ಶಿವಮೊಗ್ಗದಲ್ಲಿ ಭಾರೀ ಮೊತ್ತದ ಅಕ್ರಮ ಸ್ಪಿರಿಟ್ ವಶ
ಶಿವಮೊಗ್ಗ, ಆ. 6 : ಮಧ್ಯಪ್ರದೇಶದ ಇಂದೋರ್ನಿಂದ ಮದ್ಯಸಾರ ತುಂಬಿದ ಕ್ಯಾನ್ಗಳನ್ನು ಅಕ್ರಮವಾಗಿ ಶಿವಮೊಗ್ಗಕ್ಕೆ ಸಾಗಿಸುತ್ತಿದ್ದ ಭಾರೀ ವಾಹನವೊಂದನ್ನು ಶಿವಮೊಗ್ಗ ಅಬಕಾರಿ ಜಾರಿ ಮತ್ತು ಲಾಟರಿ ನಿಷೇಧ ವಿಭಾಗದ ವಿಶೇಷ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಎಸ್.ಕೆ.ಪ್ರಹ್ಲಾದ್ ನೇತೃತ್ವದ ತಂಡ ಸಾಹಸ ಮೆರೆದು ಬಲೆಗೆ ಬೀಳಿಸಿಕೊಂಡಿದೆ. ಮೂವರನ್ನು ಬಂಧಿಸಲಾಗಿದ್ದು, 24 ಲಕ್ಷ ರೂ. ಮೌಲ್ಯದ ಅಕ್ರಮ ಮದ್ಯಸಾರ ಹಾಗೂ ಕಾರ್ಗೋಕಂಟೈನರ್ ವಾಹನವೊಂದನ್ನು ವಶಪಡಿಸಿಕೊಳ್ಳಲಾಗಿದೆ.
ಇಲಾಖೆಯ ಐಜಿಪಿ ಮತ್ತು ಎಸ್ಪಿಯವರ ಆದೇಶದ ಮೇರೆಗೆ ಎಸ್.ಕೆ.ಪ್ರಹ್ಲಾದ್ ಅವರ ತಂಡ ಹೊಂಚು ಹಾಕಿ, ಹೊಳೆಹೊನ್ನೂರು ಕಡೆಯಿಂದ ಶಿವಮೊಗ್ಗದತ್ತ ಬರುತ್ತಿದ್ದ ಕಾರ್ಗೋಕಂಟೈನರ್ ವಾಹನವನ್ನು ಶಿವಮೊಗ್ಗ ರೈಲ್ವೇ ಗೇಟ್ ಸಮೀಪ ನಿಲ್ಲಿಸಿ ಸುತ್ತುವರೆಯಿತು. ಮೂವರು ಆರೋಪಿಗಳಾದ ಇಂದೋರಿನ ವಾಸಿಗಳಾದ ಚಾಲಕ ರಾಮ್ ಆಸರೆ ಪಾಂಡೆ, ಕ್ಲೀನರ್ ಸೆಲ್ವಿನ್ ಹಾಗೂ ಶಿವಮೊಗ್ಗ ಸವಾರ್ಲೈನ್ ರಸ್ತೆಯ ವಾಸಿ ಶಿವಾನಂದನನ್ನು ಬಂಧಿಸಲಾಯಿತು.
ವಾಹನವನ್ನು ಪರಿಶೀಲಿಸಿದಾಗ 35 ಲೀಟರ್ ಸಾಮರ್ಥ್ಯದ ಒಟ್ಟು 172 ಬಿಳಿ ಕ್ಯಾನ್ಗಳು ದೊರೆತವು. 172 ಕ್ಯಾನ್ಗಳಲ್ಲಿದ್ದ ಒಟ್ಟು 6020 ಲೀಟರ್ ಸ್ಪಿರಿಟ್ ವಶಪಡಿಸಿಕೊಳ್ಳಲಾಯಿತು. ಎಸ್.ಕೆ.ಪ್ರಹ್ಲಾದ್ರವರ ತಂಡದೊಂದಿಗೆ ಚಿತ್ರದುರ್ಗದ ಅಬಕಾರಿ ಜಾರಿ ಮತ್ತು ಲಾಟರಿ ನಿಷೇಧ ದಳದ ವಿಶೇಷ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಹಾಗೂ ಸಿಬ್ಬಂದಿಗಳು ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ಎಸ್.ಕೆ.ಪ್ರಹ್ಲಾದ್ರವರ ಈ ಸಾಹಸವನ್ನು ಇಲಾಖೆಯ ಹಿರಿಯ ಅಧಿಕಾರಿಗಳು ಪ್ರಶಂಸಿಸಿದ್ದಾರೆ.
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications