ಶೀಘ್ರದಲ್ಲಿ ಸಿದ್ದು ಕಾಂಗ್ರೆಸ್ ಕೈಬಿಡುವರು : ಸೋಮಣ್ಣ

ಕೈಗಾರಿಕಾ ವಾರ್ಡ್ ನಲ್ಲಿ ಆಯೋಜಿಸಿದ್ದ ರೋಡ್ ಶೋ ಕಾರ್ಯಕ್ರಮದಲ್ಲಿ ಪಾಲ್ಗೊಂಡು ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಜಿ ಹುಜೂರ್ ಸಂಸ್ಕೃತಿಯ ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಹೆಚ್ಚು ದಿನ ಉಳಿಯುವುದಿಲ್ಲ ಎಂದರು. ಸಿದ್ದರಾಮಯ್ಯ ಅವರು ಕಾರ್ಯಕ್ರಮವೊಂದರಲ್ಲಿ ತಮ್ಮ ಬಗ್ಗೆ ಮಾತನಾಡಿರುವ ಮಾತುಗಳು ಅವರ ಮನದಾಳದ ಮಾತಲ್ಲ. ಬೇರೆಯವರು ಮಾತನಾಡಿಸಿದ್ದಾರೆ. ಸಿದ್ದರಾಮಯ್ಯನವರ ಬಗ್ಗೆ ತಮಗೆ ಗೊತ್ತಿದೆ ಎಂದು ಸೋಮಣ್ಣ ಹೇಳಿದರು.
ಕೆಪಿಸಿಸಿ ಕಾರ್ಯಾಧ್ಯಕ್ಷ ಡಿ ಕೆ ಶಿವಕುಮಾರ ಅವರು ತಮ್ಮನ್ನು ಪಕ್ಷಾಂತರಿ ಎಂದು ಟೀಕಿಸುತ್ತಿದ್ದಾರೆ. ಆದರೆ, ಕಾಂಗ್ರೆಸ್ ನಲ್ಲಿರುವ ಶೇ. 90 ರಷ್ಟು ಮಂದಿ ಪಕ್ಷಾಂತರಿಗಳೇ ಎಂಬುದನ್ನು ಅವರು ಮರೆತಿದ್ದಾರೆ. ಆರ್ ವಿ ದೇಶಪಾಂಡೆ, ವಿ ಎಸ್ ಉಗ್ರಪ್ಪ, ಸಿದ್ದರಾಮಯ್ಯ ಎಲ್ಲರೂ ಬೇರೆ ಪಕ್ಷಗಳಿಂದ ಬಂದವರೇ ಆಗಿದ್ದಾರೆ ಎಂದು ಸೋಮಣ್ಣ ತಿರುಗೇಟು ನೀಡಿದರು.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications