ವಿದ್ಯುತ್ ಸಮಸ್ಯೆ ಬಗೆಹರಿಸಲು ಕ್ರಮ : ಸಿಎಂ

ಹೊಸದಿಗಂತ ಪತ್ರಿಕೆಯ ನೂತನ ವಿನ್ಯಾಸ ಮತ್ತು ಇ ಪೇಪರ್ ಬಿಡುಗಡೆ ಸಮಾರಂಭದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯದ ವಿದ್ಯುತ್ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಅಗತ್ಯವಿದ್ದು, ಈ ನಿಟ್ಟಿನಲ್ಲಿ ವಿದ್ಯುತ್ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.
ಅಧಿವೇಶನದಲ್ಲಿ ರೈತರ ಮತ್ತು ಇತರೆ ಜ್ವಲಂತ ಸಮಸ್ಯೆಗಳ ಚರ್ಚೆಗೆ ಅವಕಾಶ ಸಿಗಲಿಲ್ಲ ಎಂಬ ಪ್ರತಿಪಕ್ಷಗಳ ಆರೋಪದಲ್ಲಿ ಹುರುಳಿಲ್ಲ. ಏಕೆಂದರೆ ನಾವು ಕಾಲ 13 ದಿನ ಕರೆಯಬೇಕಾಗಿದ್ದ ಅಧಿವೇಶನವನ್ನು 15 ದಿನಗಳ ಕಾಲ ನಡೆಸಲಾಗಿದೆ. ವಿರೋಧ ಪಕ್ಷಗಳು ಮೊಸರಿನಲ್ಲ ಕಲ್ಲು ಹುಡುಕುವ ಪ್ರಯತ್ನ ಮಾಡುವುದು ಸರಿಯಲ್ಲ ಎಂದರು.
ರಾಜ್ಯ ಬಿಜೆಪಿಯಲ್ಲಿ ಯಾವುದೇ ಭಿನ್ನಮತ ಇಲ್ಲ. ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದಲೂ ಮಾದ್ಯಮದವರು ಈ ಪ್ರಶ್ನೆಯನ್ನು ಕೇಳುತ್ತಲೇ ಇದ್ದೀರಿ. ಬಹುಶಃ 5 ವರ್ಷದ ನಂತರವೂ ಕೇಳುತ್ತಲೇ ಇರುತ್ತಿರೇನೋ ಎಂದು ಅವರ ಹಾಸ್ಯ ಚಟಾಕಿ ಹಾರಿಸಿದರು.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications