ತಮಿಳರಿಂದ ಭೇಷ್ ಅನಿಸಿಕೊಂಡ ಸಿಎಂ
ಬೆಂಗಳೂರು, ಆ. 5 : 18 ವರ್ಷಗಳ ಸಮಸ್ಯೆಗೆ ಸೂಕ್ತ ಪರಿಹಾರ ಕಂಡುಕೊಂಡ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ರಾಜ್ಯದ ವಿವಿಧ ಜಿಲ್ಲೆಗಳ ತಮಿಳು ಸಂಘಟನೆಗಳು ಅಭಿನಂದನೆ ಸಲ್ಲಿಸಿವೆ. ಮಂಗಳವಾರ ಮುಖ್ಯಮಂತ್ರಿ ಗೃಹ ಕಚೇರಿಗೆ ಭೇಟಿ ನೀಡಿದ ಸಂಘಟನೆಯ ಸದಸ್ಯರು ತಿರುವಳ್ಳುವರ್ ಮತ್ತು ಸರ್ವಜ್ಞ ಪ್ರತಿಮೆ ಅನಾವರಣ ವಿವಾದಕ್ಕೆ ಮಂಗಳ ಹಾಡಲು ಮುಂದಾಗಿರುವ ಮುಖ್ಯಮಂತ್ರಿಗಳನ್ನು ಮುಕ್ತಕಂಠದಿಂದ ಹೊಗಳಿದ್ದಾರೆ.
ವಿವಿಧ ರಾಜಕೀಯ ಪಕ್ಷಗಳ, ಸಾಹಿತಿಗಳ ಮತ್ತು ಹೋರಾಟಗಾರರ ಒಪ್ಪಿಗೆ ಪಡೆದು ಪ್ರತಿಮೆ ಅನಾವರಣಕ್ಕೆ ಮುಂದಾಗಿರುವ ಮುಖ್ಯಮಂತ್ರಿಗಳಿಗೆ ನಮ್ಮ ಹೃತ್ಪೂರ್ವಕ ಅಭಿನಂದನೆಗಳು ಎಂದು ಸಂಘದ ಸದಸ್ಯರು ಹರ್ಷವ್ಯಕ್ತ ಪಡಿಸಿದ್ದಾರೆ. ಈ ಮಧ್ಯೆ ಮಂಗಳವಾರ ತಮಿಳುನಾಡು ಮುಖ್ಯಮಂತ್ರಿ ಕರುಣಾನಿಧಿಯವರನ್ನು ಭೇಟಿ ಮಡಿದ ಯಡಿಯೂರಪ್ಪ ತಿರುವಳ್ಳುವರ್ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications