ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ತಿರುವಳ್ಳುವರ್ ಪ್ರತಿಮೆ ಅನಾವರಣ ಮುಂದೂಡಿಕೆ ?

By Staff
|
Google Oneindia Kannada News

Tiruvalluvar
ಬೆಂಗಳೂರು, ಜು. 31 : ತೀವ್ರ ವಿವಾದಕ್ಕೆ ಕಾರಣವಾಗಿರುವ ತಿರುವಳ್ಳುವರ್ ಪ್ರತಿಮೆ ಅನಾವರಣ ಕಾರ್ಯಕ್ರಮ ಮುಂದೂಡಲು ರಾಜ್ಯ ಸರಕಾರ ಗಂಭೀರ ಚಿಂತನೆ ನಡೆಸಿದೆ ಎನ್ನಲಾಗಿದೆ.

ರಾಜ್ಯದ ಐದು ಕ್ಷೇತ್ರಗಳಲ್ಲಿ ಆಗಸ್ಟ್ 18 ರಂದು ಉಪಚುನಾವಣೆಗಳು ನಡೆಯುತ್ತಿದ್ದು, ಕನ್ನಡಪರ ಸಂಘಟನೆಗಳು ಪ್ರತಿಭಟನೆಯಿಂದ ಉಂಟಾಗಬಹುದಾದ ಗದ್ದಲದಿಂದ ವ್ಯತಿರಿಕ್ತ ಪರಿಣಾಮ ಬೀರಬಹುದು ಎಂಬ ಆತಂಕ ಇದಕ್ಕೆ ಕಾರಣ ಎಂದು ಮೂಲಗಳು ತಿಳಿಸಿವೆ. ಬೆಂಗಳೂರಿನಲ್ಲಿ ಆಗಸ್ಟ್ 9 ರಂದು ತಿರುವಳ್ಳುವರ್ ಪ್ರತಿಮೆ ಮತ್ತು ಆಗಸ್ಟ್ 13 ರಂದು ಚೆನ್ನೈನಲ್ಲಿ ಸರ್ವಜ್ಞ ಪ್ರತಿಮೆ ಅನಾವರಣಗೊಳಿಸುವ ಕಾರ್ಯಕ್ರಮವಿತ್ತು.

ಇತ್ತೀಚೆಗೆ ಕನ್ನಡಪರ ಸಂಘಟನೆಗಳು ತೀವ್ರ ವಿರೋಧ ವ್ಯಕ್ತಪಡಿಸಿ ಹಲವು ಷರತ್ತುಗಳನ್ನು ವಿಧಿಸಿದ್ದವು. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಆಗಸ್ಟ್ 3 ರಂದು ಕನ್ನಡಪರ ಸಂಘಟನೆಗಳ ಸಭೆ ಚರ್ಚಿಸಲು ಉದ್ದೇಶಿಸಿದ್ದಾರೆ. ಆದರೆ, ಉಪಚುನಾವಣೆಗಳು ಎದುರಾಗಿರುವುದರಿಂದ ಸಭೆ ನಡೆಸುವ ಬಗ್ಗೆ ಅನುಮಾನ ಉಂಟಾಗಿದೆ. ಆಗಸ್ಟ್ ಅಂತ್ಯ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಪ್ರತಿಮೆ ಅನಾವರಣ ಕಾರ್ಯಕ್ರಮ ಹಮ್ಮಿಕೊಳ್ಳುವ ಚಿಂತನೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X