ಶಿವಮೊಗ್ಗದಲ್ಲಿ ಭಾರೀ ಮೊತ್ತದ ಅಕ್ರಮ ಸ್ಪಿರಿಟ್ ವಶ
ಶಿವಮೊಗ್ಗ, ಆ. 6 : ಮಧ್ಯಪ್ರದೇಶದ ಇಂದೋರ್ನಿಂದ ಮದ್ಯಸಾರ ತುಂಬಿದ ಕ್ಯಾನ್ಗಳನ್ನು ಅಕ್ರಮವಾಗಿ ಶಿವಮೊಗ್ಗಕ್ಕೆ ಸಾಗಿಸುತ್ತಿದ್ದ ಭಾರೀ ವಾಹನವೊಂದನ್ನು ಶಿವಮೊಗ್ಗ ಅಬಕಾರಿ ಜಾರಿ ಮತ್ತು ಲಾಟರಿ ನಿಷೇಧ ವಿಭಾಗದ ವಿಶೇಷ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಎಸ್.ಕೆ.ಪ್ರಹ್ಲಾದ್ ನೇತೃತ್ವದ ತಂಡ ಸಾಹಸ ಮೆರೆದು ಬಲೆಗೆ ಬೀಳಿಸಿಕೊಂಡಿದೆ. ಮೂವರನ್ನು ಬಂಧಿಸಲಾಗಿದ್ದು, 24 ಲಕ್ಷ ರೂ. ಮೌಲ್ಯದ ಅಕ್ರಮ ಮದ್ಯಸಾರ ಹಾಗೂ ಕಾರ್ಗೋಕಂಟೈನರ್ ವಾಹನವೊಂದನ್ನು ವಶಪಡಿಸಿಕೊಳ್ಳಲಾಗಿದೆ.
ಇಲಾಖೆಯ ಐಜಿಪಿ ಮತ್ತು ಎಸ್ಪಿಯವರ ಆದೇಶದ ಮೇರೆಗೆ ಎಸ್.ಕೆ.ಪ್ರಹ್ಲಾದ್ ಅವರ ತಂಡ ಹೊಂಚು ಹಾಕಿ, ಹೊಳೆಹೊನ್ನೂರು ಕಡೆಯಿಂದ ಶಿವಮೊಗ್ಗದತ್ತ ಬರುತ್ತಿದ್ದ ಕಾರ್ಗೋಕಂಟೈನರ್ ವಾಹನವನ್ನು ಶಿವಮೊಗ್ಗ ರೈಲ್ವೇ ಗೇಟ್ ಸಮೀಪ ನಿಲ್ಲಿಸಿ ಸುತ್ತುವರೆಯಿತು. ಮೂವರು ಆರೋಪಿಗಳಾದ ಇಂದೋರಿನ ವಾಸಿಗಳಾದ ಚಾಲಕ ರಾಮ್ ಆಸರೆ ಪಾಂಡೆ, ಕ್ಲೀನರ್ ಸೆಲ್ವಿನ್ ಹಾಗೂ ಶಿವಮೊಗ್ಗ ಸವಾರ್ಲೈನ್ ರಸ್ತೆಯ ವಾಸಿ ಶಿವಾನಂದನನ್ನು ಬಂಧಿಸಲಾಯಿತು.
ವಾಹನವನ್ನು ಪರಿಶೀಲಿಸಿದಾಗ 35 ಲೀಟರ್ ಸಾಮರ್ಥ್ಯದ ಒಟ್ಟು 172 ಬಿಳಿ ಕ್ಯಾನ್ಗಳು ದೊರೆತವು. 172 ಕ್ಯಾನ್ಗಳಲ್ಲಿದ್ದ ಒಟ್ಟು 6020 ಲೀಟರ್ ಸ್ಪಿರಿಟ್ ವಶಪಡಿಸಿಕೊಳ್ಳಲಾಯಿತು. ಎಸ್.ಕೆ.ಪ್ರಹ್ಲಾದ್ರವರ ತಂಡದೊಂದಿಗೆ ಚಿತ್ರದುರ್ಗದ ಅಬಕಾರಿ ಜಾರಿ ಮತ್ತು ಲಾಟರಿ ನಿಷೇಧ ದಳದ ವಿಶೇಷ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಹಾಗೂ ಸಿಬ್ಬಂದಿಗಳು ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ಎಸ್.ಕೆ.ಪ್ರಹ್ಲಾದ್ರವರ ಈ ಸಾಹಸವನ್ನು ಇಲಾಖೆಯ ಹಿರಿಯ ಅಧಿಕಾರಿಗಳು ಪ್ರಶಂಸಿಸಿದ್ದಾರೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications