ಶಾಲಾ ಮಕ್ಕಳಿಗೆ ಪಾಠ ಹೇಳಿದ ಪ್ರೊ. ಸಿಎನ್ ಆರ್ ರಾವ್

ಭಾರತೀಯ ವಿಜ್ಞಾನ ಸಂಸ್ಥೆಯ ಜೆ.ಎನ್. ಟಾಟಾ ಸಭಾಂಗಣದಲ್ಲಿ ಇಂದು ಏರ್ಪಡಿಸಲಾಗಿದ್ದ ವಿಜ್ಞಾನ ಮತ್ತು ತಂತ್ರಜ್ಞಾನ ದಾರ್ಶನಿಕ ಸಮೂಹದ ಹಾಗೂ ಕರ್ನಾಟಕ ವಿಜ್ಞಾನ ವಿದ್ಯಾ ಜಾಗೃತಿ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡುತ್ತಿದ್ದರು. ಮಕ್ಕಳಿಗೆ ಬೇಸರ ತರಿಸದೆ, ಕನ್ನಡ ಪದಗಳಿಗೆ ತಡಕಾಡದೆ, ಅಚ್ಚ ಕನ್ನಡದಲ್ಲಿ ನಿರರ್ಗಳವಾಗಿ ಮಹಾಸ್ಫೋಟ, ಬ್ಯಾಕ್ಟೀರಿಯಾ ಜನನ, ಭೂಮಿಯ ಹುಟ್ಟು ಮುಂತಾದ ವಿಷಯಗಳನ್ನು ಅವರು ಸರಳವಾಗಿ ಮನಮುಟ್ಟುವಂತೆ ಮಕ್ಕಳಿಗೆ ಪಾಠ ಹೇಳಿದರು.
ಕರ್ನಾಟಕ ವಿಜ್ಞಾನ ಕ್ಷೇತ್ರದಲ್ಲಿ ಬಹಳ ಮುಂದುವರಿಯಬೇಕಾದರೆ ಶಾಲಾ ಮಕ್ಕಳು ಅದರಲ್ಲೂ ಹಳ್ಳಿಯ ಮಕ್ಕಳಿಗೆ ಪ್ರೋತ್ಸಾಹ ಸಿಗಬೇಕು. ಬೆಂಗಳೂರು ಬಿಟ್ಟು ಹೊರಗೆ ಹೋದರೆ ಮಕ್ಕಳಿಗೆ ವಿಜ್ಞಾನದ ಬಗ್ಗೆ ಆಸಕ್ತಿ ಇದೆ. ಒಬ್ಬಿಬ್ಬರು ವಿಜ್ಞಾನಿಗಳಾದರೆ ಸಾಲದು. ಅವಿಷ್ಕಾರಗಳ ಬದಲು ಅನ್ವಯಿಕಶಾಸ್ತ್ರಗಳಲ್ಲಿ ವಿದ್ಯಾರ್ಥಿಗಳು ಹೆಚ್ಚಿನ ಆಸಕ್ತಿ ತೋರಿಸುತ್ತಿದಾರೆ. ಮಾನವನ ಸಂತೋಷಕ್ಕೆ ಹಣ ಗಳಿಸುವುದೇ ಮುಖ್ಯವಲ್ಲ ಎಂದು ಅಭಿಪ್ರಾಯಪಟ್ಟರು.
ನೂರು ವರ್ಷಗಳ ಹಿಂದೆ ಪರಮಾಣು, ರಾಸಾಯನಿಕ ಬಂಧ, ಕ್ಷ-ಕಿರಣಗಳು, ಡಿಎನ್ಎಗಳ ಬಗ್ಗೆ ಅರಿವಿರಲಿಲ್ಲ. ಈಗ ವಿಜ್ಞಾನ ಕ್ಷೇತ್ರದಲ್ಲಿ ನಿರಂತರ ಪ್ರಗತಿಯಾಗುತ್ತಿದೆ. ವಿಜ್ಞಾನ, ಕಲೆ, ಆಧ್ಯಾತ್ಮ ಯಾವುದೇ ಇರಲಿ, ಮಕ್ಕಳು ತಮಗೆ ಆಸಕ್ತಿ ಇರುವ ಕ್ಷೇತ್ರವನ್ನು ತಾವೇ ಆರಿಸಿಕೊಂಡು ಶ್ರೇಷ್ಠತೆಯನ್ನು ಸಾಧಿಸಲು ಶ್ರಮ ಪಡಬೇಕು ಎಂದು ಅವರು ಸಲಹೆ ನೀಡಿದರು.
ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಪ್ರಧಾನ ಕಾರ್ಯದರ್ಶಿ ಶ್ರೀ ಅಶೋಕ್ ಕುಮಾರ್ ಸಿ. ಮನೋಳಿ ಅವರು ಮಾತನಾಡಿ ಪರಿಣಾಮಕಾರಿ ವಿಜ್ಞಾನ ಕಲಿಕೆ ಹಾಗೂ ಸಂಶೋಧನೆಗೆ ಪ್ರೋತ್ಸಾಹ ನೀಡುವ ದೂರದೃಷ್ಟಿಯಿಂದ ದಾರ್ಶನಿಕ ಸಮೂಹವು ವಿಜ್ಞಾನ ಶಿಕ್ಷಣ ಮತ್ತು ತಂತ್ರಜ್ಞಾನ ಅಭಿವೃದ್ಧಿಗೆ ಪೂರಕವಾದ 17 ಕಾರ್ಯಕ್ರಮಗಳನ್ನು ವಿವಿಧ ಜಿಲ್ಲೆಗಳಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಜವಾಹರಲಾಲ್ ನೆಹರು ಉನ್ನತ ವೈಜ್ಞಾನಿಕ ಸಂಶೋಧನಾ ಕೇಂದ್ರದ ಪ್ರೊ. ರೊದ್ದಂ ನರಸಿಂಹ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಅಧ್ಯಕ್ಷ ಡಾ. ಹೆಚ್.ಎಸ್. ನಿರಂಜನಾರಾಧ್ಯ ಮತ್ತಿತರ ಹಿರಿಯ ವಿಜ್ಞಾನಿಗಳ ಉಪಸ್ಥಿತರಿದ್ದರು.
(ದಟ್ಸ್ ಕನ್ನಡ ವಾರ್ತೆ)
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications