ಕುಮುದಾ ಕುಟುಂಬಕ್ಕೆ ಉಪಸಭಾಪತಿ ಪುಟ್ಟಣ್ಣ ಸಾಂತ್ವನ
ರಾಮನಗರ, ಆ. 6 : ಇತ್ತೀಚೆಗೆ ಕೊಲೆಯಾದ ರಾಮನಗರದ ಬಸವನಪುರ ಶಾಲಾ ಶಿಕ್ಷಕಿ ಕುಮುದಾ ಅವರ ಮನೆಗೆ ಶಿಕ್ಷಕ ಕ್ಷೇತ್ರದ ಪ್ರತಿನಿಧಿ ಮತ್ತು ವಿಧಾನಪರಿಷತ್ ಉಪಸಭಾಪತಿ ಪುಟ್ಟಣ್ಣ ಗುರುವಾರ ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.
ಬಸವನಪುರ ಶಾಲಾ ಶಿಕ್ಷಕಿ ಕುಮುದಾರವರ ಕೊಲೆ ಪ್ರಕರಣ ಇಡೀ ಜಿಲ್ಲೆಯನ್ನು ಬೆಚ್ಚಿಬೀಳಿಸಿತ್ತು. ಪ್ರಕರಣದಲ್ಲಿ ಭಾಗಿಯಾಗಿದ್ದ 8 ಮಂದಿ ಯುವಕರ ತಂಡವನ್ನ ಬಿಡದಿ ಪೋಲೀಸರು 48 ಗಂಟೆಯೊಳಗೆ ವಶಕ್ಕೆ ತೆಗೆದುಕೊಂಡು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಈ ಪ್ರಕರಣದಿಂದ ವರ್ಷದ ಹಿಂದೆ ಕೊಲೆಯಾಗಿದ್ದ ಶಿಕ್ಷಕಿ ಸುಜಾತಾ ಅವರ ಹತ್ಯೆಯಲ್ಲಿಯೂ ಈ ತಂಡ ಭಾಗಿಯಾಗಿದ್ದು ಬೆಳಕಿಗೆ ಬಂದಿತ್ತು.
ಈ ಸಂದರ್ಭದಲ್ಲಿ ಮಾತನಾಡಿದ ವಿಧಾನಪರಿಷತ್ ಸದಸ್ಯ ಪುಟ್ಟಣ್ಣ, ಶಿಕ್ಷಕಿ ಕುಮುದಾ ಮತ್ತು ಸುಜಾತರ ಕೊಲೆ ಪ್ರಕರಣಗಳು ಅಮಾನವೀಯವಾದ ಘಟನೆಯಾಗಿದೆ. ಇಂತಹ ಘಟನೆಗಳು ಪುನರಾವರ್ತನೆಯಾಗದಂತೆ ದೂರಪ್ರದೇಶದ ಶಾಲೆಗಳಲ್ಲಿ ಕಾರ್ಯನಿರ್ವಹಿಸುವ ಶಿಕ್ಷಕ ಶಿಕ್ಷಕಿಯರ ಅನುಕೂಲಕ್ಕಾಗಿ ವಸತಿಗೃಹಗಳನ್ನ ನಿರ್ಮಾಣ ಮಾಡಬೇಕು. ಶಿಕ್ಷಕಿಯರು ಹತ್ತಿರದ ಸ್ಥಳಗಳಲ್ಲಿ ಕಾರ್ಯನಿರ್ವಹಿಸುವಂತೆ ಅವಕಾಶ ನೀಡಬೇಕು ಹಾಗೂ ವರ್ಗಾವಣೆ ನೀತಿಯನ್ನ ಸಡಿಲಗೊಳಿಸಿ ಶಿಕ್ಷಕರಿಗೆ ಅನುಕೂಲ ಮಾಡಿಕೊಡಬೇಕಾದ ಅನಿವಾರ್ಯತೆ ಇದೆ ಎಂದರು.
ಮಾತೃ ಪ್ರೀತಿ ಕಳೆದುಕೊಂಡ ಕುಮುದಾರ ಮಕ್ಕಳಿಗೆ ಸರ್ಕಾರದ ವತಿಯಿಂದ ಒಂದು ಲಕ್ಷ ರು. ಪರಿಹಾರ ಬಿಡುಗಡೆ ಮಾಡಿಸಲಾಗಿದೆ. ವೈಯುಕ್ತಿಕವಾಗಿ ಚುನಾವಣೆ ಕಳೆದ ನಂತರ ಮಕ್ಕಳ ಹೆಸರಿನಲ್ಲಿ ತಲಾ 25 ಸಾವಿರ ಹಣ ಠೇವಣಿ ಇಡುತ್ತೇನೆಂದು ಪುಟ್ಟಣ್ಣ ಹೇಳಿದರು.
ಈ ಸಂಧರ್ಭದಲ್ಲಿ ತಾಲ್ಲೂಕ್ ಶಿಕ್ಷಣಾಧಿಕಾರಿ ಎಂ.ಪಿ.ಮಾದೇಗೌಡ, ಸಮನ್ವಯಾಧಿಕಾರಿ ಬಿ.ಸೋಮಲಿಂಗಯ್ಯ, ಪ್ರೌಢಶಾಲಾಶಿಕ್ಷಕರ ಸಂಘದ ಬೈರಲಿಂಗಯ್ಯ, ಉಪಾಧ್ಯಕ್ಷ ಟಿ.ಸಿ.ಕೆ.ರಾಜು, ತಾಲ್ಲೂಕ್ ಕಾರ್ಯದರ್ಶಿ ಜಯಣ್ಣ, ಶಿಕ್ಷಕರಸಂಘದ ಮಹಾಲಿಂಗಯ್ಯ, ಮೃತಶಿಕ್ಷಕಿ ಕುಮುದಾರ ಪತಿ ಅಪ್ಪಾಜಿ, ತಾಯಿ ಗೌರಮ್ಮ, ತಂಗಿ ಗೀತಾ, ಮಕ್ಕಳಾದ ಸ್ಪೂರ್ತಿ ಮತ್ತು ಉಜ್ವಲ್ ಹಾಜರಿದ್ದರು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications