ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸರಬ್ ಜೋತ್ ಸಿಂಗ್ ಬಂಧನಕ್ಕೆ ಬೂಟಾ ಆಕ್ರೋಶ

By Staff
|
Google Oneindia Kannada News

ButaSingh
ನವದೆಹಲಿ, ಜು. 31 : ಲಂಚ ಪ್ರಕರಣರಕ್ಕೆ ಸಂಬಂಧಿಸಿದಂತೆ ನನ್ನ ಮಗ ಸರಬ್ ಜೋತ್ ಸಿಂಗ್ ಬಂಧನದಲ್ಲಿ ಭಾರಿ ಸಂಚು ಅಡಗಿದೆ. ನನ್ನ ರಾಜಕೀಯ ಹಾಗೂ ವೈಯಕ್ತಿಕ ಜೀವನಕ್ಕೆ ಮಸಿ ಬಳಿಯಲು ಈ ಸಂಚು ರೂಪಿಸಲಾಗಿದೆ ಎಂದು ರಾಷ್ಟ್ರೀಯ ಪರಿಶಿಷ್ಟ ಜಾತಿ ಜನಾಂಗ ನಿಗಮದ ಅಧ್ಯಕ್ಷ ಬೂಟಾ ಸಿಂಗ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಲಂಚ ಪ್ರಕರಣದಲ್ಲಿ ನನ್ನ ಮಗ ಸರಬ್ ಜೋತ್ ಸಿಂಗ್ ನನ್ನು ಸಿಲುಕಿಸಲಾಗಿದೆ. ಇದರಲ್ಲಿ ಮಹಾರಾಷ್ಟ್ರ ರಾಜಕೀಯ ಪಕ್ಷವೊಂದರ ಕೈವಾಡವಿರುವುದು ಸ್ಪಷ್ಟವಾಗಿದೆ ಎಂದು ಸಿಂಗ್ ಆರೋಪಿಸಿದ್ದಾರೆ. ಪರಿಶಿಷ್ಟ ಜಾತಿ ಜನಾಂಗದ ರಾಷ್ಟ್ರೀಯ ಆಯೋಗದಲ್ಲಿ ದಾಖಲಾಗಿದ್ದ ಪ್ರಕರಣವನ್ನು ಮುಚ್ಚಿಹಾಕಲು ನಾಸಿಕ್ ಮೂಲದ ರಾಮರಾಜ್ ಎಂಬ ಗುತ್ತಿಗೆದಾರರಿಂದ ಒಂದು ಕೋಟಿ ರುಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪ ಶುದ್ಧ ಸುಳ್ಳು. ಇದೊಂದು ವ್ಯವಸ್ಥಿತವಾದ ಪಿತೂರಿ ಎಂದು ಕಿಡಿಕಾರಿದರು.

ಕೇಂದ್ರದ ಮಾಜಿ ಸಚಿವ ಬೂಟಾ ಸಿಂಗ್ ಅವರ ಮಗ ಸರಬ್ ಜೋತ್ ಸಿಂಗ್ ಅಲಿಯಾಸ್ ಸ್ವೀಟಿ ಸಿಂಗ್ ಅವರನ್ನು ಸಿಬಿಐ ಪೊಲೀಸರು ಗುರುವಾರ ರಾತ್ರಿ ಬಂಧಿಸಿದ್ದರು. ಸರಬ್ ಜೋತ್ ಸಿಂಗ್ ಅವರನ್ನು ದೆಹಲಿಯಲ್ಲಿ ಬಂಧಿಸಿರುವ ಸಿಬಿಐ ಅಧಿಕಾರಿಗಳು ಹೆಚ್ಚಿನ ವಿಚಾರಣೆಗಾಗಿ ಮುಂಬೈಗೆ ತನಿಖೆಗಾಗಿ ಕರೆತಂದಿದ್ದಾರೆ. ಪರಿಶಿಷ್ಟ ಜಾತಿ ಜನಾಂಗದ ರಾಷ್ಟ್ರೀಯ ಆಯೋಗದಲ್ಲಿ ಗುತ್ತಿಗೆದಾರರ ವಿರುದ್ಧ ಪ್ರಕರಣವೊಂದು ದಾಖಲಾಗಿತ್ತು. ತಮ್ಮ ತಂದೆ ಆಯೋಗದ ಅಧ್ಯಕ್ಷರಾಗಿರುವುದರಿಂದ ಪ್ರಕರಣವನ್ನು ಮುಚ್ಚಿ ಹಾಕಿಸುವ ಭರವಸೆ ನೀಡಿ ಸರಬ್ ಜೋತ್ ಸಿಂಗ್ ಒಂದು ಕೋಟಿ ರುಪಾಯಿ ಲಂಚ ಕೇಳಿದ್ದರು ಎಂದು ಸಿಬಿಐ ಮೂಲಗಳು ತಿಳಿಸಿವೆ.

(ಏಜನ್ಸೀಸ್)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X