ಪ್ರಶಸ್ತಿ ಜವಾಬ್ದಾರಿ ಹೆಚ್ಚಿಸಿದೆ : 'ಗುಪ್ತಗಾಮಿನಿ' ಮಂಜು

ಆಗಸ್ಟ್ 16ರಂದು ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ ಕರ್ನಾಟಕ ನಾಟಕ ಅಕಾಡೆಮಿಯು 2008-09ನೇ ಸಾಲಿನ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಶಿವಮೊಗ್ಗದ ಇಬ್ಬರಿಗೆ ವಾರ್ಷಿಕ ಪ್ರಶಸ್ತಿ ದೊರೆತಿರುವುದು ರಂಗಭೂಮಿ ಪ್ರಿಯರಿಗೆ ಸಾಕಷ್ಟು ಹರ್ಷ ಮೂಡಿಸಿದೆ. ಶಿವಮೊಗ್ಗದ ರಂಗಭೂಮಿಯಲ್ಲಿ ಹೆಸರು ಮಾಡಿದ ಮಂಜುನಾಥ ಹೆಗಡೆ ಇದೀಗ ಬೆಂಗಳೂರಿನಲ್ಲಿ ಧಾರವಾಹಿಗಳು, ಸಿನಿಮಾದಲ್ಲಿ ಹೆಚ್ಚಾಗಿ ತೊಡಗಿಸಿಕೊಂಡಿದ್ದಾರೆ. ಇವರೊಂದಿಗೆ ಶಿವಮೊಗ್ಗದಲ್ಲಿಯೇ ವಾಸವಾಗಿರುವ ಹಾಗೂ ಹಿರಿಯ ರಂಗಕರ್ಮಿ ಕಾಂತೇಶ್ ಕದರಮಂಡಲಗಿಯವರಿಗೂ ಸಹ ಪ್ರಶಸ್ತಿ ದೊರೆತಿದೆ. ಈ ಇಬ್ಬರು ರಂಗಭೂಮಿ ಸಾಧಕರಿಗೂ ಅಭಿನಂದನೆಗಳು.
ಪ್ರಶಸ್ತಿಯ ಸಂತಸ ಹಂಚಿಕೊಂಡ ಮಂಜುನಾಥ ಹೆಗಡೆ ಹೇಳಿದ್ದಿಷ್ಟು : ನಾನು ಹೆಚ್ಚಾಗಿ ಶಿವಮೊಗ್ಗದಲ್ಲಿಯೇ ನಾಟಕಗಳನ್ನು ನಿರ್ದೇಶಿಸಿದ್ದು ಮತ್ತು ನಾಟಕಗಳಲ್ಲಿ ನಟಿಸಿದ್ದು. ಪ್ರಶಸ್ತಿ ಬಂದ ಈ ಸಂದರ್ಭದಲ್ಲಿ ಒಂದು ಕಡೆ ಖುಷಿ ಇದೆ. ಇನ್ನೊಂದು ಕಡೆ ನಾಟಕಗಳಲ್ಲಿ ಅಷ್ಟಾಗಿ ತೊಡಗಿಸಿಕೊಂಡಿಲ್ಲದ ದುಃಖವೂ ಇದೆ. ಈಗಲಾದರೂ ಪ್ರಶಸ್ತಿಗೆ ಗೌರವ ಕೊಡುವ ಹಿನ್ನೆಲೆಯಲ್ಲಿ ಮತ್ತೆ ರಂಗಭೂಮಿಯಲ್ಲಿ ಹೆಚ್ಚಾಗಿ ತೊಡಗಿಸಿಕೊಳ್ಳಬೇಕಾಗಿದೆ.
ನಾನು ಯಾವಾಗಲೂ ನಟಿಸುತ್ತಲೇ ಇರಬೇಕು. ಅದು ನನ್ನ ಕನಸು. ನನಗೆ ನಟನೆ ಬಿಟ್ಟರೆ ಬೇರೆ ಏನೂ ಬರುವುದಿಲ್ಲ. ಈಗ ಬೆಂಗಳೂರಿನಲ್ಲಿ ಜೀವನಕ್ಕಾಗಿ ಧಾರವಾಹಿಗಳಲ್ಲಿ, ಸಿನಿಮಾಗಳಲ್ಲಿ ನಟಿಸುತ್ತಿದ್ದೇನೆ. ಸಂತೋಷಕ್ಕೆಂದು ನಾಟಕಗಳಲ್ಲಿ ಅಭಿನಯಿಸಲು ಆರಂಭಿಸಿದೆ. ಅದೇ ನನ್ನ ಬದುಕಾಯಿತು. ಈಗ ಅದೇ ಸಂತೋಷಕ್ಕೆ ಪ್ರಶಸ್ತಿಯೂ ಬಂದಿದೆ.
ಮೊದಲಿಂದಲೂ ನಾಟಕಗಳನ್ನು ನಿರ್ದೇಶಿಸಬೇಕು ಮತ್ತು ನಾಟಕಗಳಲ್ಲಿ ಅಭಿನಯಿಸಬೇಕು ಎಂಬ ಆಸೆ. ಈ ಆಸೆಯ ಜೊತೆ ತುಡಿತವೂ ಹೆಚ್ಚಾಗಿದೆ. ಒಂದು ಕಡೆ ಧಾರವಾಹಿಗಳಲ್ಲಿ ನಟಿಸುತ್ತಿದ್ದೇನೆ. ಅದು ನನ್ನ ಹೊಟ್ಟೆಪಾಡು. ಈಗ ಹೊಟ್ಟೆಪಾಡೇ ಹೆಚ್ಚಾಗಿಬಿಟ್ಟಿದೆ. ಒಂದು ಕಡೆ ಧಾರವಾಹಿಗಳಲ್ಲಿ, ಇನ್ನೊಂದು ಕಡೆ ನಾಟಕಗಳಲ್ಲಿ ನಟಿಸುವುದೆಂದರೆ ಅದೊಂದು ದ್ವಿಪಾತ್ರದ ಕಷ್ಟ. ಧಾರವಾಹಿಗಳಲ್ಲಿ ನಟಿಸುವುದೆಂದರೆ ಸುಲಭ ಎನ್ನುವವರಿದ್ದಾರೆ. ಆದರೆ, ಅದು ಬಹಳ ಕಷ್ಟದ ಕೆಲಸ. ಸೀರಿಯಲ್ ಆಕ್ಟಿಂಗೇ ಬೇರೆ. ನಾಟಕದ ಆಕ್ಟಿಂಗೇ ಬೇರೆ. ಆದರೆ, ನಾಟಕದ ಖುಷಿ, ನಾಟಕದ ರಿಹರ್ಸಲ್ಗಳಲ್ಲಿ ಸಿಗುವ ಸಂತೋಷ ಸೀರಿಯಲ್ಗಳಲ್ಲಿ ಸಿಗುವುದಿಲ್ಲ.
ಶಿವಮೊಗ್ಗದಲ್ಲಿ ಹೊಸದೊಂದು ನಾಟಕ ಸಿದ್ಧಪಡಿಸಬೇಕೆಂಬ ಆಸೆ ಹುಟ್ಟಿಕೊಂಡಿದೆ. ಒಳ್ಳೆಯದೊಂದು ನಾಟಕ ಕೃತಿ ಸಿಗಬೇಕು. ಆದರೆ, ಸಮಯದ ಅಭಾವ ಸಾಕಷ್ಟಿದೆ. ನಿನ್ನೆಯಿಂದಲೇ ಈ ಬಗ್ಗೆ ಯೋಚಿಸುತ್ತಿದ್ದೇನೆ. ವಾರಕ್ಕೆ 2 ದಿನವಾದರೂ ಶಿವಮೊಗ್ಗಕ್ಕೆ ಬಂದು ಕಲಾವಿದರನ್ನು ಸಿದ್ಧಪಡಿಸಿ ಒಂದು ಒಳ್ಳೆಯ ನಾಟಕವನ್ನು ಶಿವಮೊಗ್ಗದ ಜನಕ್ಕೆ ನೀಡಬೇಕೆಂದು ಬಯಸಿದ್ದೇನೆ. ಹೇಗಾದರಾಗಲೀ ಈ ಕೆಲಸ ಮಾಡುತ್ತೇನೆ.
ಹೀಗೆ ತಮ್ಮ ಮನಸ್ಸಿನ ಮಾತುಗಳನ್ನು ಹೇಳಿಕೊಂಡ ಕಲಾವಿದ ಮಂಜು ಹೆಗಡೆ ಮೂಲತಃ ಸಿರ್ಸಿಯವರು. ಅಲ್ಲಿಂದ ಉದ್ಯೋಗ ನಿಮಿತ್ತ ಬೆಂಗಳೂರಿಗೆ ಹೋಗಿ ಕಲಾ ಗಂಗೋತ್ರಿ ತಂಡದೊಂದಿಗೆ ಗುರುತಿಸಿಕೊಂಡವರು. ಮುಖ್ಯಮಂತ್ರಿ ನಾಟಕದೊಂದಿಗೆ ರಂಗಭೂಮಿಯಲ್ಲಿ ಹೆಜ್ಜೆಯೂರಲು ಆರಂಭಿಸಿದರು. ಆನಂತರದಲ್ಲಿ ಶಿವಮೊಗ್ಗಕ್ಕೆ ಬಂದ ಮಂಜು ಹೆಗಡೆಯವರು ಕೋಟೆರಸ್ತೆಯಲ್ಲಿ ವಾಲ್ಮೀಕಿ ಪ್ರಿಂಟರ್ಸ್ ಆರಂಭಿಸಿದರು. ಶಿವಮೊಗ್ಗದಲ್ಲಿ ಸುಣ್ಣ ಹಚ್ಚಿದ ಸಮಾಧಿಗಳು, ಹುಲಿಯ ನೆರಳು, ಅದರೇಶಿ ಪರದೇಶಿಯಾದ, ಸ್ರೀಕೃಸ್ಣ ಸಂಧಾನ ಸೇರಿದಂತೆ ಹಲವಾರು ಜನಮನ ಗೆದ್ದ ನಾಟಕಗಳನ್ನು ನಿರ್ದೇಶಿಸಿದರು. ನಂತರದಲ್ಲಿ ಬೆಂಗಳೂರಿಗೆ ಹೋದ ಮಂಜು ಹೆಗಡೆ ಹೆಚ್ಚಾಗಿ ಧಾರವಾಹಿಗಳಲ್ಲಿ ನಟಿಸತೊಡಗಿದ್ದಾರೆ. ವಾತ್ಸಲ್ಯ, ಸೀತೆ, ಬಂದೇ ಬರುತಾವ ಕಾಲ, ಗುಪ್ತಗಾಮಿನಿ, ಮನೆಯೊಂದು ಮೂರು ಬಾಗಿಲು, ಜೋಗುಳ, ಪ್ರೀತಿ ಇಲ್ಲದ ಮೇಲೆ ಸೇರಿದಂತೆ ಹಲವು ಧಾರಾವಾಹಿಗಳಲ್ಲಿ ನಟಿಸಿದ್ದಾರೆ. ಕುರುಬನ ರಾಣಿ, ಹಬ್ಬ, ಗಂಡುಗಲಿ, ಯಾರೇ ನೀ ಅಭಿಮಾನಿ ಸೇರಿದಂತೆ ಹಲವು ಸಿನಿಮಾಗಳಲ್ಲಿಯೂ ನಟಿಸಿದ್ದಾರೆ.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications