ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪಂಪ್‌ಸೆಟ್ ಖರೀದಿ ಅಕ್ರಮವಾಗಿಲ್ಲ : ಸುಧಾಕರ್

By Staff
|
Google Oneindia Kannada News

D Sudhakar
ಬೆಂಗಳೂರು, ಆ. 2 : ಪಂಪ್‌ಸೆಟ್ ಖರೀದಿ ಸಂಬಂಧ ಸಮಾಜ ಕಲ್ಯಾಣ ಇಲಾಖೆಯಲ್ಲಿ ಯಾವುದೇ ಹಗರಣ ನಡೆದಿಲ್ಲ ಎಂದು ಸಮಾಜ ಕಲ್ಯಾಣ ಸಚಿವ ಡಿ.ಸುಧಾಕರ್ ಹೇಳಿದ್ದಾರೆ. ವಿಧಾನ ಪರಿಷತ್‌ನಲ್ಲಿ ಜೆಡಿಎಸ್ ಸದಸ್ಯ ಬಸವರಾಜ್ ಹೊರಟ್ಟಿ ಮಾಡಿರುವ ಆರೋಪದಲ್ಲಿ ಯಾವುದೇ ಹುರುಳಿಲ್ಲ. ಪಂಪ್ ಸೆಟ್‌ಗಳ ಖರೀದಿಗೆ ಟೆಂಡರ್ ನೀಡಿದಾಗ ತಾವು ಇನ್ನು ಸಚಿವರಾಗಿರಲಿಲ್ಲ ಎಂದು ಸ್ಪಷ್ಟಪಡಿಸಿದರು.

ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ದೇವರಾಜ ಅರಸು ಅಭಿವೃದ್ಧಿ ನಿಗಮ ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭಿವೃದ್ಧಿ ನಿಗಮದ ವತಿಯಿಂದ ಗಂಗಾ ಕಲ್ಯಾಣ ಯೋಜನೆಯಡಿ 2007-08ನೇ ಸಾಲಿನಲ್ಲಿ ಪಂಪ್‌ಸೆಟ್‌ಗಳ ಖರೀದಿ ನಡೆದಿದೆ. ಆಗ ಬೇರೆ ಸರಕಾರ ಅಧಿಕಾರದಲ್ಲಿ ಇತ್ತು. ವಾಸ್ತವಾಂಶ ತಿಳಿಯದೇ ಹೊರಟ್ಟಿಯವರು ವಿನಾಕಾರಣ ದೂಷಣೆ ಮಾಡಿದ್ದಾರೆ ಎಂದರು.

ಕೊಯಮತ್ತೂರಿನ ಕಂಪನಿಯೊಂದು ವಿಭಿನ್ನ ದರದಲ್ಲಿ ಪಂಪ್‌ಸೆಟ್ ಮಾರಿರುವುದು ನಿಜ. ಅದರಲ್ಲಿ ಸಮಾಜ ಕಲ್ಯಾಣ ಇಲಾಖೆ ಎಲ್ಲರಿಗಿಂತ ಅತಿ ಕಡಿಮೆ ದರದಲ್ಲಿ ಖರೀದಿ ಮಾಡಿದೆ. ಹೀಗಾಗಿ ಯಾವುದೇ ಅವ್ಯವಹಾರ ಇಲ್ಲಿ ನಡೆದಿಲ್ಲ. ಇನ್ನು ಕೊಯಮತ್ತೂರಿನ ಕಂಪನಿಯನ್ನು ಕಪ್ಪು ಪಟ್ಟಿಗೆ ಸೇರಿಸುವಂತೆ ಗ್ರಾಮೀಣಾಭಿವೃದ್ಧಿ ಕಾರ್ಯದರ್ಶಿ ಪತ್ರ ಬರೆದಿಲ್ಲ ಹಾಗೂ ಈ ಸಂಬಂಧ ಯಾವ ದೂರುಗಳು ಬಂದಿಲ್ಲ. ಹೀಗಾಗಿ ತನಿಖೆಯ ಅಗತ್ಯ ಕಾಣುತ್ತಿಲ್ಲ. ಈ ಕುರಿತು ಮುಖ್ಯಮಂತ್ರಿಯವರೇ ತೀರ್ಮಾನ ತೆಗೆದುಕೊಳ್ಳಬೇಕು ಎಂದರು.

(ಏಜೆನ್ಸೀಸ್)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X