ಕುಮುದಾ ಕುಟುಂಬಕ್ಕೆ ಉಪಸಭಾಪತಿ ಪುಟ್ಟಣ್ಣ ಸಾಂತ್ವನ
ರಾಮನಗರ, ಆ. 6 : ಇತ್ತೀಚೆಗೆ ಕೊಲೆಯಾದ ರಾಮನಗರದ ಬಸವನಪುರ ಶಾಲಾ ಶಿಕ್ಷಕಿ ಕುಮುದಾ ಅವರ ಮನೆಗೆ ಶಿಕ್ಷಕ ಕ್ಷೇತ್ರದ ಪ್ರತಿನಿಧಿ ಮತ್ತು ವಿಧಾನಪರಿಷತ್ ಉಪಸಭಾಪತಿ ಪುಟ್ಟಣ್ಣ ಗುರುವಾರ ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.
ಬಸವನಪುರ ಶಾಲಾ ಶಿಕ್ಷಕಿ ಕುಮುದಾರವರ ಕೊಲೆ ಪ್ರಕರಣ ಇಡೀ ಜಿಲ್ಲೆಯನ್ನು ಬೆಚ್ಚಿಬೀಳಿಸಿತ್ತು. ಪ್ರಕರಣದಲ್ಲಿ ಭಾಗಿಯಾಗಿದ್ದ 8 ಮಂದಿ ಯುವಕರ ತಂಡವನ್ನ ಬಿಡದಿ ಪೋಲೀಸರು 48 ಗಂಟೆಯೊಳಗೆ ವಶಕ್ಕೆ ತೆಗೆದುಕೊಂಡು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಈ ಪ್ರಕರಣದಿಂದ ವರ್ಷದ ಹಿಂದೆ ಕೊಲೆಯಾಗಿದ್ದ ಶಿಕ್ಷಕಿ ಸುಜಾತಾ ಅವರ ಹತ್ಯೆಯಲ್ಲಿಯೂ ಈ ತಂಡ ಭಾಗಿಯಾಗಿದ್ದು ಬೆಳಕಿಗೆ ಬಂದಿತ್ತು.
ಈ ಸಂದರ್ಭದಲ್ಲಿ ಮಾತನಾಡಿದ ವಿಧಾನಪರಿಷತ್ ಸದಸ್ಯ ಪುಟ್ಟಣ್ಣ, ಶಿಕ್ಷಕಿ ಕುಮುದಾ ಮತ್ತು ಸುಜಾತರ ಕೊಲೆ ಪ್ರಕರಣಗಳು ಅಮಾನವೀಯವಾದ ಘಟನೆಯಾಗಿದೆ. ಇಂತಹ ಘಟನೆಗಳು ಪುನರಾವರ್ತನೆಯಾಗದಂತೆ ದೂರಪ್ರದೇಶದ ಶಾಲೆಗಳಲ್ಲಿ ಕಾರ್ಯನಿರ್ವಹಿಸುವ ಶಿಕ್ಷಕ ಶಿಕ್ಷಕಿಯರ ಅನುಕೂಲಕ್ಕಾಗಿ ವಸತಿಗೃಹಗಳನ್ನ ನಿರ್ಮಾಣ ಮಾಡಬೇಕು. ಶಿಕ್ಷಕಿಯರು ಹತ್ತಿರದ ಸ್ಥಳಗಳಲ್ಲಿ ಕಾರ್ಯನಿರ್ವಹಿಸುವಂತೆ ಅವಕಾಶ ನೀಡಬೇಕು ಹಾಗೂ ವರ್ಗಾವಣೆ ನೀತಿಯನ್ನ ಸಡಿಲಗೊಳಿಸಿ ಶಿಕ್ಷಕರಿಗೆ ಅನುಕೂಲ ಮಾಡಿಕೊಡಬೇಕಾದ ಅನಿವಾರ್ಯತೆ ಇದೆ ಎಂದರು.
ಮಾತೃ ಪ್ರೀತಿ ಕಳೆದುಕೊಂಡ ಕುಮುದಾರ ಮಕ್ಕಳಿಗೆ ಸರ್ಕಾರದ ವತಿಯಿಂದ ಒಂದು ಲಕ್ಷ ರು. ಪರಿಹಾರ ಬಿಡುಗಡೆ ಮಾಡಿಸಲಾಗಿದೆ. ವೈಯುಕ್ತಿಕವಾಗಿ ಚುನಾವಣೆ ಕಳೆದ ನಂತರ ಮಕ್ಕಳ ಹೆಸರಿನಲ್ಲಿ ತಲಾ 25 ಸಾವಿರ ಹಣ ಠೇವಣಿ ಇಡುತ್ತೇನೆಂದು ಪುಟ್ಟಣ್ಣ ಹೇಳಿದರು.
ಈ ಸಂಧರ್ಭದಲ್ಲಿ ತಾಲ್ಲೂಕ್ ಶಿಕ್ಷಣಾಧಿಕಾರಿ ಎಂ.ಪಿ.ಮಾದೇಗೌಡ, ಸಮನ್ವಯಾಧಿಕಾರಿ ಬಿ.ಸೋಮಲಿಂಗಯ್ಯ, ಪ್ರೌಢಶಾಲಾಶಿಕ್ಷಕರ ಸಂಘದ ಬೈರಲಿಂಗಯ್ಯ, ಉಪಾಧ್ಯಕ್ಷ ಟಿ.ಸಿ.ಕೆ.ರಾಜು, ತಾಲ್ಲೂಕ್ ಕಾರ್ಯದರ್ಶಿ ಜಯಣ್ಣ, ಶಿಕ್ಷಕರಸಂಘದ ಮಹಾಲಿಂಗಯ್ಯ, ಮೃತಶಿಕ್ಷಕಿ ಕುಮುದಾರ ಪತಿ ಅಪ್ಪಾಜಿ, ತಾಯಿ ಗೌರಮ್ಮ, ತಂಗಿ ಗೀತಾ, ಮಕ್ಕಳಾದ ಸ್ಪೂರ್ತಿ ಮತ್ತು ಉಜ್ವಲ್ ಹಾಜರಿದ್ದರು.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications