ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹಂದಿಜ್ವರ ತಡೆಗೆ ನೂತನ ನಿಯಮ ಜಾರಿ : ಅಜಾದ್

By Staff
|
Google Oneindia Kannada News

Gulam nabhi azad
ನವದೆಹಲಿ, ಜು. 4 : ಭಾರತದಲ್ಲಿ ಮೊಟ್ಟಮೊದಲ ಬಾರಿಗೆ ಮಾರಿ ಹಂದಿಜ್ವರಕ್ಕೆ ಬಾಲಕಿಯೊಬ್ಬಳು ಮೃತಪಟ್ಟಿರುವ ಘಟನೆಯಲ್ಲಿ ಕೇಂದ್ರ ಆರೋಗ್ಯ ಇಲಾಖೆ ಗಂಭೀರವಾಗಿ ಪರಿಗಣಿಸಿದ್ದು, ದೇಶದ ಖಾಸಗಿ ಆಸ್ಪತ್ರೆಗೆ ಹಂದಿಜ್ವರಕ್ಕೆ ಸಂಬಂಧಿಸಿದ ಅಗತ್ಯ ಚಿಕಿತ್ಸೆಗೆ ಸಂಬಂಧಿಸಿದ ನೀತಿ ನಿಯಮಗಳನ್ನು ಬಿಡುಗಡೆ ಮಾಡುವ ಸಲುವಾಗಿ ಉನ್ನತ ಮಟ್ಟದ ಸಭೆಯನ್ನು ಕರೆದಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಕೇಂದ್ರದ ಆರೋಗ್ಯ ಇಲಾಖೆ ಸಚಿವ ಗುಲಾಮ್ ನಬಿ ಅಜಾದ್, ಸೋಮವಾರ ಪುಣೆಯ ಖಾಸಗಿ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ಲಭ್ಯವಾಗದ ಕಾರಣ ಬಾಲಕಿಯೊಬ್ಬಳು ಹಂದಿಜ್ವರಕ್ಕೆ ಸಾವನ್ನಪ್ಪಿರುವುದು ವಿಷಾದಕರ ಸಂಗತಿ. ಇಂತಹ ಘಟನೆಗಳು ಪದೆಪದೇ ನಡೆಯಬಾರದು ಎನ್ನುವ ಉದ್ದೇಶದಿಂದ ಸರಕಾರ ಕಟ್ಟುನಿಟ್ಟಿನ ಕ್ರಮ ತೆಗೆದುಕೊಂಡಿದ್ದು, ದೇಶದ ಎಲ್ಲ ಖಾಸಗಿ ಆಸ್ಪತ್ರೆಗೆ ಹಂದಿಜ್ವರ ಕುರಿತು ಸಮಗ್ರ ನೀತಿ ನಿಯಮಗಳನ್ನು ಬಿಡುಗಡೆಗೊಳಿಸಲಾಗುವುದು ಎಂದರು.

ಆರೋಗ್ಯ ಸಚಿವ ಗುಲಾಮ್ ನಬಿ ಅಜಾದ್ ನೇತೃತ್ವದ ಸಭೆಯಲ್ಲಿ ಕೇಂದ್ರ ಆರೋಗ್ಯ ಕಾರ್ಯದರ್ಶಿ ನರೇಶ್ ದಯಾಳ್, ಆರೋಗ್ಯ ಸಂಶೋಧನಾ ಇಲಾಖೆಯ ವಿ ಎನ್ ಕಟೋಚ್, ಆರೋಗ್ಯ ಸಚಿವಾಲಯದ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದಾರೆ.

(ಏಜನ್ಸೀಸ್)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X