ಸೆಪ್ಟೆಂಬರ್ ನಲ್ಲಿ ವಿಶೇಷ ಅಧಿವೇಶನ : ಸಿಎಂ
ಮೈಸೂರು, ಆ. 5 : ವಿವಿಧ ವಿಷಯಗಳ ಬಗ್ಗೆ ಸೆಪ್ಟೆಂಬರ್ ತಿಂಗಳಿನ ಎರಡನೇ ವಾರದಲ್ಲಿ 5 ದಿನಗಳ ಕಾಲ ವಿಶೇಷ ಅಧಿವೇಶನ ಕರೆಯಲಾಗುವುದು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದರು.
ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ವಿಶೇಷ ಅಧಿವೇಶನದ ಮೊದಲ ಮೂರು ದಿನಗಳನ್ನು ಗ್ರಾಮೀಣ ಅಭಿವೃದ್ಧಿ ಕುರಿತ ವಿಷಯಗಳ ಚರ್ಚೆಗೆ ಅವಕಾಶ ಮಾಡಿಕೊಡಲಾಗುವುದು ಎಂದರು. ಉಳಿದ ಎರಡು ದಿನಗಳನ್ನು ಇತ್ತೀಚೆಗೆ ನಡೆದಿರುವ ಬೆಳವಣಿಗೆ ಹಾಗೂ ಪ್ರತಿಪಕ್ಷಗಳು ಆರೋಪಿಸುತ್ತಿರುವ ಹಗರಣಗಳ ಬಗ್ಗೆ ಸೂಕ್ತ ವೇದಿಕೆ ಕಲ್ಪಿಸಿಕೊಡಲಾಗುವುದು ಎಂದು ಹೇಳಿದರು.
ರಾಜ್ಯದ ಹಣಕಾಸಿನ ಸ್ಥಿತಿಯ ಬಗ್ಗೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಬೇಜವಾಬ್ದಾರಿ ಹೇಳಿಕೆ ನೀಡುತ್ತಿದ್ದಾರೆ ಎಂದಿ ಅಸಮಾಧಾನ ವ್ಯಕ್ತಪಡಿಸಿದ ಯಡಿಯೂರಪ್ಪ, ಸಿದ್ದರಾಮಯ್ಯ ತಮ್ಮ ಸ್ಥಾನದ ಘನತೆ ಅರಿತು ಮಾತನಾಡಬೇಕು ಎಂದರು. ಜಗತ್ತಿನಲ್ಲಿ ಆರ್ಥಿಕ ಕುಸಿತ ಎಲ್ಲ ವಲಯದಲ್ಲೂ ಭಾರಿ ಪ್ರಮಾಣದಲ್ಲಿ ಆವರಿಸಿದೆ. ಈ ಮಧ್ಯೆ ರಾಜ್ಯ ಸರಕಾರ ಅನೇಕ ಅಭಿವೃದ್ಧಿ ಕೆಲಸಗಳನ್ನು ಮಾಡಿದೆ ಎಂದು ಸಮರ್ಥಿಸಿಕೊಂರು. ಆದರೆ, ಸಿದ್ದರಾಮಯ್ಯ ಹೇಳಿಕೆಯಲ್ಲಿ ಯಾವುದೇ ಸತ್ವ ಇಲ್ಲ ಎಂದು ಅವರು ಹೇಳಿದರು.
ಪಕ್ಷದೊಳಗೆ ಭಿನ್ನಮತ ನಡೆಸುತ್ತಿರುವ ಶಾಸಕರ ವಿರುದ್ಧ ಗಂಭೀರ ಚಿಂತನೆ ಆರಂಭವಾಗಿದೆ. ಇಂತಹವರ ವಿರುದ್ಧ ಪಕ್ಷದ ಹೈಕಮಾಂಡ್ ಸೂಕ್ತ ಕೈಗೊಳ್ಳಲಿದೆ ಎಂದು ಹೇಳಿದರು. ಶಾಸಕ ಬೇಳೂರು ಗೋಪಾಲಕೃಷ್ಣ ಮತ್ತು ರೇಣುಕಾಚಾರ್ಯ ಅವರಿಗೆ ಉಲ್ಲಂಘನೆಗೆ ಸಂಬಂಧಿಸಿದಂತೆ ನೋಟಿಸ್ ಜಾರಿ ಮಾಡಿಲಾಗಿದೆ.
(ದಟ್ಸ್ ಕನ್ನಡ ವಾರ್ತೆ)
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications