ಅರ್ಜಿ ವಾಪಸಿಗೆ ಸೂಕ್ತ ಕ್ರಮ : ಕರುಣಾನಿಧಿ
ಬೆಂಗಳೂರು, ಆ. 6 : ಕನ್ನಡ ಭಾಷೆಗೆ ನೀಡಿದ ಶಾಸ್ತ್ರೀಯ ಸ್ಥಾನಮಾನದ ವಿರುದ್ದ ತಮಿಳುನಾಡು ನ್ಯಾಯಾಲಯದಲ್ಲಿ ಸಲ್ಲಿಕೆಯಾಗಿರುವ ತಕರಾರು ಅರ್ಜಿಯನ್ನು ವಾಪಸ್ ಪಡೆಯಲು ಸೂಕ್ತ ಕ್ರಮ ತೆಗೆದುಕೊಳ್ಳುವುದಾಗಿ ತಮಿಳುನಾಡು ಮುಖ್ಯಮಂತ್ರಿ ಕರುಣಾನಿಧಿ ಭರವಸೆ ನೀಡಿದ್ದಾರೆ. ಪ್ರತಿಮೆ ಅನಾವರಣಕ್ಕೆ ಆಹ್ವಾನ ನೀಡಲು ಹೋಗಿದ್ದ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಕರುಣಾ ಈ ಮಾತುಕೊಟ್ಟಿದ್ದಾರೆ.
ತಮಿಳುನಾಡು ವಕೀಲ ಗಾಂಧಿ ಎಂಬವರು ರಿಟ್ ಅರ್ಜಿ ಸಲ್ಲಿಸಿದ್ದಾರೆ. ಅವರು ಕಾಂಗ್ರೆಸ್ ಪಕ್ಷದ ಬೆಂಬಲಿಗರು. ಇದು ನಮ್ಮ ಸರಕಾರಕ್ಕೂ ಇರಿಸುಮುರುಸು ಉಂಟುಮಾಡಿದೆ. ಗಾಂಧಿ ಮನವೊಲಿಸಿ ಅರ್ಜಿ ವಾಪಾಸ್ ತೆಗೆದು ಕೊಳ್ಳಲು ಸೂಕ್ತ ವ್ಯವಸ್ಥೆ ಮಾಡುವುದಾಗಿ ಹೇಳಿದ್ದಾರೆ. ಕನ್ನಡಿಗರು ಮತ್ತು ತಮಿಳರು ತಮ್ಮ ವೈಮನಸ್ಸು ಮೆರೆತು ಸಹೋದರರಂತೆ ಬಾಳಬೇಕು. ಎರಡೂ ರಾಜ್ಯಗಳ ನಡುವೆ ಎದುರಾಗಿರುವ ಸಮಸ್ಯೆಗಳನ್ನು ಮಾತುಕತೆಯಿಂದ ಬಗೆಹರಿಸಿಕೊಳ್ಳೋಣ ಎನ್ನುವ ಅಭಿಪ್ರಾಯ ವ್ಯಕ್ತಪಡಿಸಿದರು.
ಕೆಲವೊಂದು ಸಮಸ್ಯೆಗಳು ಕಾಮರಾಜ್ ಹಾಗೂ ನಿಜಲಿಂಗಪ್ಪ ಅವರ ಕಾಲದಿಂದಲೂ ಮುಂದುವರಿದುಕೊಂಡು ಬಂದಿದೆ. ಬಗೆಹರಿಯದ ಸಮಸ್ಯೆಗಳಿಗೆ ಸೌಹಾರ್ದಯುತ ಪರಿಹಾರ ಕಂಡುಕೊಳ್ಳೋಣ. ಚೆನ್ನೈ ಮತ್ತು ಬೆಂಗಳೂರಿನಲ್ಲಿ ನಡೆಯುವ ಪ್ರತಿಮೆ ಅನಾವರಣ ಕಾರ್ಯಕ್ರಮ ಸರಕಾರದ ಕಾರ್ಯಕ್ರಮವಾಗಿರುವುದರಿಂದ ಅಚ್ಚುಕಟ್ಟಾಗಿ ನೆರವೇರಿಸಬೇಕು. ಯಾವ ಭಾಷಿಗರ ಭಾವನೆಗೂ ಧಕ್ಕೆಯಾಗದಂತೆ ಎಚ್ಚರ ವಹಿಸಬೇಕು ಎಂದು ಹೇಳಿಕೆ ನೀಡಿದ್ದಾರೆ. ಮಾತುಕತೆ ವೇಳೆ ಸಚಿವರಾದ ಆರ್ ಅಶೋಕ್, ಕಟ್ಟಾ ಸುಬ್ರಮಣ್ಯ ನಾಯ್ಡು, ಬಸವರಾಜ್ ಬೊಮ್ಮಾಯಿ ಮತ್ತು ಕೇಂದ್ರ ಸಚಿವ ದಯಾನಿಧಿ ಮಾರನ್ ಹಾಜರಿದ್ದರು.
(ದಟ್ಸ್ ಕನ್ನಡ ವಾರ್ತೆ)
-
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್ -
Amulya: ಕಿರುತೆರೆಗೆ ಮರಳಿದ 'ಕಮಲಿ' ಖ್ಯಾತಿಯ ಅಮೂಲ್ಯ: 'ಮಹಾಲಕ್ಷ್ಮಿ ಮದುವೆ' ಮೂಲಕ ಹೊಸ ಪಯಣ -
Kannada Books: ಓದುಗರಷ್ಟು ಪ್ರಾಮಾಣಿಕತೆ ಪುಸ್ತಕ ಮಳಿಗೆ ಮಾಡಿರುವವರಿಗಿಲ್ಲ: ರಾಜೇಂದ್ರ ಪ್ರಸಾದ್ ಬರಹ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ











Click it and Unblock the Notifications