಘಾಸಿಯುಂಟು ಮಾಡಿದೆ. ಸಾಮಾಜಿಕ ಸ್ವಾಸ್ಥ್ಯ ಕೆಡಿಸುವ ಮತ್ತು ಕೋಮು ಸಾಮರಸ್ಯ ಕದಡುವ ಯತ್ನ ಪತ್ರಿಕೆಯಿಂದಾಗಿದ್ದು, ಐಪಿಸಿ 153ಎ, 295ಎ ಮತ್ತು 505 ಅಡಿ ಶಿಕ್ಷಾರ್ಹ ಅಪರಾಧವೆಸಗಿದ ಆರೋಪಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳುವಂತೆ ನ್ಯಾಯಾಲಯಕ್ಕೆ ಸಲ್ಲಿಸಿದ ದೂರಿನಲ್ಲಿ ವಾಸುದೇವ್ ಭಟ್ ಮನವಿ ಮಾಡಿದ್ದಾರೆ.
ಪತ್ರಿಕೆಯ ಸಂಪಾದಕಿ ಗೌರಿ ಲಂಕೇಶ್ ಮತ್ತು ವರದಿಗಾರ ಬಿಳಿದಾಳೆ ಈಶ ವಿರುದ್ದ ದೂರು ಸಲ್ಲಿಸಿದ್ದು, ಎಫ್ ಐ ಆರ್ ದಾಖಲಿಸಿ ತನಿಖೆ ನಡೆಸುವಂತೆ ನಗರದ ಮಣಿಪಾಲ ಠಾಣಾಧಿಕಾರಿಗೆ ನ್ಯಾಯಾಲಯವು ಕಡತ ಹಸ್ತಾಂತರಿಸಿ ಆಗಸ್ಟ್ 18 ಕ್ಕೆ ವಿಚಾರಣೆಯನ್ನು ಮುಂದೂಡಿದೆ.
(ದಟ್ಸ್ ಕನ್ನಡ ವಾರ್ತೆ)
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications